ರಸ್ತೆ ಅಗಲೀಕರಣ ಸಮರ್ಪಕವಾಗಿರಲಿ: ಈಶ್ವರಪ್ಪ


Team Udayavani, Jun 25, 2021, 11:08 PM IST

25-20

ಭದ್ರಾವತಿ: ಸಾರ್ವಜನಿಕ ಉಪಯೋಗಕ್ಕೆ ಸರ್ಕಾರ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳಿಗೆ‌ ಅಗತ್ಯವಾದಲ್ಲಿ ಖಾಸಗಿ ಸ್ವತ್ತುಗಳನ್ನು ಅದರ ಮಾಲೀಕರಿಗೆ ನಿಗ ದಿತ ಪರಿಹಾರ ನೀಡಿ ಅದನ್ನು ಕಾಮಗಾರಿಗಾಗಿ ವಶಪಡಿಸಿಕೊಳ್ಳುವುದು ನ್ಯಾಯಸಮ್ಮತವಾಗಿರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ನಗರದ ರಂಗಪ್ಪ ವೃತ್ತದ ಬಳಿ ಕೋರ್ಟ್‌ ಮುಂಭಾಗದ ರಸ್ತೆಯ ಅಗಲೀಕರಣದ ಕಾಮಗಾರಿಯಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಿ ರಸ್ತೆ ವಿಸ್ತೀರ್ಣ ಕಾರ್ಯ ಸಮರ್ಪಕವಾಗಿ ಆಗುವಂತೆ ಮಾಡಬೇಕೆಂದು ಭದ್ರಾವತಿ ವಕೀಲರ ಸಂಘ ಸಾರ್ವಜನಿಕ ಹಿತಾಸಕ್ತಿಯಿಂದ ನಡೆಸಿದ ಹೋರಾಟ ಹಾಗೂ ಮನವಿಗೆ ಪೂರಕವಾಗಿ ಸಮಸ್ಯೆಯ ಇತ್ಯರ್ಥಕ್ಕಾಗಿ ಗುರುವಾರ ವಕೀಲರ ಸಂಘದ ಪದಾಧಿಕಾರಿಗಳ ಹಾಗೂ ರಸ್ತೆ ಅಗಲೀಕರಣದ ಕಾಮಗಾರಿಗೆ ತೊಡಕಾಗಿರುವ ಕೋರ್ಟ್‌ ಮುಂದಿನ ಕೆಲವು ಕಟ್ಟಡಗಳ ಮಾಲೀಕರ ಜಂಟಿಸಭೆಯನ್ನು ವಿಐಎಸ್‌ಎಲ್‌ ಅತಿಥಿಗೃಹದಲ್ಲಿ ನಡೆಸಿ ಉಭಯ ಪಕ್ಷಗಾರರ ಮಾತನ್ನು ಆಲಿಸಿ ಅವರು ಮಾತನಾಡಿದರು.

ಕೋರ್ಟ್‌ ಮುಂದಿನ ರಸ್ತೆ ಅಗಲೀಕರಣವಾಗ ಬೇಕೆಂಬ ವಕೀಲರ ಸಂಘದ ಸಾಮಾಜಿಕ ಕಳಕಳಿ ಸಮರ್ಥನೀಯವಾಗಿದೆ. ಅದೇ ರೀತಿ ರಸ್ತೆ ಅಗಲೀಕರಣಕ್ಕೆ ಅಲ್ಲಿನ ರಸ್ತೆ ಬದಿಯ ಯಾವ ಕಟ್ಟಡಗಳನ್ನು ತೆರವುಗೊಳಿಸಬೇಕಾಗುತ್ತದೆಯೋ ಅಂತಹ ಖಾಸಗಿ ವ್ಯಕ್ತಿಗಳಿಗೆ ನಿಗ ದಿತ ಪರಿಹಾರ ನೀಡಬೇಕೆನ್ನುವ ಬೇಡಿಕೆ ಸಹ ಸರಿಯಾದುದು ಎಂದರು.

ವಕೀಲರ ಸಂಘದ ಅಧ್ಯಕ್ಷ ವಿ. ವೆಂಕಟೇಶ್‌ ಹಾಗೂ ವಕೀಲರಾದ ಕೆ.ಎನ್‌. ಶ್ರೀಹರ್ಷ, ಕೆ.ಎಸ್‌. ಸುಧಿಧೀಂದ್ರ, ಮಂಗೋಟೆ ರುದ್ರೇಶ್‌ ಮಾತನಾಡಿ, ರಸ್ತೆ ಅಗಲೀಕರಣ ಅಸಮರ್ಪಕವಾಗಿದೆ. ರಸ್ತೆ ಅಗಲೀಕರಣದ ನೆಪದಲ್ಲಿ ಸಾಲುಮರಗಳನ್ನು ಕಡಿದು, ರಸ್ತೆಯನ್ನೂ ಸಹ ಸರಿಯಾಗಿ ಅಗಲೀಕರಣ ಮಾಡದಿರುವ ಕಾರಣ ವಕೀಲರ ಸಂಘ ಸರ್ವಜನಿಕವಾಗಿ ಪ್ರತಿಭಟನೆ ನಡೆಸಿ ವರ್ಷ ಕಳೆದರೂ ಈ ಸಮಸ್ಯೆ ಬಗೆಹರಿಸಿಲ್ಲ. ಈಗ ತಾಲೂಕು ಕಚೇರಿ ಮುಂಭಾಗದವರೆಗೆ ಮಾಡಿರುವ ರಸ್ತೆ ಅಗಲೀಕರಣದ ವಿಸ್ತೀರ್ಣವನ್ನೇ ಮುಂದುವರಿಸಿ ಕೋರ್ಟ್‌ ಮುಂಭಾಗದ ರಸ್ತೆ ಸಮರ್ಪಕವಾಗಿ ಅಗಲೀಕರಣ ಮಾಡಬೇಕು ಎಂದರು.

ಜಿಲ್ಲಾ ಧಿಕಾರಿ ಶಿವಕುಮಾರ್‌, ನಗರಸಭೆ ಆಯುಕ್ತ ಪರಮೇಶ್‌, ತಹಶೀಲ್ದಾರ್‌ ಸಂತೋಷ್‌ ಕುಮಾರ್‌, ಡಿವೈಎಸ್‌ಪಿ, ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಂಡಕಿ ಇದ್ದರು.

ಸಭೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಪ್ರಭಾಕರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ. ಶ್ರೀನಾಥ್‌, ವಕೀಲರ ಸಂಘದ ಉಪಾಧ್ಯಕ್ಷ ಜಯರಾಂ, ಕಾರ್ಯದರ್ಶಿ ರಾಜು, ಖಜಾಂಚಿ ರಂಗಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.