ಉಸಿರೇ ನಿಂತ ವಿಐಎಸ್‌ಎಲ್‌ನಿಂದ ಸೋಂಕಿತರಿಗೆ ಉಸಿರು!


Team Udayavani, May 9, 2021, 10:49 PM IST

9-25

„ಕೆ.ಎಸ್‌. ಸುಧೀಂದ್ರ ಭದ್ರಾವತಿ

ಭದ್ರಾವತಿ: ಒಂದು ಕಾಲದಲ್ಲಿ ಭದ್ರಾವತಿ ಕ್ಷೇತ್ರದ ಅಸಂಖ್ಯಾತ ಜನರಿಗೆ ಉದ್ಯೋಗ ಒದಗಿಸಿ, ಸಾವಿರಾರು ಕುಟುಂಬಗಳಿಗೆ ಬದುಕು ನೀಡಿ, ಅನ್ನದಾತ ಸಂಸ್ಥೆಯಾಗಿದ್ದ ಸರ್‌.ಎಂ.ವಿ. ಸಂಸ್ಥಾಪಿತ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಇಂದು ತನ್ನ ಗತಕಾಲದ ವೈಭವವನ್ನು ಕಳೆದುಕೊಂಡಿದೆ.

ತನ್ನ ಅಸ್ತಿತ್ವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೆಣಗಾಡುತ್ತಾ ನೋವಿನ ಸ್ಥಿತಿಯಲ್ಲಿದ್ದರೂ ಸಹ ಕೊರೊನಾ ಸಂಕಷ್ಟದಿಂದ ಸಾವು- ಬದುಕಿನ ನಡುವೆ ಹೋರಾಡುತ್ತಿರುವ ಜನರ ಪ್ರಾಣ ಉಳಿಸುವ ಸಲುವಾಗಿ ತನ್ನ ಪ್ರಾಂಗಣದಲ್ಲಿರುವ ಆಮ್ಲಜನಕ ಉತ್ಪಾದನಾ ಘಟಕದಿಂದ ಆಸ್ಪತ್ರೆಗೆ ಆಕ್ಸಿಜನ್‌ ಸರಬರಾಜು ಮಾಡುವ ಸೇವಾ ಕಾರ್ಯಕ್ಕೆ ಹೆಗಲು ನೀಡಿ ನಿಜವಾದ ಅರ್ಥದಲ್ಲಿ ಕೋವಿಡ್‌ ವಾರಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದೆ.

ಕಾರ್ಖಾನೆಯ ಅಂಗಳದಲ್ಲಿ ಹಲವು ದಶಕಗಳ ಹಿಂದೆ ಉತ್ತರ ಭಾರತ ಮೂಲದ ಬಾಲ್‌ದೋಟ್‌ ಮಾಲೀಕತ್ವದ ಎಂಎಸ್‌ಪಿಎಲ್‌ ಕಂಪನಿಯ ಸಹಯೋಗದಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕವನ್ನು ಸ್ಥಾಪಿಸಿ, ಕಾರ್ಖಾನೆಗೆ ಅಗತ್ಯವಾದ ಪ್ರಮಾಣದ ಆಕ್ಸಿಜನ್‌ ಉತ್ಪಾದನೆ ಮಾಡಲಾಗುತ್ತಿತ್ತು. ಆಕ್ಸಿಜನ್‌ ಉತ್ಪಾದನೆ ಮತ್ತು ಅವುಗಳನ್ನು ಜಂಬೋ ಸಿಲಿಂಡರ್‌ಗಳಲ್ಲಿ ತುಂಬಲು ಅಂದಿನ ಕಾಲದಲ್ಲಿಯೇ ಲಕ್ಷಾಂತರ ರೂ. ಖರ್ಚು ಆಗುತ್ತಿತ್ತು. ಕಾರ್ಖಾನೆ ಲಾಭದಾಯಕವಾಗಿ ನಡೆಯುತ್ತಿದ್ದದ್ದರಿಂದ ಆ ವೆಚ್ಚ ಕಷ್ಟ ಎನಿಸುತ್ತಿರಲಿಲ್ಲ. ಆದರೆ ಕಾಲಕ್ರಮೇಣ ವಿಐಎಸ್‌ಎಲ್‌ ನಷ್ಟದ ಹಾದಿಯಲ್ಲಿ ಸಾಗಿದ ಪರಿಣಾಮ ಕಾರ್ಖಾನೆಯಲ್ಲಿ ವರ್ಷದಿಂದ ವರ್ಷಕ್ಕೆ ಕಾರ್ಮಿಕರ ಸಂಖ್ಯೆ, ಉತ್ಪಾದನೆ, ಮಾರಾಟ ಎಲ್ಲವೂ ಕುಸಿದ ಪರಿಣಾಮ ಕಾರ್ಖಾನೆಯ ಹಲವು ಘಟಕಗಳು ಮುಚ್ಚುತ್ತಾ ಬಂದವು. ಅದರಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಈ ಆಕ್ಸಿಜನ್‌ ಘಟಕವನ್ನೂ ಸಹ ಎಂಎಸ್‌ಪಿಎಲ್‌ ಉತ್ಪಾದನೆ ಸ್ಥಗಿತಗೊಳಿಸಿ ಮುಚ್ಚಲ್ಪಟ್ಟಿತು.

ಕೊರೊನಾದಿಂದ ಮತ್ತೆ ಯಂತ್ರಗಳ ಸದ್ದು: ಹೊರ ಜಗತ್ತಿನ ಬಹುತೇಕರಿಗೆ ಈ ಕಾರ್ಖಾನೆಯಲ್ಲಿ ಪಳೆಯುಳಿಕೆಯಾಗಿ ಉಳಿದ ಆಕ್ಸಿಜನ್‌ ಘಟಕದ ಬಗ್ಗೆ ಮರೆತೇ ಹೋಗಿತ್ತು. ಆದರೆ ಕೊರೊನಾ ಎರಡನೆ ಅಲೆ ಸೃಷ್ಟಿಸಿರುವ ಆಕ್ಸಿಜನ್‌ ಕೊರತೆಯ ಅವಾಂತರ ಮತ್ತೆ ಈಘಟಕವನ್ನು ನೆನಪಿಸಿದೆ. ಕೊರೊನಾ ಸೋಂಕಿತರಿಗೆ ಅಗತ್ಯವಾದ ಆಮ್ಲಜನಕ ಪೂರೈಕೆಯ ಕೊರತೆಯಾಗಿ ಆಸ್ಪತ್ರೆಗಳಲ್ಲಿ ಹಾಹಾಕಾರ ಉಲ್ಬಣಗೊಳ್ಳುತ್ತಿದ್ದಂತೆ, ಆಕ್ಸಿಜನ್‌ ಉತ್ಪಾದನೆಗಾಗಿ ಈ ಘಟಕದ ಪುನಾರಂಭದ ಮಾತುಗಳು ಕೇಳಿ ಬಂದವು.

ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ ಸ್ಥಗಿತಗೊಂಡಿರುವ ಆಕ್ಸಿಜನ್‌ ಘಟಕದತ್ತ ರಾಜ್ಯ ಸರ್ಕಾರದ ಚಿತ್ತ ಹರಿದು ಕಾರ್ಖಾನೆಯ ಆಡಳಿತದ ಜೊತೆ ಮತ್ತು ಎಂಎಸ್‌ ಪಿಎಲ್‌ ಕಂಪೆನಿ ಜೊತೆ ಮಾತುಕತೆ ನಡೆಸಿದ ಪರಿಣಾಮ ವಿಐಎಸ್‌ಎಲ್‌ ಕಾರ್ಖಾನೆಯ ಆಕ್ಸಿಜನ್‌ ಘಟಕದಲ್ಲಿ ಆಕ್ಸಿಜನ್‌ ಉತ್ಪಾದನೆಗೆ ಮರು ಚಾಲನೆ ದೊರಕಿದೆ. ವಿಐಎಸ್‌ಎಲ್‌ ಕಂಪೆನಿಯಲ್ಲಿ ಲಭ್ಯವಿರುವ 1 ಕಂಪ್ರೈಸರ್‌ ನೆರವಿನಿಂದ 150 ಜಂಬೋ ಸಿಲೆಂಡರ್‌ಗಳಿಗೆ ಆಕ್ಸಿಜನ್‌ ತುಂಬುವ ಕಾರ್ಯಕ್ಕೆ ಚಾಲನೆ ದೊರತಿದೆ.

ಅವುಗಳನ್ನು ಈಗಾಗಲೇ ಸರ್ಕಾರ ಅಗತ್ಯವಿರುವ ಕೋವಿಡ್‌ ರೋಗಿಗಳಿಗೆ ಆಕ್ಸಿಜನ್‌ ಪೂರೈಸುವುದಕ್ಕೆ ವ್ಯವಸ್ಥೆ ಮಾಡಿದೆ. ಈ ನಿಟ್ಟಿನಲ್ಲಿ ಉತ್ಪಾದನೆಗೊಳ್ಳುವ ಆಕ್ಸಿಜನ್‌ನ್ನು ಜಂಬೋ ಸಿಲಿಂಡರ್‌ಗಳಿಗೆ ತುಂಬಲು ದಿನವೊಂದಕ್ಕೆ 2 ಲಕ್ಷ ರೂ. ವಿದ್ಯುತ್‌ ವೆಚ್ಚ ವಾಗುವುದರ ಜೊತೆಗೆ ಆಕ್ಸಿಜನ್‌ ತಯಾರಿಕೆಗೆ ಹತ್ತು ಲಕ್ಷ ರೂ.ಗೂ ಅಧಿ ಕ ವೆಚ್ಚವಾಗುತ್ತದೆ. ಇದನ್ನು ರಾಜ್ಯ ಸರ್ಕಾರವೇ ಭರಿಸಲು ಮುಂದಾಗಿದೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.