ಕೊರೊನಾ ಮಾರ್ಗಸೂಚಿ ಪಾಲಿಸಿ
Team Udayavani, Apr 23, 2021, 7:29 PM IST
ಶಿವಮೊಗ್ಗ: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು ಮಾಂಸ, ಹಾಲಿನ ಅಂಗಡಿ, ಪಶು ಆಹಾರ, ಅಗತ್ಯ ಸರಕು, ಕಟ್ಟಡ ನಿರ್ಮಾಣ ಸಾಮಗ್ರಿ ಅಂಗಡಿ ಹೊರತುಪಡಿಸಿ ಉಳಿದೆಲ್ಲಾ ಅಂಗಡಿ- ಮುಂಗಟ್ಟುಗಳನ್ನು ನಿರ್ಬಂ ಧಿಸಲಾಗುವುದು ಎಂದು ಜಿಲ್ಲಾ ಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಗುರುವಾರ ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈದಾನ ಇಲ್ಲವೇ ತೆರೆದ ಪ್ರದೇಶದಲ್ಲಿ ಮಾತ್ರ ಸಗಟು ತರಕಾರಿ, ಹಣ್ಣು- ಹೂ ವ್ಯಾಪಾರ ನಡೆಸಲು ಅನುಮತಿ ಇದೆ. ಮುಂಗಾರು ಕೃಷಿ ಪೂರ್ವ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ. ಎಲ್ಲಾ ರೀತಿಯ ಕೈಗಾರಿಕೆ, ಸಂಸ್ಥೆಗಳು ಕಾರ್ಯ ನಿರ್ವಹಿಸಬಹುದು.
ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಅ ಧಿಕೃತವಾದ ಐಡಿ ಕಾರ್ಡ್ ನೀಡಿರಬೇಕು. ಮದುವೆ ಸಮಾರಂಭಗಳಿಗೆ ತಹಶೀಲ್ದಾರ್ ಕಚೇರಿಯಿಂದ ಅನುಮತಿ ಪಡೆದು ಗರಿಷ್ಟ 50 ಮಂದಿ ಮೀರದಂತೆ ನಿರ್ವಹಿಸಬೇಕು. ರಾಜ್ಯದೊಳಗೆ ವ್ಯಕ್ತಿಗಳ ಸಂಚಾರ ಹಾಗೂ ಸರಕು ಸಾಗಾಟಕ್ಕೆ ಮುಕ್ತ ಅವಕಾಶವಿದೆ ಎಂದು ಹೇಳಿದರು. ವಾರಾಂತ್ಯ ಕರ್ಫ್ಯೂ: ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 6ರವರೆಗೆ ಸಂಪೂರ್ಣ ಕರ್ಫ್ಯೂ ಇರಲಿದ್ದು, ಈ ಅವ ಧಿಯಲ್ಲಿ ಬೆಳಗ್ಗೆ 6ರಿಂದ 10ರವರೆಗೆ ದಿನಸಿ, ತರಕಾರಿ ಹಾಲು ಅಂಗಡಿಗಳು ತೆರೆದಿರುತ್ತದೆ. ಮೇ 4ರವರೆಗೆ ಪ್ರತಿದಿನ ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದರು.
ಆಕ್ಸಿಜನ್ ಲಭ್ಯತೆ: ಮೆಗ್ಗಾನ್ ಮಾತ್ರವಲ್ಲದೆ ತಾಲೂಕು ಆಸ್ಪತ್ರೆಗಳಲ್ಲೂ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. ಮೆಗ್ಗಾನ್ ನಲ್ಲಿ ಪ್ರಸ್ತುತ 280 ಆಕ್ಸಿಜನ್ ಬೆಡ್ ಲಭ್ಯವಿದ್ದು, 470ರವರೆಗೆ ಇದನ್ನು ಹೆಚ್ಚಿಸಲು ಸೌಲಭ್ಯಗಳಿವೆ. 40 ಐಸಿಯು ಸೌಲಭ್ಯವಿದ್ದು ಹೆಚ್ಚುವರಿಯಾಗಿ 20 ಜಂಬೋ ಸಿಲಿಂಡರ್ ಸಂಗ್ರಹಿಸಿಡಲು ಸೂಚಿಸಲಾಗಿದೆ. ಮೆಗ್ಗಾನ್ನಲ್ಲಿ 16 ಸಾವಿರ ಲೀಟರ್ ಸಾಮಥದ ಆಕ್ಸಿಜನ್ μಲ್ಲಿಂಗ್ ಪ್ಲಾಂಟ್ ಇದೆ. ಪ್ರತಿ ತಾಲೂಕಿನಲ್ಲಿ 50 ಆಕ್ಸಿಜನ್ ಬೆಡ್ ಲಭ್ಯವಿದೆ.
ತಾಲೂಕಿನಲ್ಲಿ ತಲಾ 3 ಐಸಿಯು ಬೆಡ್ ಮತ್ತು 20 ಆಕ್ಸಿಜನ್ ಜಂಬೋ ಸಿಲಿಂಡರ್ ಇವೆ ಎಂದು ಹೇಳಿದರು. ರೆಮ್ಡೆಸಿವಿರ್ ಇಂಜೆಕ್ಷನ್ ಅಗತ್ಯ ಪ್ರಮಾಣದಲ್ಲಿ ಲಭ್ಯವಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ 307, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 116 ಹಾಗೂ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಕನಿಷ್ಟ 18 ಇಂಜೆಕ್ಷನ್ ಲಭ್ಯವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ರಾಜೇಶ ಸುರಗಿಹಳ್ಳಿ ಮಾಹಿತಿ ನೀಡಿದರು.
ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷಿ¾àಪ್ರಸಾದ್, ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಎಂ.ಎಲ್. ವೈಶಾಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ