ಪಾಳು ಬಿದ್ದ ಹೈಟೆಕ್‌ ಶೌಚಾಲಯ

ನಗರ ಪ್ರದೇಶದಲ್ಲೇ ಸ್ವಚ್ಛತೆ ಮರೀಚಿಕೆ!ಉಪಯೋಗಕ್ಕೆ ಅನರ್ಹ

Team Udayavani, Feb 10, 2020, 1:19 PM IST

10-February-12

ಶಿವಮೊಗ್ಗ: ನಗರದ ಸ್ವಚ್ಛತೆ ದೃಷ್ಟಿಯಿಂದ  ಮಹಾನಗರ ಪಾಲಿಕೆಯು ಲಕ್ಷಾಂತರ ರೂ. ವೆಚ್ಚದಲ್ಲಿ ಕಟ್ಟಿದ ಬಹುತೇಕ ಶೌಚಾಲಯಗಳು ನಿರ್ವಹಣೆ ಇಲ್ಲದೆ ಪಾಳು ಬಿದ್ದಿವೆ.

ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಾನಾ ಹೆಸರುಗಳಲ್ಲಿ ನೂರಾರು ಯೋಜನೆಗಳನ್ನು ಘೋಷಿಸಿವೆ. ಆದರೂ, ನಗರ ಪ್ರದೇಶಗಳಲ್ಲೇ ಸ್ವಚ್ಛತೆ ಮರೀಚಿಕೆಯಾಗಿದೆ. ಅನುಪಯುಕ್ತ ಶೌಚಾಲಯಗಳಿಂದಾಗಿ ನಗರದಲ್ಲಿ ಬಯಲು ಬಹಿರ್ದೆಸೆ ಪ್ರವೃತ್ತಿ ಮುಂದುವರಿದಿದೆ.

ಶಿವಮೊಗ್ಗವನ್ನು ಬಯಲು ಶೌಚಾಲಯ ಮುಕ್ತ ನಗರವನ್ನಾಗಿ ಮಾಡುತ್ತೇವೆ ಎಂದು ಅಧಿಕಾರಿಗಳು ಹೇಳುತ್ತಾಲೇ ಬರುತ್ತಿದ್ದಾರೆ. ಆದರೆ, ಅವರ ಘೋಷಣೆಗಳು ಜಾರಿಗೆ ಬಾರದೆ ಒದ್ದಾಡುತ್ತಿವೆ. ಇನ್ನೊಂದು ಕಡೆ ಮಹಾನಗರ ಪಾಲಿಕೆಯಿಂದ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಿದ್ದರೂ ಅವುಗಳ ನಿರ್ವಹಣೆಗೆ ಹೆಣಗಾಡುತ್ತಿದೆ. ಹೀಗಾಗಿ ನಗರದಲ್ಲಿರುವ ಬಹುತೇಕ ಸಾರ್ವಜನಿಕ ಶೌಚಾಲಯಗಳು ಇದ್ದು ಇಲ್ಲದಂತಾಗಿವೆ.

ಉಪಯೋಗಕ್ಕೆ ಅನುಪಯುಕ್ತ: ನಗರದಲ್ಲಿ ಒಟ್ಟು 20 ಸಾರ್ವಜನಿಕ ಶೌಚಾಲಯಗಳು, 10 ಸಮುದಾಯ ಶೌಚಾಲಯಗಳಿವೆ. ಇವುಗಳಲ್ಲಿ ಬುಹುತೇಕ ಶೌಚಾಲಯಗಳು ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿದ್ದು ಉಪಯೋಗಕ್ಕೆ ಅನುಪಯುಕ್ತವಾಗಿವೆ. ಆ ಪೈಕಿ ಕೆಲವು ಕಾರ್ಯ ನಿರ್ವಹಿಸುತ್ತಿಲ್ಲ. ಒಟ್ಟೆ ಮಾರುಕಟ್ಟೆ, ಲಷ್ಕರ್‌ ಮೊಹಲ್ಲಾದ ಮೀನು ಮಾರುಕಟ್ಟೆ, ಗಾಂ ಧಿ ಬಜಾರ್‌ನ ಸ್ವಾಗತ ಕ್ಯಾಂಟೀನ್‌, ಹೂವಿನ ಮಾರುಕಟ್ಟೆ ಪಕ್ಕದಲ್ಲಿರುವ ಶೌಚಾಲಯ, ಗಾಂಧಿ ಬಜಾರ್‌ ತರಕಾರಿ ಮಾರುಕಟ್ಟೆ, ಕೋಟೆ ರಸ್ತೆಯ ಭೀಮೇಶ್ವರ ದೇವಸ್ಥಾನ ಎದುರು ಭಾಗದಲ್ಲಿರುವ ಶೌಚಾಲಯ, ನೆಹರೂ ರಸ್ತೆ ಜೆ.ಎಚ್‌. ಪಟೇಲ್‌ ಕಾಂಪ್ಲೆಕ್ಸ್‌ ಬಳಿಯ ಶೌಚಾಲಯ, ಜಯನಗರ 1ನೇ ಕ್ರಾಸ್‌ ಶೌಚಾಲಯ, ಮೆಗ್ಗಾನ್‌ ಆಸ್ಪತ್ರೆ ಕಾಂಪೌಂಡ್‌ನ‌ಲ್ಲಿರುವ ಶೌಚಾಲಯ, ಜೈಲ್‌ ಕಾಂಪೌಂಡ್‌ ಪಕ್ಕದಲ್ಲಿರುವ ಶೌಚಾಲಯ, ಖಾಸಗಿ ಬಸ್‌ ನಿಲ್ದಾಣ ಹಿಂಭಾಗದಲ್ಲಿರುವ ಶೌಚಾಲಯ, ಉಷಾ ನರ್ಸಿಂಗ್‌ ಹೋಂ ಮುಂಭಾಗದ ಕನ್ಸರ್ವೆನ್ಸಿ ರಸ್ತೆಯಲ್ಲಿರುವ ಶೌಚಾಲಯ, ಗೋಪಾಳ ಬಸ್‌ ನಿಲ್ದಾಣದಲ್ಲಿರುವ ಶೌಚಾಲಯ, ಗೋಪಿ ವೃತ್ತ ಬಳಿ ದೇವರಾಜ್‌ ಅರಸ್‌ ವಾಣಿಜ್ಯ ಸಂಕೀರ್ಣದಲ್ಲಿರುವ ಇ-ಟಾಯ್ಲೆಟ್‌, ದಿರ್ಗಿಗುಡಿ ಮಾಕ್ಸ್‌ ಆಸ್ಪತ್ರೆ ಎದುರು ಕನ್ಸರ್ವೆನ್ಸಿಯಲ್ಲಿರುವ ಶೌಚಾಲಯ, ನೆಹರು ಕ್ರೀಡಾಂಗಣದ ಪುರುಷರ ಹಾಗೂ ಮಹಿಳಾ ಶೌಚಾಲಯಗಳು ನಿರ್ಹಹಣೆ ಸಮಸ್ಯೆಯಿಂದ ಇದ್ದೂ ಇಲ್ಲದಂತಾಗಿವೆ.

ಇವುಗಳಲ್ಲಿ ಕೆಲವು ಶೌಚಾಲಯಗಳಲ್ಲಿ ನೀರಿನ ಸಮಸ್ಯೆ ಇದ್ದರೆ, ಇನ್ನು ಹಲವೆಡೆ ನೀರಿದ್ದರೂ ಬಕೆಟ್‌ಗಳೇ ಮುರಿದು ಹೋಗಿವೆ. ಮೂತ್ರ ವಿಸರ್ಜನೆಗೆ ಹಾಕಿದ್ದ ಬೇಸಿನ್‌ಗಳೂ ಕಳಚಿ ಬಿದ್ದಿವೆ. ದುರ್ನಾತದ ನಡುವೆಯೂ ಹೇಗೋ ಮೂಗು ಮುಚ್ಚಿಕೊಂಡು ಒಳಗೆ ಹೋದರೆ, ಗೋಡೆಗಳ ಮೇಲೆ ಬರೆದಂತಹ ಆಕ್ಷೇಪಾರ್ಹ ಬರಹಗಳು ಎಂತಹವರನ್ನೂ ಮುಜುಗರಕ್ಕೀಡು ಮಾಡುತ್ತವೆ.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.