ಎಲ್ಲಾ ಅಕ್ರಮ ಕ್ವಾರಿ ಸರ್ಕಾರದ ವಶಕ್ಕೆ

ಕ್ವಾರಿ- ಕ್ರಷರ್‌ ಬಗ್ಗೆ ಕಾನೂನು ತಿದ್ದುಪಡಿ ಅಗತ್ಯ

Team Udayavani, Jan 26, 2021, 5:52 PM IST

26-28-1

ಶಿವಮೊಗ್ಗ: ಜಿಲ್ಲೆಯಲ್ಲಿ ನಡೆದ ಘಟನೆ ನೋವನ್ನುಂಟು ಮಾಡಿದ್ದು ರಾಜ್ಯದಲ್ಲಿರುವ ಎಲ್ಲ ಅಕ್ರಮ ಕ್ವಾರಿಗಳನ್ನು ಸರಕಾರದ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಿಎಂ ಬಳಿ ಚರ್ಚೆ ನಡೆಸುತ್ತೇನೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹುಣಸೋಡಿಗೆ ಸ್ಫೋಟಕಗಳು ತಂದವರು ಯಾರು? ಎಲ್ಲಿಂದ ಬಂತು? ಈ ವಿಷಯದ ಹಿಂದೆ ಯಾರ್ಯಾರು ಇದ್ದಾರೆ ಎಂಬ ಕುರಿತು ತನಿಖೆ ನಡೆಯುತ್ತಿದೆ. ಸ್ಪೋಟಕದಲ್ಲಿ ಜೆಲ್‌ ಮಾದರಿ ವಸ್ತು ಬಳಸಿರುವ ಬಗ್ಗೆ ಮಾಹಿತಿ ಬಂದಿದೆ. ಆ ಬಗ್ಗೆ ಹೈದರಾಬಾದ್‌ನಿಂದ ಬಂದಿರುವ ವಿಶೇಷ ತಂಡ ವರದಿ ಕೊಡಲಿದೆ ಎಂದರು.

ಜಿಲ್ಲೆಯಲ್ಲಿ 76 ಅ ಧಿಕೃತ ಕ್ವಾರಿಗಳಿದ್ದು ಇದರಲ್ಲಿ 23 ಮಂದಿ ಸ್ಫೋಟ ಮಾಡಲು ಅನುಮತಿ ಪಡೆದಿದ್ದಾರೆ. ಉಳಿದವರು ಪಡೆದಿಲ್ಲ. 76 ಮಂದಿಯೂ ಈ ಅನುಮತಿ ಪಡೆದುಕೊಂಡರೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಈ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಒಟ್ಟು 95 ಕ್ರಷರ್‌ ಗಳಿದ್ದು ಮತ್ತೆ 3 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಒಟ್ಟು 100 ಕ್ರಷರ್‌ಗಳು ಜಿಲ್ಲೆಯಲ್ಲಿವೆ. ಅಭಿವೃದ್ಧಿ ದೃಷ್ಟಿಯಿಂದ ಅವುಗಳ ಅನುಕೂಲ ಪಡೆಯಲಿದ್ದೇವೆ ಎಂದರು.

ಹುಣಸೋಡು ದುರ್ಘ‌ಟನೆ ನಂತರ ಕ್ವಾರಿ ಹಾಗೂ ಕ್ರಷರ್‌ಗಳ ಬಗ್ಗೆ ಕಾನೂನು ತಿದ್ದುಪಡಿ ಅಗತ್ಯವಿದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಜಿಲ್ಲಾಧಿಕಾರಿಗಳ ವರದಿ ಆಧಾರದ ಮೇಲೆ ಕಾನೂನು ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಅರಣ್ಯ ಇಲಾಖೆಯ ಅ ಧಿಕಾರಿ ಶಂಕರ್‌ ಮಾತನಾಡಿ, ಅರಣ್ಯದಲ್ಲಿ 23 ಗಣಿಗಾರಿಕೆ ನಡೆಯುತ್ತಿದೆ. ಅವುಗಳನ್ನು ವಶಪಡಿಸಲಾಗುವುದು ಎಂದರು. ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ಮಾತನಾಡಿ, ನ್ಪೋಟಕ ವಸ್ತುಗಳ ಸಾಗಾಟವೂ ಕಾನೂನುಬಾಹಿರವಾಗಿದೆ. ಖರೀದಿ, ಸಾಗಾಣಿಕೆ, ಬ್ಲಾಸ್ಟ್‌ ಸಹ ಕಾನೂನು ಕ್ರಮದಲ್ಲಿ ಸಾಗಬೇಕು. ಅವುಗಳು ಆಗುತ್ತಿಲ್ಲ. ಸ್ಫೋಟಕಗಳನ್ನ ಮಾರಾಟ ಮಾಡುವರು ಅ ಧಿಕೃತವಾಗಿ ಒಬ್ಬನೇ ಇರುತ್ತಾನೆ. ಆದರೆ ಈ ಅ ಧಿಕೃತ ಮಾರಾಟಗಾರರ ಜೊತೆ ಈ ಅನಧಿಕೃತ ಗಣಿಗಾರಿಕೆಯವರು ಖರೀದಿಸುವುದೇ
ಇಲ್ಲ. ಇವರು ಬೇರೆ ರಾಜ್ಯಗಳಿಂದ ಖರೀದಿಸುತ್ತಾರೆ. ಇದನ್ನ ತಡೆಯಲು ಸಾಧ್ಯವಾಗುತ್ತಿಲ್ಲ ಎಂದರು.

ಕ್ವಾರಿಯಲ್ಲಿ ಸತ್ತರೆ ಲೇಬರ್‌ ಇಲಾಖೆಯಿಂದ ಹಣ ಬರುತ್ತಿಲ್ಲ. ಕಾರಣವೇನೆಂದರೆ ಕ್ರಶರ್‌ಗಳು ಲೇಬರ್‌ಗಳ ಮಾಹಿತಿ ಇಟ್ಟಿಲ್ಲ. ಹಾಗಾಗಿ
ಪರಿಹಾರವಿಲ್ಲವೆಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ಅನಂತ ಹೆಗಡೆ ಆಶೀಸರ, ಜಿಪಂ ಸಿಇಒ ಎಂ.ಎಲ್‌. ವೈಶಾಲಿ ಸೇರಿದಂತೆ ವಿವಿಧ ಇಲಾಖೆಗಳ ಅ ಧಿಕಾರಿಗಳು ಇದ್ದರು.

ಓದಿ : ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಕೈಜೋಡಿಸಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.