ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗೆ ರಾಘವೇಂದ್ರ ಮನವಿ


Team Udayavani, Aug 5, 2021, 6:48 PM IST

5-16

ಶಿವಮೊಗ್ಗ: ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಸಂಸದ ಬಿ.ವೈ. ರಾಘವೇಂದ್ರ ಮಂಗಳವಾರ ಕೇಂದ್ರ ರೈಲ್ವೆ ಸಚಿವರಾದ ಅಶ್ವಿ‌ನಿ ವೈಷ್ಣವ್‌ ಅವರಿಗೆ ಮನವಿ ಸಲ್ಲಿಸಿದರು. 76 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ಹತ್ತಿರದ ಕೋಟೆಗಂಗೂರಿನಲ್ಲಿ ರೈಲ್ವೆ ಕೋಚಿಂಗ್‌ ಡಿಪೋ ನಿರ್ಮಿಸಲು ಈಗಾಗಲೇ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ರಾಜ್ಯ ಸರ್ಕಾರ 43.14 ಎಕರೆ ಭೂಮಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಸಾರ್ವಜನಿಕರಿಂದ ಖರೀದಿಸಿ ನೀಡಲಾಗುತ್ತಿದ್ದು, ರೈಲ್ವೆ ಇಲಾಖೆಯು ಈಗಾಗಲೇ ಯೋಜನೆಯ ಪ್ರಾಥಮಿಕ ಹಂತದ ಕಾಮಗಾರಿಗಳ ಅನುಷ್ಠಾನಕ್ಕೆ ಏಜೆನ್ಸಿಯನ್ನು ನಿಗದಿಪಡಿಸಿದೆ.

ಆದಷ್ಟು ಬೇಗನೇ ರೈಲ್ವೆ ಇಲಾಖೆಯ ವತಿಯಿಂದ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಬೇಕಾಗಿರುವ ರೈಲ್ವೆ ಕೋಚಿಂಗ್‌ ಡಿಪೋ ನಿರ್ಮಾಣ ಕಾರ್ಯವನ್ನು ಆದಷ್ಟು ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಶಿವಮೊಗ್ಗ-ಶಿಕಾ ರಿಪುರ-ರಾಣಿಬೆನ್ನೂರು ಹೊಸ ರೈಲ್ವೆ ಮಾರ್ಗಕ್ಕೆ ಶೇ.50ರಷ್ಟು ಅನುದಾನವನ್ನು ನೀಡುತ್ತಿದ್ದು, ಈಗಾಗಲೇ ಅಗತ್ಯವಿರುವ 427 ಎಕರೆ ಭೂ ಸ್ವಾ ಧೀನ ಪೈಕಿ ಈಗಾಗಲೇ 378 ಎಕರೆ ಭೂಮಿಯನ್ನು ಸ್ವಾ ಧೀನಪಡಿಸಿಕೊಳ್ಳಲಾಗಿದ್ದು, ರೈಲ್ವೆ ಇಲಾಖೆಯಿಂದ ಆದಷ್ಟು ಬೇಗನೇ 2021-22ರ ಕೇಂದ್ರ ಆಯವ್ಯಯದಲ್ಲಿ ಘೋಷಿಸಿರುವಂತೆ 100 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ ಅನುಷ್ಠಾನಕ್ಕೆ ಟೆಂಡರ್‌ ಆಹ್ವಾನಿಸುವಂತೆ ಮನವಿ ಮಾಡಿದರು.

ಜಗತ್ಪಸಿದ್ದ ಜೋಗ ಜಲಪಾತಕ್ಕೆ ಗೇಟ್‌ವೇ ಎನಿಸಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಂಬಗಾರು ರೈಲ್ವೆ ನಿಲ್ದಾಣದ ಸಮಗ್ರ ಅಭಿವೃದ್ಧಿಯಾಗಬೇಕಿದ್ದು, ಈ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಹೊಸ ರೈಲ್ವೆ ನಿಲ್ದಾಣ ಕಟ್ಟಡ ಹಾಗೂ 2ನೇ ಫ್ಲಾಟ್‌ ಫಾರಂ ಸೇರಿದಂತೆ ಇನ್ನಿತರೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಕೋರಿದರು. 2019ರಲ್ಲಿ ಶಿವಮೊಗ್ಗದಿಂದ ರೇಣಿಗುಂಟ ಮತ್ತು ಚೆನ್ನೆ çಗೆ ವಾರದಲ್ಲಿ ಎರಡು ದಿನಗಳ ಎರಡು ಹೊಸ ರೈಲುಗಳ ಓಡಾಟ ಪ್ರಾರಂಭಿಸಲಾಗಿತ್ತಾದರೂ, ಈ ರೈಲುಗಳ ಸಮಯವು ಸೂಕ್ತವಾಗಿರದ ಕಾರಣ, ಪ್ರಯಾಣಿಕರಿಗೆ ಅನುಕೂಲಕರ ವಾಗಿರುವುದಿಲ್ಲ.

ಆದ್ದರಿಂದ ಈ ಎರಡೂ ರೈಲುಗಳನ್ನು ಒಗ್ಗೂಡಿಸಿ ವಾರದಲ್ಲಿ ನಾಲ್ಕು ದಿನಗಳು ಶಿವಮೊಗ್ಗದಿಂದ ಚೆನ್ನೆ ಗೆ ರೇಣಿಗುಂಟ ಮಾರ್ಗವಾಗಿ ಚಲಿಸುವಂತೆ ಮಾಡಿದ್ದಲ್ಲಿ, ಪ್ರಯಾಣಿಕರಿಗೆ ಅನುಕೂಲವಾಗುತ್ತದೆ ಎಂಬ ಅಂಶವನ್ನು ಸಭೆಯ ಗಮನಕ್ಕೆ ತಂದರು.

ಪ್ರಸಿದ್ಧ ಯಾತ್ರಾ ಸ್ಥಳವಾದ ಕೊಲ್ಲೂರಿನ ಮೂಕಾಂಬಿಕ ದೇವಸ್ಥಾನಕ್ಕೆ ಹೋಗುವವರಿಗೆ ಇಳಿಯಲು ಮುಕಾಂಬಿಕ ರೋಡ್‌ ಬೈಂದೂರು ರೈಲ್ವೆ ನಿಲ್ದಾಣವು ಹತ್ತಿರದ ಸ್ಟೇಷನ್‌ ಆಗಿದ್ದು, ಗರೀಬ್‌ ರಥ್‌ ಎಕ್ಸೆಸ್‌ ರೈಲಿಗೆ ಈ ನಿಲ್ದಾಣಕ್ಕೆ ನಿಲುಗಡೆಯನ್ನು ನೀಡಿದ್ದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ಇಲ್ಲಿ ಇಳಿದು ಕೊಲ್ಲೂರಿಗೆ ತೆರಳಲು ಅತ್ಯಂತ ಉಪಯುಕ್ತ ಆಗುವುದನ್ನು ಸಭೆಯ ಗಮನಕ್ಕೆ ತರಲಾಯಿತು.

ಈ ಬಗ್ಗೆ ಆದಷ್ಟು ತ್ವರಿತವಾಗಿ ನಿಲುಗಡೆ ನೀಡುವ ವ್ಯವಸ್ಥೆಗೆ ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.