25ರಿಂದ ಕೋಟೆ ಮಾರಿಕಾಂಬಾ ಜಾತ್ರಾ ಮಹೋತ್ಸವ ಆರಂಭ


Team Udayavani, Feb 15, 2020, 5:34 PM IST

15-February-26

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬಾ ಸೇವಾ ಸಮಿತಿ ವತಿಯಿಂದ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವವನ್ನು ಫೆ. 25ರಿಂದ 29ರವರೆಗೆ ಅದ್ಧೂರಿಯಾಗಿ ನಡೆಸಲು ದೇವಸ್ಥಾನ ಸಮಿತಿ ತೀರ್ಮಾನಿಸಿದೆ. ಈಗಾಗಲೇ ಸಕಲ ಸಿದ್ಧತೆ ನಡೆಸಿದೆ ಎಂದು ಮಾಜಿ ಮೇಯರ್‌ ಹಾಗೂ ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್‌.ಕೆ. ಮರಿಯಪ್ಪ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.25ರಂದು ಬೆಳಗ್ಗೆ 7 ಗಂಟೆಗೆ ಗಾಂಧಿ  ಬಜಾರ್‌ನಲ್ಲಿ ಶ್ರೀ ಅಮ್ಮನವರಿಗೆ ಪೂಜೆ ಆರಂಭಗೊಳ್ಳಲಿದೆ. ಅಂದು ರಾತ್ರಿ 9ಕ್ಕೆ ಗಾಂಧಿ  ಬಜಾರ್‌ನಿಂದ ಉತ್ಸವದೊಂದಿಗೆ ಗದ್ದುಗೆ ಪ್ರವೇಶವಾಗಲಿದೆ ಎಂದು ಹೇಳಿದರು.

ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಫೆ. 26 ರಿಂದ 29ರ ವರೆಗೆ ಪ್ರತಿದಿನ ಬೆಳಗ್ಗೆ 7ರಿಂದ ಹರಕೆ, ಪೂಜೆ, ಪ್ರಸಾದ ವಿನಿಯೋಗ ಇರುತ್ತದೆ. ಫೆ 28 ರಂದು ರಾತ್ರಿ 8 ಕ್ಕೆ ಮಹಾಮಂಗಳಾರತಿ ನಡೆಯಲಿದೆ ಎಂದರು. ಫೆ. 29ರ ರಾತ್ರಿ 8ಕ್ಕೆ ಶ್ರೀ ಅಮ್ಮನವರ ರಾಜಬೀದಿ ಉತ್ಸವದೊಂದಿಗೆ ವನ ಪ್ರವೇಶ ನಡೆಯಲಿದೆ. ಜಾತ್ರಾ ಮಹೋತ್ಸವದ ಪ್ರತಿ ದಿನ ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಕುಸ್ತಿ ಪಂದ್ಯಾವಳಿ: ಫೆ. 28ರಿಂದ ಮಾ. 1ರ ವರೆಗೆ ಪ್ರತಿದಿನ ಮಧ್ಯಾಹ್ನ 3 ಗಂಟೆಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದರು. ಮೂರು ದಿನ ರಾಜ್ಯಮಟ್ಟದ ಬಯಲು ಕುಸ್ತಿ ನಡೆಯಲಿದೆ. ರಾಜ್ಯ ಮತ್ತು ಹೊರ ರಾಜ್ಯದ ಪ್ರಸಿದ್ಧ ಪೈಲ್ವಾನರು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕುಸ್ತಿ ಪಂದ್ಯ ಗೆದ್ದ ಪೈಲ್ವಾನರಿಗೆ ಬೆಳ್ಳಿ ಗದೆ ಮತ್ತು 25 ಸಾವಿರ ರೂ. ಬಹುಮಾನ ನೀಡಲಾಗುವುದು ಎಂದರು.

ಸಕಲ ಸಿದ್ಧತೆ: ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಈಗಾಗಲೇ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ದೇವಸ್ಥಾನ ರಸ್ತೆಯಲ್ಲಿ ಯಾವುದೇ ಮಾರಾಟಕ್ಕೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂದರು. ಈ ಬಾರಿ ಎರಡು ಹೆಲಿಕ್ಯಾಪ್ಟರ್‌ ಕರೆಸಲು ಮಾತುಕತೆ ನಡೆದಿದೆ. ಹೆಲಿಕ್ಯಾಪ್ಟರ್‌ ಮೂಲಕ ನಗರದಲ್ಲಿನ ದೇವಸ್ಥಾನ ಗಳಿಗೆ ಭಕ್ತರಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ಅವಕಾಶ ಕಲ್ಪಿಸುವ ಉದ್ದೇಶವಿದೆ ಎಂದರು.

ಸಮಿತಿ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಮಾತನಾಡಿ, ಜಾತ್ರೆ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆ ಆಗಬಾರದು. ಹೀಗಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ, ಪೊಲೀಸ್‌ ಇಲಾಖೆ, ಮಹಾನಗರಪಾಲಿಕೆ, ವಿವಿದ ಸಂಘ- ಸಂಸ್ಥೆಗಳು ಸೇರಿದಂತೆ ಪ್ರತಿಯೊಬ್ಬರ ಸಹಕಾರ ಕೋರಲಾಗಿದೆ ಎಂದರು. ಜಾತ್ರೆ ಅಚ್ಚುಕಟ್ಟಾಗಿ ನೆರವೇರಲು 19 ಉಪ ಸಮಿತಿಗಳನ್ನು ರಚನೆ ಮಾಡಲಾಗಿದೆ. ಮಹಾನಗರ ಪಾಲಿಕೆಯೊಂದಿಗೆ ಸಭೆ ನಡೆಸಲಾಗಿದೆ. ಸಂಪೂರ್ಣ ಸಹಕಾರ ನೀಡುವುದಾಗಿ ಪಾಲಿಕೆಯ ಎಲ್ಲಾ ಸದಸ್ಯರು ಭರವಸೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್‌. ಈಶ್ವರಪ್ಪ ಅವರು ಸರ್ಕಾರದಿಂದ ಅನುದಾನ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ. ಬಂದೋಬಸ್ತ್ ಕಲ್ಪಿಸುವಂತೆ ಪೊಲೀಸ್‌ ಇಲಾಖೆಗೂ ಮನವಿ ಮಾಡಲಾಗಿದೆ ಎಂದರು.

ಸಿದ್ಧಗೊಳ್ಳುತ್ತಿರುವ ವಿಗ್ರಹ: ಜ. 21ರಂದು ಸಂಪ್ರದಾಯದಂತೆ ಮರ ತರಲಾಗಿದೆ. ಈಗಾಗಲೇ ಖ್ಯಾತ ಶಿಲ್ಪಿ ಶಿವಮೊಗ್ಗ ಕಾಶಿ ಅವರು ದೇವಿಯ ವಿಗ್ರಹ ಸಿದ್ಧಪಡಿಸುತ್ತಿದ್ದಾರೆ ಎಂದು ಹೇಳಿದರು. ಗೋಷ್ಠಿಯಲ್ಲಿ ಸಮಿತಿ ಉಪಾಧ್ಯಕ್ಷ ಉಮಾಪತಿ, ಕಾರ್ಯದರ್ಶಿ ಎಸ್‌.ಸಿ. ಲೋಕೇಶ್‌, ಸಹಕಾರ್ಯದರ್ಶಿ ಟಿ.ಎಸ್‌. ಚಂದ್ರಶೇಖರ್‌, ನಿರ್ದೇಶಕರಾದ ಶ್ರೀಧರಮೂರ್ತಿ, ವಿ. ರಾಜು, ಎಸ್‌.ಟಿ. ವಾಸುದೇವ್‌, ಸುಧೀರ್‌, ಎಂ. ಬಾಬು ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.