ಸೋಂಕಿತರ ಸಂಬಂಧಿಗಳಿಗೆ ಉಚಿತ ದಾಸೋಹ


Team Udayavani, May 11, 2021, 10:01 PM IST

11-21

ಶಿವಮೊಗ್ಗ: ನಗರದ ಗಾಂ ಧಿಬಜಾರ್‌ ಸಗಟು ವ್ಯಾಪಾರಿಗಳ ಸಂಘ ಮುಂದಿನ 40 ದಿನಗಳ ಕಾಲ ಕೋವಿಡ್‌ ಸೋಂಕಿತರನ್ನು ಆಸ್ಪತ್ರೆಗೆ ಕರೆತಂದಿರುವ ಸಂಬಂ ಧಿಗಳಿಗೆ ಪ್ರತಿನಿತ್ಯ ಉಚಿತವಾಗಿ ಊಟ, ತಿಂಡಿ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.

ರೋಗಿಗಳೊಂದಿಗೆ ಆಸ್ಪತ್ರೆಗೆ ಬರುವ ಅವರ ಸಂಬಂಧಿಗಳಿಗೆ ಸದ್ಯ ಊಟ-ತಿಂಡಿ ಸಮಸ್ಯೆ ಉಂಟಾಗಿರುವುದನ್ನು ಮನಗಂಡು ಗಾಂಧಿಬಜಾರ್‌ ಸಗಟು ದಿನಸಿ ವ್ಯಾಪಾರಿಗಳ ಸಂಘ ಪ್ರತಿನಿತ್ಯ 500 ಜನರಿಗೆ ಉಚಿತವಾಗಿ ಊಟ ತಿಂಡಿ ನೀಡುವ ವ್ಯವಸ್ಥೆ ಕಲ್ಪಿಸಿದೆ.

ವ್ಯಾಪಾರಿಗಳ ಸಂಘದ ಈ ಸೇವೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಚಾಲನೆ ನೀಡಿ ಮಾತನಾಡಿ, ಕೋವಿಡ್‌ ಸಂಕಷ್ಟ ಸಂದರ್ಭದಲ್ಲಿ ಈಗಾಗಲೇ ಹಲವಾರು ಸಂಘ-ಸಂಸ್ಥೆಗಳು ವಿವಿಧ ರೀತಿಯ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಮುಂದಿನ ದಿನದಲ್ಲಿ ಇನ್ನಷ್ಟು ಸಂಘ ಸಂಸ್ಥೆಗಳು ಸೇವಾ ಕಾರ್ಯಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.

ಈಗಾಗಲೇ ಸೇವಾಭಾರತಿ, ಕೋವಿಡ್‌ ಸುರûಾ ಪಡೆ, ಐಎಂಎ,  ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಅನೇಕ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದೆ. ಜನ ಸಂಕಷ್ಟದಲ್ಲಿ ಸಿಲುಕಿರುವ ಈ ಹೊತ್ತಿನಲ್ಲಿ ಸಂಘ-ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿರುವವರ ಸಹಾಯಕ್ಕೆ ಧಾವಿಸಬೇಕು ಎಂದು ಹೇಳಿದರು.

ಕೋವಿಡ್‌-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್‌ ಡೌನ್‌ ಜಾರಿಮಾಡಿದೆ. ಮೊದಲ ದಿನ ಕೆಲವರು ತೊಂದರೆ ಅನುಭವಿಸಿರುವುದಾಗಿ ತಿಳಿದುಬಂದಿದೆ. ಆದರೆ ಲಾಕ್‌ಡೌನ್‌ಗೆ ಸಂಪೂರ್ಣ ಜನ ಬೆಂಬಲ ವ್ಯಕ್ತವಾಗಿದೆ. ಪ್ರತಿಯೊಬ್ಬರೂ ನಿಯಮ ಪರಿಪಾಲನೆ ಮಾಡುತ್ತಿ¨ªಾರೆ. ಅತಿ ಹೆಚ್ಚು ಜನ ಮನೆಯಿಂದ ಹೊರ ಬಂದಿಲ್ಲ. ಮುಂದಿನ 14 ದಿನಗಳ ಕಾಲ ಇದೇ ರೀತಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತದೆ ನಿಜ. ಆದರೆ  ಯಾವುದಕ್ಕೂ ಕೊರತೆಯಾಗದಂತೆ ನಿರ್ವಹಿಸಿಕೊಂಡು ಹೋಗಲಾಗುತ್ತಿದೆ. ಯಾವುದಕ್ಕೂ ಹಾಹಾಕಾರ ಉಂಟಾಗಿಲ್ಲ. ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆ, ವೈದ್ಯರು, ಶುಶ್ರೂಷಕರು, ಡಿ ದರ್ಜೆ ನೌಕರರು, ಆಕ್ಸಿಜನ್‌ ಇದ್ಯಾವುದಕ್ಕೂ ಕೊರತೆಯಾಗದಂತೆ ನಿಭಾಯಿಸಿಕೊಂಡು ಹೋಗಲಾಗುತ್ತಿದೆ ಎಂದರು.

ಕಟ್ಟುನಿಟ್ಟಾಗಿ ಲಾಕ್‌ ಡೌನ್‌ ಜಾರಿಗೆ ಕೈಗಾರಿಕೋದ್ಯಮಿಗಳು ವರ್ತಕರು ಸಂಘ-ಸಂಸ್ಥೆಗಳ ಪದಾಧಿ ಕಾರಿಗಳು ಭಾನುವಾರ ನಡೆದ ಸಭೆಯಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಮೊದಲ ದಿನ ಕೆಲವೊಂದು ಸಮಸ್ಯೆ ಉಂಟಾಗಿದೆ. ಆ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸುವ ದಿಕ್ಕಿನಲ್ಲಿ ಅಧಿ ಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಕೃಷಿ ಚಟುವಟಿಕೆಗಳಿಗೆ ಹೋಗುವವರು ಹಾಲು ವಿತರಣೆ ಮಾಡುವವರಿಗೆ ತೊಂದರೆಯಾಗಿದೆ ಎಂಬ ದೂರು ಕೇಳಿ ಬಂದಿದೆ. ಪರಿಹಾರ ಕಂಡುಕೊಳ್ಳಲಾಗುವುದು. ದಿನಸಿ, ಹಾಲು, ತರಕಾರಿ, ಔಷ ಧ ಇವುಗಳಿಗೆ ತೊಂದರೆಯಾಗಬಾರದು ಇದನ್ನು ಪೂರೈಸುವ ವ್ಯಕ್ತಿಗಳಿಗೆ ಪಾಸ್‌ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಆರ್‌ಎಸ್‌ಎಸ್‌ ಪ್ರಮುಖರಾದ ಪಟ್ಟಾಭಿರಾಮ್‌, ಗಿರೀಶ್‌ ಕಾರಂತ್‌, ಡಿ.ಎಸ್‌.ಅರುಣ್‌ ಹಾಗೂ ಗಾಂಧಿ ಬಜಾರಿನ ವರ್ತಕರ ಸಂಘದ ಪ್ರಮುಖರು ಹಾಜರಿದ್ದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.