ಶುಭಮಂಗಳ ಕಲ್ಯಾಣ ಮಂಟಪ ಇಂದಿನಿಂದ ಕೋವಿಡ್‌ ಕೇರ್‌ ಸೆಂಟರ್‌


Team Udayavani, May 18, 2021, 9:45 PM IST

18-21

ಶಿವಮೊಗ್ಗ: ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿರುವ ಕೊರೊನಾ ಸೋಂಕಿನಿಂದ ತತ್ತರಿಸಿರುವ ನಾಗರಿಕರ ನೆರವಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಮುಂದಾಗಿದ್ದಾರೆ. ಕಡಿಮೆ ರೋಗ ಲಕ್ಷಣಗಳನ್ನು ಹೊಂದಿರುವ ಕೋವಿಡ್‌ ಸೋಂಕಿತರಿಗಾಗಿ ಶುಭ ಮಂಗಳ ಕಲ್ಯಾಣ ಮಂಟಪವನ್ನು 100 ಹಾಸಿಗೆಗಳ ಕೋವಿಡ್‌ ಕೇರ್‌ ಸೆಂಟರ್‌ ಆಗಿ ಪರಿವರ್ತನೆ ಮಾಡಿದ್ದು, ಇದು ಮಂಗಳವಾರದಿಂದ ಆರಂಭಗೊಳ್ಳಲಿದೆ.

ಕಡಿಮೆ ರೋಗ ಲಕ್ಷಣಗಳನ್ನು ಹೊಂದಿರುವ ಸೋಂಕಿತರಿಗಾಗಿ ಈ ಕೋವಿಡ್‌ ಕೇರ್‌ ಸೆಂಟರನ್ನು ತೆರೆಯಲಾಗುತ್ತಿದ್ದು, ಉತ್ಕೃಷ್ಠ ದರ್ಜೆ ಸವಲತ್ತುಗಳನ್ನು ಇಲ್ಲಿ ಕಲ್ಪಿಸಲಾಗುತ್ತಿದೆ. ಇಲ್ಲಿ, ದಾಖಲಾಗುವ ರೋಗಿಗಳು ಮನೆಯಿಂದ ತಮ್ಮ ಬಟ್ಟೆಗಳನ್ನು ತಂದರೆ ಸಾಕು. ಇನ್ನುಳಿದಂತೆ ಉತ್ತಮ ಗುಣಮಟ್ಟದ ಹಾಸಿಗೆ, ಹೊದಿಕೆ, ಪೇಸ್ಟ್‌, ಬ್ರಷ್‌, ಸೋಪು, ಶಾಂಪು, ಶುಚಿ ಹಾಗೂ ರುಚಿಯಾದ ಉಪಾಹಾರ, ಊಟ, ಪೌಷ್ಠಿಕ ಆಹಾರ, ಶುದ್ಧ ಕುಡಿಯುವ ನೀರು ಸೇರಿದಂತೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಲಾಗುತ್ತಿದೆ. ವಿಶೇಷವೆಂದರೆ ಇಲ್ಲಿ ಸೋಂಕಿತರಿಗೆ ಒಮ್ಮೆ ನೀಡಲಾದ ಹಾಸುವ ಹಾಗೂ ಹೊದೆಯುವ ಹೊದಿಕೆಗಳನ್ನು ಮರುಬಳಕೆ ಮಾಡದೇ, ಹೊಸತನ್ನೇ ಬಳಸಲು ನಿರ್ಧರಿಸಲಾಗಿದೆ.

ಇನ್ನು, ಈ ಕೋವಿಡ್‌ ಕೇರ್‌ ಸೆಂಟರ್‌ಗೆ ಮೆಟ್ರೋ ಆಸ್ಪತ್ರೆಯ ಸಹಕಾರವಿದೆ. ಈ ಆಸ್ಪತ್ರೆಯ ವೈದ್ಯರು ಹಾಗೂ ನರ್ಸ್‌ಗಳು ಪ್ರತಿದಿನ ಮೂರು ಪಾಳಿಯಲ್ಲಿ ಇಲ್ಲಿಯೇ ಇದ್ದು ಕಾರ್ಯನಿರ್ವಹಿಸುತ್ತಾರೆ. ಇಲ್ಲಿ ದಾಖಲಾಗುವ ಕಡಿಮೆ ರೋಗ ಲಕ್ಷಣವಿರುವ ಸೋಂಕಿತರಿಗೆ ಅಗತ್ಯವಿರುವ ಎಲ್ಲ ರೀತಿಯ ವೈದ್ಯಕೀಯ ನೆರವು ದೊರೆಯಲಿದೆ. ಶುಭ ಮಂಗಳ ಟ್ರಸ್ಟ್‌ ವತಿಯಿಂದ ಈ ಕಲ್ಯಾಣ ಮಂಟಪವನ್ನು ಉಚಿತವಾಗಿ ಕೋವಿಡ್‌ ಕೇರ್‌ ಸೆಂಟರ್‌ಗೆ ನೀಡಲಾಗಿದೆ.

ಇನ್ನು, ಈ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ದಾಖಲಾಗುವ ಸೋಂಕಿತರಿಗೆ ಇಲ್ಲಿನ ಸೇವೆಗಳು ಸಂಪೂರ್ಣ ಉಚಿತವಾಗಿದ್ದು, ಇದರ ಎಲ್ಲ ಖರ್ಚು ವೆಚ್ಚಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ, ಜಿಪಂ ಸದಸ್ಯ ಕೆ.ಈ. ಕಾಂತೇಶ್‌ ಅವರು ಭರಿಸುತ್ತಿದ್ದಾರೆ. ಮಂಗಳವಾರದಿಂದ ಈ ಸೆಂಟರ್‌ ಕಾರ್ಯಾರಂಭ ಮಾಡಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಚಿವ ಈಶ್ವರಪ್ಪ ಹಾಗೂ ಜಿಪಂ ಸದಸ್ಯ ಕೆ.ಈ. ಕಾಂತೇಶ್‌ ಅವರುಗಳು ಶುಭ ಮಂಗಳ ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಿದರು.

ಕೊರೊನಾದ ಈ ಸಂಕಷ್ಟ ಕಾಲದಲ್ಲಿ ಸೋಂಕಿತರಿಗೆ ಬೆಡ್‌ ದೊರೆಯದೇ ಪರಿಪಾಟಲು ಪಡುತ್ತಿರುವ ಈ ಸಂದರ್ಭದಲ್ಲಿ ತಮ್ಮದೇ ಖರ್ಚಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸುತ್ತಿರುವ ಸಚಿವ ಈಶ್ವರಪ್ಪನವರ ಕಾರ್ಯ ನಿಜಕ್ಕೂ ಮಾದರಿಯಾದುದು.

ಟಾಪ್ ನ್ಯೂಸ್

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.