ಮುಚ್ಚಿ ಹೋದ ಕೆರೆಗೆ ಮರುಜೀವ ನೀಡುವ ಕಾರ್ಯಕ್ಕೆ ಚಾಲನೆ
Team Udayavani, May 2, 2021, 7:01 PM IST
ಶಿವಮೊಗ್ಗ: ಮುಚ್ಚಿಹೋಗಿದ್ದ ಕೆರೆಯನ್ನು ಮತ್ತೆ ಪುನರ್ಜೀವ ನೀಡುವ ಮಹತ್ತರ ಕೆಲಸವನ್ನು ಇಲ್ಲಿನ ಪರಿಸರಾಸಕ್ತರು ಆರಂಭಿಸಿದ್ದು, ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮಲ್ಲಿಗೇನಹಳ್ಳಿ ವಾಜಪೇಯಿ ಬಡಾವಣೆಯ ಸರ್ವೇ ನಂ.52ರ ಕ್ಯಾದಿಗೆಕಟ್ಟೆ ಕೆರೆ ಸಂಪೂರ್ಣ ಹೂಳು ತುಂಬಿಕೊಂಡಿದ್ದು, ಸುಮಾರು 8 ಎಕರೆ ವಿಸ್ತೀರ್ಣದ ಕೆರೆ ಇದಾಗಿದ್ದು, ಈಗ 2 ಎಕರೆ ಪ್ರದೇಶದಲ್ಲಿ ಕೆರೆ ಹೂಳೆತ್ತುವ ಕೆಲಸಕ್ಕೆ ಪರಿಸರಾಸಕ್ತರು ನಿರ್ಧರಿಸಿದ್ದು, ರಾಜ್ಯದಲ್ಲಿಯೇ ಒಂದು ಮಾದರಿ ಕೆರೆಯನ್ನಾಗಿ ರೂಪಿಸುವ ಮಹತ್ವಾಕಾಂಕ್ಷಿ ಯೋಜನೆ ರೂಪಿಸಿದ್ದಾರೆ.
ಕೆರೆಯ ಹೂಳು ಎತ್ತಿ ನೀರು ಸಂಗ್ರಹಣೆಗೆ ಅವಕಾಶ ನೀಡಿ ಕೆರೆಯ ಸುತ್ತಮುತ್ತ ಗಿಡ ಮರಗಳನ್ನು ಬೆಳೆಸುವ ಉದ್ದೇಶ ಹೊಂದಿದ್ದು, ಸಾರ್ವಜನಿಕರ ವಾಯು ವಿಹಾರಕ್ಕೂ ಕೂಡ ಅನುಕೂಲಕರ ವಾತಾವರಣವನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಈಗಾಗಲೇ ಕೆಲವು ಪರಿಸರ ತಜ್ಞರ ಜೊತೆ ಸೇರಿಕೊಂಡು ನೀಲನಕ್ಷೆ ತಯಾರಿಸಲಾಗಿದೆ. ಮುಂದಿನ ದಿನಗಳಲ್ಲಿ ವಾಜಪೇಯಿ ಬಡಾವಣೆಯಲ್ಲಿ ನಿರ್ಮಾಣವಾಗುವ ಎಲ್ಲಾ ಮನೆಗಳ ಮೇಲ್ಚಾವಣಿಯ ಮಳೆ ನೀರು ಪೈಪುಗಳ ಮೂಲಕ ನೇರವಾಗಿ ಈ ಕೆರೆಯನ್ನು ಸೇರುವಂತೆ ಮಾಡಲಾಗುವ ಮಳೆ ಕೊಯ್ಲು ಯೋಜನೆ ಕೂಡ ಇದರ ಭಾಗವಾಗಿದೆ ಎಂದು ಪರಿಸರಾಸಕ್ತರ ತಂಡ ತಿಳಿಸಿದೆ.
ಯೋಜನೆಯ ತಜ್ಞ ಯೇಸು ಪ್ರಕಾಶ್ ಮಾತನಾಡಿ, ಕೆರೆಗೆ ಜೀವಕೊಡುವುದು ಮಾತ್ರವಲ್ಲ. ದೇಶದಲ್ಲಿಯೇ ಮಾದರಿ ಕೆರೆಯನ್ನಾಗಿ ರೂಪಿಸುವುದು ಇದರ ಉದ್ದೇಶ. ಈಗಾಗಲೇ ನಾವು ಸುಮಾರು 6 ಕೆರೆಗಳನ್ನು ಈ ರೀತಿ ಜೀರ್ಣೋದ್ದಾರ ಮಾಡಿದ್ದೇವೆ ಎಂದರು. ಪರಿಸರಾಸಕ್ತರ ತಂಡದ ಸದಸ್ಯ ಸತೀಶ್ ಮಾತನಾಡಿ, ಕೆರೆಯ ಸುತ್ತಮುತ್ತ ಸ್ಥಳೀಯ ಸಸ್ಯ ಪ್ರಭೇದಗಳನ್ನೇ ಬೆಳೆಸಲಾಗುವುದು. ಅತ್ಯಂತ ಕಡಿಮೆ ಜಾಗದಲ್ಲಿ ಹೆಚ್ಚು ಸಸಿ ಬೆಳೆಸುವುದು ಮತ್ತು ಪರಿಸರವನ್ನು ಉತ್ತಮವಾಗಿಸುವ ಸಸ್ಯಗಳನ್ನು ಆಯ್ಕೆ ಮಾಡಿಕೊಳ್ಳುವುದು ನಮ್ಮ ಉದ್ದೇಶವಾಗಿದೆ ಎಂದರು. ಪ್ರೊ| ಬಿ.ಎಂ.ಕುಮಾರಸ್ವಾಮಿ, ಪ್ರೊ| ಚಂದ್ರಶೇಖರ್, ಕಾಟನ್ ಜಗದೀಶ್, ಶ್ರೀಧರ್, ಬಾಲಕೃಷ್ಣ ನಾಯ್ಡು, ಸತೀಶ್ ಕುಮಾರ್, ತ್ಯಾಗರಾಜ್, ಪ್ರಕಾಶ್, ಮೋಹನ್, ಉಮೇಶ್ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ