Shimoga; ಆಸ್ತಿ ವಿಚಾರದ ಗಲಾಟೆ: ಚರಂಡಿಗೆ ಬಿದ್ದು ವ್ಯಕ್ತಿ ಸಾವು
Team Udayavani, Jul 30, 2023, 12:10 PM IST
ಶಿವಮೊಗ್ಗ: ಆಸ್ತಿ ವಿಚಾರದಲ್ಲಿ ನಡೆದ ತಳ್ಳಾಟ, ನೂಕಾಟದಲ್ಲಿ ವ್ಯಕ್ತಿಯೊಬ್ಬ ಚರಂಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಇಲ್ಲಿನ ವಿದ್ಯಾನಗರದಲ್ಲಿ ನಡೆದಿದೆ.
ವಿದ್ಯಾನಗರದ ಐದನೇ ತಿರುವಿನಲ್ಲಿ ಬರುವ ಸುಭಾಷ್ ನಗರದಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಜ್ಞಾನೇಶ್ವರ್ ಎಂಬ 43 ವರ್ಷದ ವ್ಯಕ್ತಿ ಸಾವನ್ನಪ್ಪಿದ್ಧಾನೆ.
ಇದನ್ನೂ ಓದಿ:INDvsWI: ಎರಡನೇ ಪಂದ್ಯಕ್ಕೆ ರೋಹಿತ್- ವಿರಾಟ್ ಹೊರಗಿಟ್ಟಿದ್ದು ಯಾಕೆ? ಉತ್ತರಿಸಿದ ದ್ರಾವಿಡ್
ಜ್ಞಾನೇಶ್ವರ್ ಬ್ಯಾಗ್ ರಿಪೇರಿ ಕೆಲಸ ಮಾಡುತ್ತಿದ್ದು, ಶನಿವಾರ ರಾತ್ರಿ ಅತ್ತೆ ಮನೆಗೆ ತೆರಳಿದ್ದ. ಆ ಮನೆ ತನಗೆ ಸೇರಬೇಕು ಎಂದು ಆತನ ಹೆಂಡತಿಯ ತಾಯಿಯ ತಮ್ಮನ ಜೊತೆಗೆ ಮಾತುಕತೆ ಆರಂಭಿಸಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಕಿತ್ತಾಟ ನಡೆದು ತಳ್ಳಾಟ ಆಗಿದೆ. ಈ ವೇಳೆ ಜ್ಞಾನೇಶ್ವರ್ ಮನೆ ಎದುರಿಗಿದ್ದ ಚರಂಡಿಗೆ ಬಿದ್ದಿದ್ದಾನೆ. ಅಲ್ಲಿಯೇ ಸಾವನ್ನಪ್ಪಿದ್ಧಾನೆ. ಕುಡಿದ ಅಮಲಿನಲ್ಲಿ ನಡೆದ ಘಟನೆಯಲ್ಲಿ ಜ್ಞಾನೇಶ್ವರ್ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಭಾನುವಾರ ಬೆಳಗ್ಗೆ ಸ್ಥಳೀಯರು ಚರಂಡಿಯಲ್ಲಿ ಮೃತದೇಹ ಇರುವುದು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕೋಟೆ ಪೊಲೀಸ್ ಸ್ಟೇಷನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ