ನಿಲ್ಲದ ಸೋಂಕಿನ ಯಾತ್ರೆ-ಲಾಕ್‌ಡೌನ್‌ನಲ್ಲೂ ಜನರ ಜಾತ್ರೆ!


Team Udayavani, Jun 9, 2021, 10:31 PM IST

1-19

ಶಿವಮೊಗ್ಗ: ಜಿಲ್ಲೆಯಲ್ಲಿ ಕಠಿಣ ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಜನರ ಅನಗತ್ಯ ಓಡಾಟ ಮಾತ್ರ ಎಗ್ಗಿಲ್ಲದೆ ಸಾಗಿದೆ. ಕೊರೊನಾ ಸೋಂಕಿನ ಸರಪಳಿ ತುಂಡರಿಸಲು ಜೂ.14 ರವರೆಗೆ ಜಿಲ್ಲಾಡಳಿತ ಕಠಿಣ ಲಾಕ್‌ಡೌನ್‌ ಜಾರಿಗೊಳಿಸಿ ಆದೇಶಿಸಿದೆ. ಆದರೆ ಜನರ ಓಡಾಟ ಗಮನಿಸಿದರೆ ಈ ಆದೇಶ ಯಾರಿಗೆ ಎಂಬ ಪ್ರಶ್ನೆ ಮೂಡಿದೆ. ಕಳೆದ 20 ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಪ್ರತಿದಿನ ಏರುಗತಿಯಲ್ಲಿ ಸಾಗಿತ್ತು.

ಸೋಂಕಿತರ ಸಾವಿನ ಸಂಖ್ಯೆಯೂ ಪ್ರತಿದಿನ 10 ಕ್ಕಿಂತ ಹೆಚ್ಚು ದಾಖಲಾಗುತ್ತಿತ್ತು. ಕೊರೊನಾ ಸೋಂಕು-ಸಾವು ತಹಬದಿಗೆ ತರಲು ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಅಧಿಕಾರಿಗಳು ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪನವರ ನೇತೃತ್ವದಲ್ಲಿ ಸರಣಿ ಸಭೆಗಳನ್ನು ನಡೆಸಿ ಅನೇಕ ನಿರ್ಣಯ ಕೈಗೊಳ್ಳಲಾಗಿತ್ತು. ಅಲ್ಲದೆ ಲಾಕ್‌ಡೌನ್‌ನ್ನು ಮತ್ತಷ್ಟು ಬಿಗಿಗೊಳಿಸಲು ತೀರ್ಮಾನಿಸಲಾಗಿತ್ತು. ಮೊದಲು ವಾರದಲ್ಲಿ 2 ದಿನ ಕಠಿಣ ಲಾಕ್‌ಡೌನ್‌ ಇದ್ದದ್ದು ನಂತರ ವಾರಾಂತ್ಯದವರೆಗೂ ವಿಸ್ತರಣೆಯಾಯಿತು. ಕೇವಲ ಬೆಳಿಗ್ಗೆ 6 ರಿಂದ 7ರ ವರೆಗೆ ಮಾತ್ರ ದಿನಸಿ ಹಾಗೂ ತರಕಾರಿ ಖರೀದಿಗೆ ಅವಕಾಶ ನೀಡಲಾಗಿತ್ತು. ಈಗ ಅದನ್ನು ಸದ್ಯ ಬೆಳಿಗ್ಗೆ 8 ರವರೆಗೆ ವಿಸ್ತರಿಸಿದ್ದರೂ ಕೂಡ ತರಕಾರಿ ಮಾರುಕಟ್ಟೆಯಲ್ಲಿ 7 ಗಂಟೆಗೆ ವ್ಯಾಪಾರ ಸ್ಥಗಿತಗೊಳಿಸಲಾಗುತ್ತಿದೆ.

ಕೆಲವೊಂದು ಕಠಿಣ ನಿಯಮಗಳಿಂದ ಸೋಂಕು ಸ್ವಲ್ವ ಇಳಿಮುಖವಾಗಿದ್ದರೂ ಸಾವಿನ ಸಂಖ್ಯೆ ಕಡಿಮೆಯಾಗಿಲ್ಲ. ಹೀಗಾಗಿ ಮತ್ತೂಂದು ವಾರ ಕಠಿಣ ಲಾಕ್‌ಡೌನ್‌ ಮುಂದುವರಿಸಲಾಗಿದೆ. ಆದರೆ ಜನ ಮಾತ್ರ ಇದಕ್ಕೆ ಸ್ಪಂದಿಸದೆ ಸುತ್ತಾಡುತ್ತಲೇ ಇದ್ದಾರೆ. ಲಾಕ್‌ಡೌನ್‌ ಜಾರಿಯಾದ ದಿನದಿಂದ ಪೊಲೀಸರು ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ವಾಹನ ವಶ ಪಡಿಸಿಕೊಳ್ಳುವುದು, ದಂಡ ಹಾಕುವುದು ಎಲ್ಲ ಮಾಡುತ್ತಿದ್ದರೂ ಜನ ಮಾತ್ರ ಭಯವಿಲ್ಲದೆ ಓಡಾಟ ಮುಂದುವರಿಸಿದ್ದಾರೆ. ಅನಗತ್ಯವಾಗಿ ರಸ್ತೆಗಳಿದವರನ್ನು ಠಾಣೆಗೆ ಕರೆದೊಯ್ದು, ಅವರಿಗೆ ತಿಳಿಹೇಳಿ, ಸೋಂಕಿನ ಬಗ್ಗೆ ಪೊಲೀಸರೇ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ.

ಆದರೆ ಪೊಲೀಸರ ಯಾವ ಪ್ರಯತ್ನವೂ ಜನರನ್ನು ನಾಟುತ್ತಿಲ್ಲ. ಹಲವು ನೆಪಗಳನ್ನು ಒಡ್ಡಿ ಜನ ಮನೆಯಿಂದ ಹೊರಬರುತ್ತಿರುವುದು ನಿಂತಿಲ್ಲ. ಪೊಲೀಸರೂ ಜನರ ನಿಯಂತ್ರಣ ಅಸಾಧ್ಯ ಎಂದು ಸುಮ್ಮನಾದಂತಿದೆ. ಹೀಗಾಗಿ ಕಠಿಣ ಲಾಕ್‌ಡೌನ್‌ ಇದ್ದರೂ ಮಂಗಳವಾರ ಸಾರ್ವಜನಿಕರ ಓಡಾಟ ಉಳಿದ ದಿನಕ್ಕಿಂತ ಹೆಚ್ಚಿತ್ತು. ಸೋಂಕು ಇಳಿಮುಖವಾಗುತ್ತಿರುವುದು ಜನರಲ್ಲಿನ ಭಯವನ್ನೂ ಕಡಿಮೆಯಾಗಿಸಿತೇ ಎಂಬ ಅನುಮಾನ ಮೂಡುವಂತಿತ್ತು. ಲಾಕ್‌ ಡೌನ್‌ ಇದೆ ಎಂಬುದನ್ನೇ ಮರೆತಂತೆ ಮಾರುಕಟ್ಟೆಗಳಲ್ಲಿ ಜನಜಂಗುಳಿ ಉಂಟಾಗಿತ್ತು.

ಕಳೆದೆರಡು ದಿನಗಳಿಂದ ಪೊಲೀಸರು ದಂಡ ಹಾಕುವ ಪ್ರಕ್ರಿಯೆಯನ್ನು ಕಡಿಮೆ ಮಾಡಿರುವುದು ಕೂಡ ಜನರ ಓಡಾಟಕ್ಕೆ ಪರೋಕ್ಷ ಬೆಂಬಲ ನೀಡಿದಂತಾಗಿತ್ತು. ಇದಲ್ಲದೆ ಹಲವು ಬಡಾವಣೆಗಳಲ್ಲಿ ಕೆಲ ಅಂಗಡಿಗಳೂ 10 ಗಂಟೆ ನಂತರವೂ ತೆರೆದಿದ್ದವು. ಅಲ್ಲದೆ ಕೆಲವೆಡೆ ಕದ್ದುಮುಚ್ಚಿ ವ್ಯಾಪಾರವೂ ನಡೆದಿತ್ತು. ಅಗತ್ಯ ಕೆಲಸಗಳಿಗಾಗಿ ಮನೆಯಿಂದ ಹೊರಬಂದ ವರು ಒಂದೆಡೆಯಾದರೆ ಕೆಲವರು ಅನಗತ್ಯವಾಗಿ ರಸ್ತೆಗಳಿದಿದ್ದರಿಂದ ವಾಹನ ಸಂಚಾರ ಹೆಚ್ಚಿತ್ತು. ಇನ್ನು ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ.

ಸಗಟು ತರಕಾರಿ ವ್ಯಾಪಾರಕ್ಕೆ ಅವಕಾಶವಿದ್ದುದರಿಂದ ತಮ್ಮ ವಾಹನಗಳ ಜೊತೆಗೆ ಮಾರುಕಟ್ಟೆ ಒಳಗೆ ಹೋಗಿ ಸಾಮಾಜಿಕ ಅಂತರ ಮರೆತು ಮುಗಿಬಿದ್ದು ತರಕಾರಿ ಖರೀದಿಸಿದರು. ಚಿಲ್ಲರೆ ವ್ಯಾಪಾರಿಗಳು ಸಹ ಮಾರುಕಟ್ಟೆಯಲ್ಲಿ ಖರೀದಿಗೆ ಬಂದಿದ್ದರಿಂದ ಸಹಜವಾಗಿಯೇ ಜನಜಂಗುಳಿ ಹೆಚ್ಚಿತ್ತು. ಅವಶಕ್ಯಕ ವಸ್ತುಗಳ ಖರೀದಿಗೆ ಅವಕಾಶ ನೀಡಿದ ಸಮಯ ಮುಗಿದ ನಂತರವೂ ಬಹುತೇಕ ರಸ್ತೆಗಳು ಜನರಿಂದ ತುಂಬಿದ್ದವು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.