ಸವಾರರಿಗೆ ಬಿಸಿ ಮುಟ್ಟಿಸಿದ ಡಿಸಿ-ಎಸ್ಪಿ
ಬೀದಿಗಿಳಿದು ವಾಹನ ತಪಾಸಣೆಗೆ ಮುಂದಾದ ಜಿಲ್ಲಾಧಿಕಾರಿ-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು
Team Udayavani, Apr 18, 2020, 12:29 PM IST
ಶಿವಮೊಗ್ಗ: ಡಿಸಿ-ಎಸ್ಪಿ ಅನಗತ್ಯವಾಗಿ ರಸ್ತೆಗಳಿದ ವಾಹನಗಳ ತಪಾಸಣೆ ನಡೆಸಿದರು
ಶಿವಮೊಗ್ಗ: ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ನಗರದಲ್ಲಿ ರಸ್ತೆ ಸಂಚಾರಕ್ಕೆ ನಿರ್ಬಂಧವಿಸಿದ್ದರೂ, ಅನಗತ್ಯವಾಗಿ ರಸ್ತೆಗಿಳಿದಿದ್ದ ವಾಹನ ಸವಾರರಿಗೆ ಸ್ವತಃ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶುಕ್ರವಾರ ಬಿಸಿ ಮುಟ್ಟಿಸಿದರು.
ನಗರದ ಅಲ್ಕೋಳಾ ಸರ್ಕಲ್ನಲ್ಲಿ ದಿಢೀರ್ ತಪಾಸಣೆ ಆರಂಭಿಸಿದ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರು, ಪ್ರತಿಯೊಂದು ವಾಹನವನ್ನು ನಿಲ್ಲಿಸಿ ಮನೆ ಬಿಟ್ಟು ಹೊರಗೆ ಬಂದಿರುವುದರ ಉದ್ದೇಶ ಪ್ರಶ್ನಿಸಿದರು. ಆಸ್ಪತ್ರೆ, ಮೆಡಿಕಲ್, ಕೃಷಿ ಚಟುವಟಿಕೆ, ಸ್ಥಳೀಯವಾಗಿ ಸಾಮಾನು ಖರೀದಿಯಂತಹ ಅತ್ಯವಶ್ಯಕ ಕೆಲಸಗಳಿಗೆ ಬಂದಿರುವವರಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಯಿತು.
ಹಾಲಿನ ವಾಹನಗಳು, ಗೂಡ್ಸ್ ವಾಹನಗಳಿಗೆ ಸಂಚರಿಸಲು ಬಿಡಲಾಯಿತು. ಅನಾವಶ್ಯಕವಾಗಿ ಹೊರಗೆ ಬಂದಂತಹವರ ವಾಹನಗಳನ್ನು ಜಪ್ತಿ ಮಾಡಿ ಎಚ್ಚರಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೋವಿಡ್ ವೈರಸ್ ಪ್ರಕರಣ ದಾಖಲಾಗಿಲ್ಲ ಎಂದರೆ ಸಂಚಾರ ನಿರ್ಬಂಧದಲ್ಲಿ ಸಡಿಲಿಕೆ ಮಾಡಲಾಗಿದೆ ಎಂದರ್ಥವಲ್ಲ. ಜನರು ತಮ್ಮ ಮನೆ ಬಳಿ ಇರುವ ಅಂಗಡಿಗಳಿಂದ ಮಾತ್ರ ಸಾಮಗ್ರಿಗಳನ್ನು ಖರೀದಿಸಬೇಕು. ನಗರದೆಲ್ಲೆಡೆ ತಿರುಗಾಡಲು ಯಾರಿಗೂ ಅವಕಾಶವಿಲ್ಲ.
ಆಸ್ಪತ್ರೆಗೆ ಬರುವವರು ಕುಟುಂಬದ ಇತರ ಸದಸ್ಯರನ್ನು ಕರೆ ತರಬಾರದು ಎಂದು ಎಚ್ಚರಿಕೆ ನೀಡಿದರು. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಅನಾವಶ್ಯಕವಾಗಿ ಹೊರಗೆ ಬರುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಪ್ರತಿ ದಿನ ತಾಲೂಕುಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ ಎಂದರು.
ಎಸ್ಪಿ ಕೆ.ಎಂ.ಶಾಂತರಾಜು ಮಾತನಾಡಿ, ವಾಹನಗಳನ್ನು ಸೀಮಿತ ಉದ್ದೇಶಕ್ಕಾಗಿ ಮಾತ್ರ ರಸ್ತೆಗಿಳಿಸಬಹುದಾಗಿದೆ. ಅನಾವಶ್ಯಕವಾಗಿ
ಓಡಾಡುವ ವಾಹನಗಳನ್ನು ಮುಟ್ಟುಗೋಲು ಹಾಕಲು ಸೂಚಿಸಲಾಗಿದ್ದು, ಜಿಲ್ಲೆಯಾದ್ಯಂತ ಲಾಕ್ಡೌನ್ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ