28ಕ್ಕೆ “ನಮ್ಮೊಲುಮೆ’ಯ ಭಾವಾಭಿನಂದನಾ ಕಾರ್ಯಕ್ರಮ
ಮಾಜಿಸಭಾಪತಿ ಶಂಕರಮೂರ್ತಿಅವರಿಂದಅಭಿನಂದನಾ ನುಡಿ
Team Udayavani, Feb 25, 2021, 6:04 PM IST
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪನವರಿಗೆ ಜಿಲ್ಲೆಯ ಸಮಸ್ತ ನಾಗರಿಕರ ಪರವಾಗಿ “ನಮ್ಮೊಲುಮೆ’ಯ ಭಾವಾಭಿನಂದನಾ
ಕಾರ್ಯಕ್ರಮ ಫೆ.28 ರಂದು ಸಂಜೆ 6 ಗಂಟೆಗೆ ಹಳೇ ಜೈಲು ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಎಸ್.ರುದ್ರೇಗೌಡ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಮಸ್ತ ನಾಗರಿಕರ ಪರವಾಗಿ ನಾಡಿನ ಮತ್ತು ಜಿಲ್ಲೆಯ ಹೆಮ್ಮೆಯ ಅಭಿವೃದ್ಧಿಯ ಹರಿಕಾರ, ಸರ್ವಜನ ಹಿತಚಿಂತಕ, ಸಾರ್ಥಕ ಸಾಧನೆಗಳ ಸಮಷ್ಠಿ ಪ್ರಜ್ಞೆಯ ಜನನಾಯಕ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪನವರಿಗೆ ಅಭಿನಂದನೆ ಸಮಾರಂಭ ಆಯೋಜಿಸಲಾಗಿದೆ. ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿ ಅಭಿನಂದನಾ
ನುಡಿಗಳನ್ನಾಡುವರು ಎಂದು ತಿಳಿಸಿದರು.
ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜಕಾರಣದ ತ್ರಿವಿಕ್ರಮ ಪುಸ್ತಕ ಬಿಡುಗಡೆ ಮಾಡುವರು. ಅವರ ಜತೆಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ಕುಮಾರ್ ಬಂಗಾರಪ್ಪ, ಕೆ.ಬಿ.ಅಶೋಕ್ ನಾಯ್ಕ, ಆಯನೂರು ಮಂಜುನಾಥ್, ಭಾರತಿ ಶೆಟ್ಟಿ, ಸೂಡಾ ಅಧ್ಯಕ್ಷ ಎಸ್. ಎಸ್.ಜ್ಯೋತಿ ಪ್ರಕಾಶ್, ಮಾಜಿ ಶಾಸಕ ಎಚ್. ಎಂ.ಚಂದ್ರಶೇಖರಪ್ಪ ಉಪಸ್ಥಿತರಿರುವರು ಎಂದರು.
ಸಮಿತಿಯ ಇನ್ನೋರ್ವ ಮುಖಂಡ ಡಿ.ಎಸ್. ಅರುಣ್ ಮಾತನಾಡಿ, ಮುಖ್ಯಮಂತ್ರಿಗಳ ಸನ್ಮಾನದ ನಂತರ ನಾಡಿನ ಹೆಸರಾಂತ ಗಾಯಕರಾದ ವಿಜಯ್ ಪ್ರಕಾಶ್ ಹಾಗೂ ರಾಜೇಶ್ ಕೃಷ್ಣನ್ ಅವರಿಂದ ವಿಶೇಷ ಸಂಯೋಜನೆಯ ಭಾವಾಭಿನಂದನ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಅನುಶ್ರೀ ನಿರೂಪಿಸಲಿದ್ದಾರೆ ಎಂದರು.
ಮಾ.1ರಂದು ಸಂಜೆ 6 ಗಂಟೆಗೆ ಇದೇ ಸ್ಥಳದಲ್ಲಿ ಆಳ್ವಾಸ್ ನುಡಿಸಿರಿ ತಂಡದವರಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ 250 ಕಲಾವಿದರು ಭಾಗವಹಿಸಲಿದ್ದು, ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸುವರು. ಡಾ|ಮೋಹನ್ ಆಳ್ವಾ ಅಧ್ಯಕ್ಷತೆ ವಹಿಸುವರು. ಪ್ರಮುಖರಾದ ಟಿ.ಡಿ.ಮೇಘರಾಜ್, ಕೆ.ಎಸ್. ಗುರುಮೂರ್ತಿ, ಸುವರ್ಣಶಂಕರ್, ಎಂ.ಬಿ.ಚನ್ನವೀರಪ್ಪ,
ಪವಿತ್ರರಾಮಯ್ಯ, ದತ್ತಾತ್ರಿ, ಕೆ.ಪಿ.ಪುರುಷೋತ್ತಮ್ ಮತ್ತು ಜಿಲ್ಲಾಧಿ ಕಾರಿ, ಜಿಲ್ಲಾ ರಕ್ಷಣಾಧಿ ಕಾರಿ, ಜಿಪಂ ಸಿಇಒ, ಪಾಲಿಕೆ ಆಯುಕ್ತರು ಉಪಸ್ಥಿತರಿರುವರು ಎಂದರು.
ಕಾರ್ಯಕ್ರಮದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದ್ದು, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದರು.
ಜ್ಞಾನೇಶ್ವರ್, ಎಸ್.ಎಸ್.ಜ್ಯೋತಿಪ್ರಕಾಶ್, ವಕೀಲ ಬಸಪ್ಪಗೌಡರು, ಟಿ.ಆರ್.ಅಶ್ವಥ್ನಾರಾಯಣ ಶೆಟ್ಟಿ, ಬಳ್ಳೆಕೆರೆ ಸಂತೋಷ್, ಲಕ್ಷ್ಮೀನಾರಾಯಣ ಕಾಶಿ, ರಮೇಶ್ ಹೆಗ್ಡೆ, ಮಾಲತೇಶ್, ಹಿರಣ್ಣಯ್ಯ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಲಾಡು-ಮಾಸ್ಕ್ ವಿತರಣೆ: ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸಮಿತಿ ವತಿಯಿಂದ ಲಾಡು ಮತ್ತು ಮಾಸ್ಕ್ ವಿತರಿಸಲಾಗುವುದು. ಸದ್ಯಕ್ಕೆ ಸುಮಾರು 40 ಸಾವಿರ ಲಾಡು ತಯಾರಿಸಲಾಗಿದೆ ಮತ್ತು ಅಷ್ಟೇ ಪ್ರಮಾಣದಲ್ಲಿ ಮಾಸ್ಕ್ ಕೂಡ ವಿತರಿಸಲಾಗುತ್ತದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ರುದ್ರೇಗೌಡರು ತಿಳಿಸಿದರು.
ಈಗಾಗಲೇ ವೇದಿಕೆ ಸಿದ್ಧವಾಗುತ್ತಿದೆ. ಸುಮಾರು 40 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ಸುಮಾರು 6 ಸಾವಿರಕ್ಕೂ ಹೆಚ್ಚು ಆಸನಗಳನ್ನು ಗಣ್ಯರಿಗೆ ಮೀಸಲಿರಿಸಲಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ಕಾರಣಕ್ಕೂ ಪ್ರತ್ಯೇಕವಾಗಿ ಮುಖ್ಯಮಂತ್ರಿಗಳನ್ನು ಸನ್ಮಾನಿಸುವಂತಿಲ್ಲ ಎಂದರು.
ಯಡಿಯೂರಪ್ಪನವರ 78ನೇ ವರ್ಷದ ಜನ್ಮದಿನ ಇದು. ಫೆ.27ರಂದೇ ಜನ್ಮದಿನ ಇದೆ. ಆದರೆ, ಅಂದು ಬೆಂಗಳೂರಿನಲ್ಲಿ ಅವರ ಕಾರ್ಯಕ್ರಮ
ನಿಗದಿ ಯಾಗಿರುವುದರಿಂದ ಫೆ.28ಕ್ಕೆ ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿಗಳ ಜನ್ಮದಿನ ಅಂಗವಾಗಿ 27ರಂದು ಬೆಳಿಗ್ಗೆ ರವೀಂದ್ರ ನಗರದ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದರು.
ಓದಿ : ಬಹಿರಂಗ ಟೀಕೆ ಸಲ್ಲದು, ಪಕ್ಷದ ವೇದಿಕೆಯಲ್ಲಿ ಚರ್ಚಿಸಲಿ : ಯತ್ನಾಳಗೆ ಈಶ್ವರಪ್ಪ ಕಿವಿಮಾತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ