ಪಾಲಿಕೆ ಚುನಾವಣೆಗೆ ರೋಚಕ ಟ್ವಿಸ್ಟ್‌

ತಮ್ಮ ವಿರುದ್ಧ ದಾಖಲಾದ ದೂರುಗಳಿಂದ ಮೇಯರ್‌ ಸ್ಥಾನದ ಆಕಾಂಕ್ಷಿಗಳಿಗೆ ಭ್ರಮ ನಿರಸನ

Team Udayavani, Jan 24, 2020, 1:32 PM IST

24-Jnauary-13

ಶಿವಮೊಗ್ಗ: ಮಹಾನಗರ ಪಾಲಿಕೆ ಚುನಾವಣೆ ರೋಚಕ ಟ್ವಿಸ್ಟ್‌ ಪಡೆದಿದ್ದು, ಮೀಸಲಾತಿ ಸಂಬಂಧ ಇಬ್ಬರು ಮೇಯರ್‌ ಆಕಾಂಕ್ಷಿಗಳ ವಿರುದ್ಧ ದಾಖಲಾಗಿರುವ ದೂರುಗಳು ಪಟ್ಟದ ಆಸೆಯಲ್ಲಿದ್ದ ಆಕಾಂಕ್ಷಿಗಳಿಗೆ ಭ್ರಮ ನಿರಸನ ಮೂಡಿಸಿವೆ.

ಮೇಯರ್‌ ಆಕಾಂಕ್ಷಿಗಳಾದ ಸುವರ್ಣ ಶಂಕರ್‌ ಮೀಸಲಾತಿ ಕಳೆದುಕೊಂಡಿದ್ದಾರೆ. ಅನಿತಾ
ರವಿಶಂಕರ್‌ ಭವಿಷ್ಯ ಡೋಲಾಯಮಾನವಾಗಿದೆ. 35 ವಾರ್ಡ್‌ಗಳ ಪಾಲಿಕೆಯಲ್ಲಿ 20 ಸ್ಥಾನ
ಪಡೆಯುವ ಮೂಲಕ ಬಿಜೆಪಿ ಅಧಿಕಾರಕ್ಕೇರಿತ್ತು. ಮೊದಲ ಅವ ಧಿಯಲ್ಲಿ ಎಸ್‌ಸಿ ಮಹಿಳಾ
ಮೀಸಲಾತಿಯಲ್ಲಿ ಲತಾ ಗಣೇಶ್‌, ಸಾಮಾನ್ಯ ಮೀಸಲಾತಿಯಲ್ಲಿ ಚನ್ನಬಸಪ್ಪ ಉಪ ಮೇಯರ್‌ ಆಗಿ ಆಯ್ಕೆಯಾಗಿದ್ದರು. ಎರಡನೇ ಅವಧಿಗೆ ಬಿಸಿಎಂ “ಬಿ’ ಮಹಿಳೆಗೆ ಮೀಸಲಾತಿ ನಿಗದಿಯಾಗಿದ್ದು, ಬಿಜೆಪಿಯ ಇಬ್ಬರು ಆಕಾಂಕ್ಷಿಗಳು ಕಣದಲ್ಲಿದ್ದರು.

9ನೇ ವಾರ್ಡಿನ ಸುವರ್ಣ ಶಂಕರ್‌, 7ನೇ ವಾರ್ಡಿನಿಂದ ಗೆದ್ದ ಅನಿತಾ ರವಿಶಂಕರ್‌ ಮೇಯರ್‌
ಸ್ಥಾನಕ್ಕೆ ತೀವ್ರ ಪೈಪೋಟಿ ಒಡ್ಡಿದ್ದರು. ಮೂರು ಬಾರಿ ಗೆದ್ದ ಸುವರ್ಣ ಶಂಕರ್‌, ಮೊದಲನೇ ಬಾರಿ ಗೆದ್ದಿರುವ ಅನಿತಾ ರವಿಶಂಕರ್‌ಗೆ ತೀವ್ರ ಪೈಪೋಟಿ ನೀಡಿದ್ದರು. ಬದಲಾದ ಸನ್ನಿವೇಶದಲ್ಲಿ ಇಬ್ಬರ ಮೀಸಲಾತಿ ವಿಷಯ ಈಗ ಉಪ ವಿಭಾಗಾಧಿಕಾರಿ ಕಚೇರಿ ಮೆಟ್ಟಿಲೇರಿದೆ.

ಸುವರ್ಣ ಶಂಕರ್‌ ಕಣದಿಂದ ಔಟ್‌: ಅನಿತಾ ರವಿಶಂಕರ್‌ ಅವರು ತೆರಿಗೆದಾರರಾಗಿದ್ದು
ಅವರು ಜಾತಿ ಪ್ರಮಾಣ ಪತ್ರಕ್ಕೆ ಅರ್ಹರಲ್ಲ ಎಂದು ಖಾಸಗಿ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದರು. ಅದೇ ರೀತಿ ಸುವರ್ಣ ಶಂಕರ್‌ ಅವರು ಸಾಮಾನ್ಯ ಮೀಸಲಾತಿಯಲ್ಲಿ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದು ಅವರು ಕೂಡ ತೆರಿಗೆದಾರರಾಗಿದ್ದಾರೆ. ಅವರಿಗೆ ಬಿಸಿಎಂ “ಬಿ’ ಮೀಸಲಾತಿ ಅನ್ವಯವಾಗುವುದಿಲ್ಲ ಎಂದು ದೂರು ದಾಖಲಾಗಿತ್ತು. ಎರಡೂ ದೂರುಗಳ ವಿಚಾರಣೆ ನಡೆಸಿರುವ ಅಧಿ ಕಾರಿಗಳು ಸುವರ್ಣ ಶಂಕರ್‌ ಅವರ ಈಚೆಗೆ ಪಡೆದಿರುವ ಜಾತಿ ಪ್ರಮಾಣ ಪತ್ರವನ್ನು ರದ್ದು ಪಡಿಸಿದ್ದಾರೆ.

ಇದರಿಂದ ಅವರ ಮೇಯರ್‌ ಆಸೆ ಗಗನ ಕುಸುಮವಾದಾಂತಾಗಿದೆ. ಅಧಿಕಾರಿಗಳ ಪ್ರಕಾರ ಸುವರ್ಣ ಶಂಕರ್‌ ಅವರು ಸಾಮಾನ್ಯ ಮೀಸಲಾತಿಯಲ್ಲಿ ಗೆದ್ದಿರುವ ಕಾರಣ ಅವರು
ಈಗ ಬಿಸಿಎಂ “ಬಿ’ ಪ್ರಮಾಣ ಪತ್ರಕ್ಕೆ ಅರ್ಹರಾಗುವುದಿಲ್ಲ ಎಂದು ಮೂಲಗಳು
ಸ್ಪಷ್ಟಪಡಿಸಿವೆ. ಇನ್ನು ಅನಿತಾ ರವಿಶಂಕರ್‌ ಅವರು ಬಿಸಿಎಂ “ಬಿ’ ಮೀಸಲಾತಿಯಲ್ಲೇ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿರುವುದರಿಂದ ಅವರ ವಿರುದ್ಧದ ದೂರು ಮಾನ್ಯವಾಗಿಲ್ಲ. ಈ ಹಂತದಲ್ಲಿ ಅವರ ಮೀಸಲಾತಿ ರದ್ದು ಮಾಡಲು ಬರುವುದಿಲ್ಲ ಎನ್ನುತ್ತಾರೆ ಅಧಿಕಾರಿಗಳು.

ಜಾತಿ ಪ್ರಮಾಣ ಪತ್ರಕ್ಕೆ ಅರ್ಹತೆಗಳು
ಸಂಬಂಧಿ ಸಿದ ವ್ಯಕ್ತಿ, ಅವರ ಕುಟುಂಬಸ್ಥರು ಯಾರೂ ಆದಾಯ ತೆರಿಗೆ, ಮಾರಾಟ ತೆರಿಗೆ
ಹಾಗೂ ವೃತ್ತಿ ತೆರಿಗೆ ಪಾವತಿದಾರರಾಗಿರಬಾರದು. ಒಟ್ಟು ಕುಟುಂಬದ ಹಿಡುವಳಿ ಮಿತಿ 8 ಹೆಕ್ಟೇರ್‌ ಗಿಂತ ಜಾಸ್ತಿ ಇರಬಾರದು.

ಬಿಜೆಪಿ ಪಾಳಯದಲ್ಲಿ ಆತಂಕ
ಮೇಯರ್‌ ಆಕಾಂಕ್ಷಿಗಳ ವಿರುದ್ಧ ದಾಖಲಾಗಿರುವ ದೂರು ಮಾನ್ಯಗೊಂಡರೆ ಇಬ್ಬರೂ ಸಹ
ಕಣದಿಂದ ಹಿಂದುಳಿಯಬೇಕಾಗುತ್ತದೆ. ಆಗ ಮೇಯರ್‌ ಸ್ಥಾನ ಅನಾಯಾಸವಾಗಿ ಕಾಂಗ್ರೆಸ್‌ ಪಾಲಾಗಾಲಿದೆ. ಈಗಾಗಲೇ ಸುವರ್ಣ ಶಂಕರ್‌ ಜಾತಿ ಪ್ರಮಾಣ ಪತ್ರ ರದ್ದಾಗಿದ್ದು, ಅನಿತಾ
ರವಿಶಂಕರ್‌ ಮೀಸಲಾತಿಯನ್ನು ಚುನಾವಣಾ ಆಯೋಗದಲ್ಲಷ್ಟೇ ಪ್ರಶ್ನಿಸಲು ಸಾಧ್ಯವಿದೆ. ಒಂದು ವೇಳೆ ಚುನಾವಣಾ ಆಯೋಗ ದೂರು ಸ್ವೀಕಾರ ಮಾಡಿದರೆ ತೀರ್ಪು ಬರುವವರೆಗೂ ಚುನಾವಣೆ ಮುಂದೂಡಬೇಕಾಗುತ್ತದೆ. ಇಲ್ಲದೇ ಹೋದಲ್ಲಿ ಮೇಯರ್‌ ಸ್ಥಾನ ಕಾಂಗ್ರೆಸ್‌ ಪಾಲಾಗಲಿದೆ.

„ಶರತ್‌ ಭದ್ರಾವತಿ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.