ಬೀದಿ ಬದಿ ವ್ಯಾಪಾರಿಗಳಿಗೂ ಆಹಾರ ಕಿಟ್ ನೀಡಿ
Team Udayavani, Jun 3, 2021, 11:09 PM IST
ಶಿವಮೊಗ್ಗ: ಬೀದಿ ಬದಿ ವ್ಯಾಪಾರಿಗಳಿಗೂ ಫುಡ್ ಕಿಟ್ ವಿತರಿಸಬೇಕು ಎಂದು ಬೀದಿ ಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟ ಬುಧವಾರ ಪಾಲಿಕೆ ಮಹಾಪೌರರಿಗೆ ಮನವಿ ಸಲ್ಲಿಸಿತು. ಕೋವಿಡ್ 2ನೇ ಅಲೆ ಉಲ್ಬಣಗೊಂಡಿದೆ.
ಯಾವುದೇ ಅಂಗಡಿ, ಹೋಟೆಲ್ಗಳನ್ನು ಮುಚ್ಚಲಾಗಿದೆ. ಈ ಕಾರಣದಿಂದ ಬೀದಿ ಬದಿ ವ್ಯಾಪಾರಸ್ಥರಿಗೆ ವ್ಯಾಪಾರವಿಲ್ಲದೆ ತುಂಬಾ ತೊಂದರೆಯಾಗಿರುತ್ತದೆ. ಈ ವ್ಯಾಪಾರವನ್ನೇ ನಂಬಿಕೊಂಡು ಊಟ ಮಾಡುತ್ತಿದ್ದೆವು. ಆದರೆ ಈಗ ಯಾವ ವ್ಯಾಪಾರವೂ ಇಲ್ಲದೆ ಕಂಗೆಟ್ಟಿದ್ದೇವೆ ಎಂದು ಮನವಿದಾರರು ಅಳಲು ತೋಡಿಕೊಂಡರು.
ಹಾಲು, ತರಕಾರಿ, ದಿನಸಿ, ಮಾಂಸ, ಔಷ ಧ ಮುಂತಾದ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆದರೆ ಅಂದೇ ದುಡಿದು ತಿನ್ನುವ ಬೀದಿ ಬದಿ ವ್ಯಾಪಾರಿಗಳಿಗೆ ಈಗ ದುಡಿಮೆಯೇ ಇಲ್ಲವಾಗಿದೆ, ಹಣವೂ ಇಲ್ಲವಾಗಿದೆ. ಎಷ್ಟೋ ಜನ ಬೀದಿ ಬದಿ ವ್ಯಾಪಾರಿಗಳು ಇಂದಿರಾ ಕ್ಯಾಂಟೀನ್ ಹಾಗೂ ದಾನಿಗಳು ನೀಡುವ ಆಹಾರದ ಪೊಟ್ಟಣಗಳಿಗಾಗಿ ಕಾಯುತ್ತಿದ್ದಾರೆ.
ಇನ್ನು ಕೆಲವರು ತಮ್ಮ ಕಷ್ಟಗಳನ್ನು ಯಾರ ಹತ್ತಿರವೂ ಹೇಳದೆ ಸ್ವಾಭಿಮಾನದಿಂದ ದುಡಿದು ತಿನ್ನುವ ಅವಕಾಶವೂ ಇಲ್ಲದೆ ಹಸಿವನ್ನು ನುಂಗುತ್ತಾ ಮೌನವಾಗಿ ಇದ್ದಾರೆ ಎಂದು ನೋವು ವ್ಯಕ್ತಪಡಿಸಿದರು. ಹೀಗಾಗಿ ಬೀದಿ ಬದಿ ವ್ಯಾಪಾರಿಗಳಿಗೂ ಫುಡ್ ಕಿಟ್ ಸೇರಿದಂತೆ ಅಗತ್ಯ ನೆರವು ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಚನ್ನವೀರಪ್ಪ ಗಾಮನಗಟ್ಟಿ, ಪ್ರಮುಖರಾದ ಬಿ.ಶೇಷಯ್ಯ, ನಾರಾಯಣ, ಗೋಪಾಲ, ಬಿ.ಕೇಶವಮೂರ್ತಿ, ಇರ್ವಾನ್ ಪಾಷ, ಇಸ್ಮಾಯಿಲ್, ಮಂಜುನಾಥ್ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ