ಕೊರೊನಾಕ್ಕಿಂತಲೂ ಭಯ ಮೂಡಿಸ್ತಿದೆ ತರಕಾರಿ ದರ!


Team Udayavani, Jun 3, 2021, 11:05 PM IST

3-19

ಶಿವಮೊಗ್ಗ: ಕೊರೊನಾ ತಡೆಗೆ ವಿಧಿಸಲಾದ ಕಠಿಣ ಲಾಕ್‌ಡೌನ್‌ ಸಮಯದಲ್ಲಿ ತರಕಾರಿ ಬೆಲೆಗಳು ಗಗನಕ್ಕೆ ಏರಿದ್ದು, ಜನರ ಜೇಬಿಗೆ ಕತ್ತರಿ ಬೀಳುತ್ತಿದೆ. ಕೆಲವೇ ದಿನಗಳ ಹಿಂದೆ ಕೆ.ಜಿ.ಗೆ 20 ರಿಂದ 30 ರೂ. ಇದ್ದ ಬೀನ್ಸ್‌ ಈಗ 100-130 ರೂ.ಗೆ ಏರಿಕೆಯಾಗಿದೆ.

ಕೆಜಿಗೆ 15 ರಿಂದ 20 ರೂ. ಇದ್ದ ಕ್ಯಾರೇಟ್‌ ಈಗ ಕೆಜಿಗೆ 80 ರೂ. ಆಗಿದೆ. ಕೆಜಿಗೆ 10 ರೂ.ಇದ್ದ ಈರುಳ್ಳಿ ಈಗ 30 ರೂ. ಆಗಿದೆ. ಕೆಜಿಗೆ 8 ರೂ. ಇದ್ದ ಟೊಮೆಟೊ ಈಗ 20 ರೂ. ಗೆ ಏರಿದೆ. ಹಾಗೆಯೇ ಬೆಂಡೆಕಾಯಿ, ಹಿರೇಕಾಯಿ, ಕುಂಬಳಕಾಯಿ, ಕೋಸು, ಗೆಡ್ಡೆಕೋಸು, ಸೊಪ್ಪುಗಳು ಎಲ್ಲವುದರ ಬೆಲೆಯೂ ಏರಿದೆ. 2-5ರೂ.ಗೆ ಸಿಗುತ್ತಿದ್ದ ಒಂದು ಕಟ್ಟು ಕೊತ್ತೂಂಬರಿ ಸೊಪ್ಪು ಈಗ 10 ರೂ. ಕೊಟ್ಟರೂ ಸಿಗುತ್ತಿಲ್ಲ. ತರಕಾರಿ ಜತೆಗೆ ಹಣ್ಣುಗಳ ಬೆಲೆ ಕೂಡ ಏರಿಕೆಯಾಗಿದೆ.

ದುಪ್ಪಟ್ಟು ದರ ಕೊಟ್ಟರೂ ತಾಜಾ ತರಕಾರಿ ಸಿಗುತ್ತಿಲ್ಲ. ತರಕಾರಿ ಮಾರಲು ರೈತರು ಮಾರುಕಟ್ಟೆಗೆ ಬರಲು ಆಗುತ್ತಿಲ್ಲ. ಕಷ್ಟಪಟ್ಟು ಬಂದರೂ ಸಮಯದ ಅಭಾವದಿಂದ ತಮಗೆ ಸಿಕ್ಕ ಬೆಲೆಗೆ ಮಾರಿಬಿಡುತ್ತಾರೆ. ಆದರೆ ಮಧ್ಯವರ್ತಿಗಳು, ವ್ಯಾಪಾರಿಗಳು ಲಾಕ್‌ಡೌನ್‌ ಸಂದರ್ಭದಲ್ಲಿ ದರ ಏರಿಸಿ ಲಾಭ ಮಾಡುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಅಲ್ಲದೆ ಬೇಡಿಕೆ ಹೆಚ್ಚಾಗಿದ್ದು, ತರಕಾರಿ ಪೂರೈಕೆ ಕಡಿಮೆ ಇದ್ದು ಬೆಲೆ ದುಪ್ಪಟ್ಟಾಗಿದೆ. ಹೀಗಾಗಿಯೇ ಹೋಲ್‌ಸೇಲ್‌ನಲ್ಲಿ ಟೊಮೇಟೊ ಕೆಜಿಗೆ 5ರೂ. ನಂತೆ ಸಿಕ್ಕರೆ ನಂತರ 20 ರೂ.ಗೆ ಮಾರಾಟವಾಗುತ್ತಿದೆ. ಕೊರೊನಾ ಹರಡುವುದನ್ನು ತಪ್ಪಿಸಲು ಲಾಕ್‌ಡೌನ್‌ ಅನಿವಾರ್ಯವಾದರೂ ಅಗತ್ಯ ವಸ್ತು ಸೇರಿದಂತೆ ಜನರಿಗೆ ತೊಂದರೆಯಾಗಬಾರದೆಂದು ಜಿಲ್ಲಾಡಳಿತ ಒಂದಿಷ್ಟು ಸಡಿಲತೆ ನೀಡಿದೆ. ಆದರೆ ಇದು ಅವೈಜ್ಞಾನಿಕವಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಒಂದು ಗಂಟೆ ಮಾತ್ರ ವ್ಯಾಪಾರಕ್ಕೆ ಅದೂ ಸಗಟು ಮಾರಾಟಗಾರರು ಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ವಾಸ್ತವವಾಗಿ ಕೊಳ್ಳುವವರಿಗೆ ಸಮಯ ಸಿಗುವುದು ಕೇವಲ ಅರ್ಧಗಂಟೆ ಮಾತ್ರ. ಈ ಸಮಯದಲ್ಲಿ ರೈತರು ಮಾರಾಟ ಮಾಡುವುದಾಗಲಿ ಅಥವಾ ವರ್ತಕರು ಮಾರಾಟ ಮಾಡುವುದಾಗಲಿ ಚಿಲ್ಲರೆ ವ್ಯಾಪಾರಿಗಳು ಅದನ್ನು ಕೊಳ್ಳುವುದಕ್ಕಾಗಲಿ ಅವಕಾಶವೇ ಇಲ್ಲವಾಗಿದೆ. ಇವೆಲ್ಲ ತರಕಾರಿ ದರ ಏರಲು ಕಾರಣವಾಗಿದೆ.

ತರಕಾರಿ ಬೆಲೆ ಏರಿಸುವಂತಿಲ್ಲ. ಹೆಚ್ಚಿಗೆ ಬೆಲೆ ಪಡೆದರೆ ವ್ಯಾಪಾರಸ್ಥರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಆದೇಶ ಹೊರಡಿಸಲಾಗಿದ್ದರೂ ಇವೆಲ್ಲ ಪಾಲನೆಯಾಗುತ್ತಿಲ್ಲ. ಅಲ್ಲದೆ ತರಕಾರಿ ಮಾರುವವರ ಬಳಿ ಬಿಲ್‌ ಪಡೆದು ದೂರು ಕೊಡಲೂ ಸಾಧ್ಯವಿಲ್ಲ. ಹೀಗಾಗಿ ಬೇಕಾದರೆ ತಗೊಳ್ಳಿ ಬೇಡವಾದರೆ ಬಿಡಿ, ಬಿಸಿಲಲ್ಲಿ ಸುತ್ತುವವರು ನಾವು. ನಮಗೂ ಕಷ್ಟ ಇದೆ. ಸಗಟು ವ್ಯಾಪಾರಸ್ಥರು ನಮಗೇನು ಕಡಿಮೆ ಬೆಲೆಗೆ ಕೊಡುವುದಿಲ್ಲ ಎಂಬ ಸಿದ್ಧ ಉತ್ತರಗಳು ಗ್ರಾಹಕನಿಗೆ ಸಿಗುತ್ತಿವೆ.

ಅನಿವಾರ್ಯವಾಗಿ ಗ್ರಾಹಕ ಒಂದಕ್ಕೆ 5 ರಷ್ಟು ಹೆಚ್ಚು ಬೆಲೆ ತೆತ್ತು ತರಕಾರಿ ಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ತೋಟಗಾರಿಕೆ ಇಲಾಖೆ ಈ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಸೊರಬ: ಬಿದಿರಿನ ಬುಟ್ಟಿ ಉದ್ಯಮಕ್ಕೆ ಬಂತು ಸಂಕಷ್ಟ

ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

Sagara ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ

ಕೆ.ಎಸ್ ಈಶ್ವರಪ್ಪ

Shimoga; ಮೋದಿ ಬಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ: ಕೆ.ಎಸ್ ಈಶ್ವರಪ್ಪ

4-shivamogga

LS Polls: ‘ಮೋದಿ ಪ್ರಧಾನಿಯಾಗಿಸಲು ಬಿಜೆಪಿ ಬೆಂಬಲಿಸಿ’

ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ಖಚಿತ: ಒಬಿಸಿ ಜಿಲ್ಲಾಧ್ಯಕ್ಷ ರಮೇಶ್ ಹೇಳಿಕೆ

ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ಖಚಿತ: ಒಬಿಸಿ ಜಿಲ್ಲಾಧ್ಯಕ್ಷ ರಮೇಶ್ ಹೇಳಿಕೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.