ನೈಜ ಫಲಾನುಭವಿಗಳಿಗೆ ಸೂರು ಸೌಲಭ್ಯ ಸಿಗಲಿ


Team Udayavani, Jul 16, 2021, 10:48 PM IST

16-18

ಹಿರಿಯೂರು: ಪ್ರಧಾನಮಂತ್ರಿ ವಸತಿ ಯೋಜನೆಗೆ ಈ ಹಿಂದಿನ ಸಾಲಿನಲ್ಲಿ ಸುಮಾರು 648 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಈ ಫಲಾನುಭವಿಗಳ ಸ್ಥಿತಿ ಅತಂತ್ರವಾಗಿದ್ದು, ಇದುವರೆಗೂ ಈ ಫಲಾನುಭವಿಗಳ ಪರಿಸ್ಥಿತಿ ಏನಾಗಿದೆ ಎಂಬ ಬಗ್ಗೆ ನಮ್ಮ ಕೌನ್ಸಿಲ್‌ ಸಭೆಗೆ ಯಾವುದೇ ಸರಿಯಾದ ಮಾಹಿತಿಯಿಲ್ಲ. ಆದರೂ ನಗರದಲ್ಲಿ ಸೂರಿಲ್ಲದ ನಿಜವಾದ ನೈಜ ಫಲಾನುಭವಿಗಳಿಗೆ ಸೂರು ಸಿಗುವಂತಾಗಬೇಕು ಎಂಬುದು ನಮ್ಮ ಉದ್ದೇಶ ಎಂದು ನಗರಸಭೆ ಸದಸ್ಯ ಅಜಯ್‌ಕುಮಾರ್‌ ಹೇಳಿದರು.

ನಗರಸಭೆ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಶಂಶುನ್ನೀಸಾ ಅವರ ಅಧ್ಯಕ್ಷೆಯಲ್ಲಿ ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನಮಂತ್ರಿ ವಸತಿ ಯೋಜನೆಗಳ ಫಲಾನುಭವಿಗಳ ಸಂಪೂರ್ಣ ಆಯ್ಕೆಯ ಜವಾಬ್ದಾರಿ ಕ್ಷೇತ್ರದ ಶಾಸಕರು ಅಧ್ಯಕ್ಷರಾಗಿರುವ ಆಶ್ರಯ ಸಮಿತಿಯದಾಗಿದೆ. ಈ ಸಮಿತಿಗೆ ನಗರಸಭೆ ಅಧ್ಯಕ್ಷರು ಸದಸ್ಯರಾಗಿದ್ದಾರೆ. ಆದರೆ ನಗರಸಭೆ ಅಧ್ಯಕ್ಷರಿಗೆ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಅಲ್ಲದೆ ತಾಲೂಕಿನಲ್ಲಿ ಇನ್ನೂ ಆಶ್ರಯ ಸಮಿತಿಯನ್ನೇ ರಚಿಸಲಾಗಿಲ್ಲ ಎಂದು ಆಕ್ಷೇಪಿಸಿದರು.

ನಗರಸಭೆ ಸದಸ್ಯ ಹಾಗೂ ವಕೀಲ ಜಿ.ಎಸ್‌. ತಿಪ್ಪೇಸ್ವಾಮಿ ಮಾತನಾಡಿ, ಪ್ರಧಾನಮಂತ್ರಿ ವಸತಿ ಯೋಜನೆ ಈಗ ಇನ್ನೂ ಅತಂತ್ರ ಸ್ಥಿತಿಯಲ್ಲಿ ಇರುವಾಗಲೇ ಮಧ್ಯವರ್ತಿಗಳು ನಿಮಗೆ ಮನೆ ಕೊಡಿಸುವುದಾಗಿ ನಗರದ ಅಮಾಯಕ ಬಡವರಿಂದ ಸುಮಾರು 30 ರಿಂದ 40 ಸಾವಿರ ರೂಪಾಯಿ ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಹಿಂದಿನ ಸಾಲಿನ 648 ಫಲಾನುಭವಿಗಳ ಪರಿಸ್ಥಿತಿ ಏನಾಗಿದೆ ಅಂತ ತಿಳಿದು ಬಂದಿಲ್ಲ. ಆದರೂ ಸರ್ಕಾರ ಮತ್ತೆ 1124 ವಸತಿ ಮಂಜೂರಾತಿ ನೀಡಿದೆ. ಮಹಿಳೆಯರು ಬಡವರು ಅರ್ಜಿ ಹಿಡಿದು ನಗರಸಭೆಗೆ ದಿನಗಟ್ಟಲೆ ಅಲೆಯುವಂತಾಗಿದೆ. ಈ ಲೂಟಿ ನಿಲ್ಲಬೇಕು. ಸೂರಿಲ್ಲದ ನೈಜ ಫಲಾನುಭವಿಗಳಿಗೆ ಈ ಮನೆಗಳು ದೊರಕುವಂತಾಗಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ಹೇಳಿದರು.

ಸದಸ್ಯ ಈರಲಿಂಗೇಗೌಡ ಮಾತನಾಡಿ, ಈ ಯೋಜನೆಯ ಬಗ್ಗೆ ಫಲಾನುಭವಿಗಳಿಗೆ ಸರಿಯಾದ ಮಾಹಿತಿ ಇಲ್ಲ. ಈ ಯೋಜನೆಯಲ್ಲಿ ನಿರ್ಮಿಸುವ ಜಿ+2 ಮನೆಗಳಿಗೆ ಜನರಲ್‌ ಕೆಟಗರಿಗೆ 3.80 ಲಕ್ಷ ರೂ.ಗಳನ್ನು ಕಟ್ಟಬೇಕಿದೆ. ಎಸ್‌ಸಿ-ಎಸ್‌ಟಿ ಫಲಾನುಭವಿಗಳು 2.80 ರೂ. ಕಟ್ಟಬೇಕಿದೆ. ಸೂರಿಲ್ಲದ ನಿರ್ಗತಿಕರು, ಬಡವರು ಈ ಹಣ ಎಲ್ಲಿಂದ ಭರಿಸಲು ಸಾಧ್ಯ, ಇದನ್ನು ಫಲಾನುಭವಿಗಳಿಗೆ ಸ್ಪಷ್ಟವಾಗಿ ತಿಳಿಸಬೇಕೆಂದರು.

ಸದಸ್ಯ ಗುಂಡೇಶ್‌ಕುಮಾರ್‌ ಮಾತನಾಡಿ, ವಸತಿ ಯೋಜನೆ ಪ್ರದೇಶಕ್ಕೆ ರಸ್ತೆ, ಕುಡಿಯುವ ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ನೀಡಲು ನಗರಸಭೆ ಪೌರಾಡಳಿತ ನಿರ್ದೇಶನಾಲಯದ ಆದೇಶದಂತೆ ಸುಮಾರು 16 ಕೋಟಿ ರೂ. ಗಳನ್ನು ಪಾವತಿಸಬೇಕಿದೆ. ನಮ್ಮ ನಗರ ಸಭೆ ಅಷ್ಟೊಂದು ಸಂಪದ್ಭರಿತವಾಗಿದೆಯೇ, ನಮ್ಮ ನಗರಸಭೆಗೆ ಕಳೆದ 3 ವರ್ಷಗಳಿಂದ ಕ್ಷೇತ್ರದ ಶಾಸಕರು ಯಾವುದೇ ಅನುದಾನವನ್ನು ತಂದಿಲ್ಲ. ಆದ್ದರಿಂದ ಈ ಯೋಜನೆ ಯಾವುದೇ ಕಾರಣಕ್ಕೂ ಇಲ್ಲಿ ಸಾಕಾರಗೊಳ್ಳುವುದಿಲ್ಲ ಎಂದು ಹೇಳಿದರು.

ನಗರಸಭೆ ಮಾಜಿ ಅಧ್ಯಕ್ಷ ಇ. ಮಂಜುನಾಥ್‌ ಮಾತನಾಡಿ, ಈ ಯೋಜನೆ ವಿಚಾರವಾಗಿ 2019ರಲ್ಲಿ ಇದಕ್ಕೆ ಕೌನ್ಸಿಲ್‌ ಸಭೆ ಅನುಮೋದನೆ ನೀಡಿದೆ. ಆದರೆ ಕೆಲಸ ಇನ್ನೂ ಆಗಿಲ್ಲ. ಇದರಿಂದ ನಮ್ಮ ನಗರಕ್ಕೆ ಸರಹದ್ದು ನಿಗದಿ ಮಾಡದೆ ನಗರಸಭೆಗೆ ಖಾತೆ ಮಾಡುವಲ್ಲಿ ನಗರಸಭೆಗೆ ನಷ್ಟವಾಗುತ್ತಿದೆ ಎಂದು ಆರೋಪಿಸಿದರು.

ಇದಕ್ಕೆ ಉತ್ತರಿಸಿದ ನಗರ ಯೋಜನೆ ತಾಂತ್ರಿಕ ಅ ಧಿಕಾರಿ ಮಧು, ತಾಂತ್ರಿಕ ಸಿಬ್ಬಂದಿಗಳ ಕೊರತೆ ಹಾಗೂ ಕೊರೊನಾ ಲಾಕ್‌ಡೌನ್‌ ಕಾರಣಗಳಿಂದ ಈ ಕೆಲಸ ವಿಳಂಬವಾಗಿದೆ. ಶೀಘ್ರದಲ್ಲಿ ಈ ಕೆಲಸ ಮುಗಿಸಿ ಟೆಂಡರ್‌ ಕರೆದು ಅನುಮೋದನೆ ಮಾಡಲಾಗುವುದು ಎಂದರು. ಸ್ಥಾಯಿಸಮಿತಿ ಅಧ್ಯಕ್ಷ ಚಿತ್ರಜಿತ್‌ ಯಾದವ್‌, ನಗರಸಭೆ ಪೌರಾಯುಕ್ತ ಡಿ. ಉಮೇಶ್‌ ಹಾಗೂ ನಗರಸಭೆ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.