ಚರ್ಚೆಗೆ ಗ್ರಾಸವಾದ ಮಾರುಕಟ್ಟೆ ಲೀಸ್‌ ಅವಧಿ ಏರಿಕೆ


Team Udayavani, Apr 11, 2021, 6:23 PM IST

11-22

ಶಿವಮೊಗ್ಗ: ಇಲ್ಲಿನ ಶಿವಪ್ಪ ನಾಯಕ ಮಾರುಕಟ್ಟೆ (ಸಿಟಿ ಸೆಂಟರ್‌) ಗುತ್ತಿಗೆ ಅವ ಧಿ ಮುಗಿಯುವ ಮೊದಲೇ 99 ವರ್ಷಕ್ಕೆ ಏರಿಸಲು ಪಾಲಿಕೆ ಅಜೆಂಡಾದಲ್ಲಿ ಪ್ರಸ್ತಾಪಿಸಿರುವುದು ಹಾಗೂ ಈ ವಿಷಯ ಮೇಯರ್‌ ಅವರಿಗೇ ಗೊತ್ತಿಲ್ಲದಿರುವುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸಿಟಿ ಸೆಂಟರ್‌ ಮಾಲ್‌ ಅನ್ನು ಖಾಸಗಿ ಸಂಸ್ಥೆಯೊಂದಕ್ಕೆ 2 ವರ್ಷ ನಿರ್ಮಾಣ ಕಾಮಗಾರಿ ಸೇರಿ 32 ವರ್ಷಕ್ಕೆ ಲೀಸ್‌ ನೀಡಲಾಗಿತ್ತು. ಅದರಲ್ಲಿ ಈಗ 12 ವರ್ಷ ಪೂರ್ಣಗೊಂಡಿದೆ. ಇನ್ನೂ 20 ವರ್ಷ ಅವಧಿ ಬಾಕಿ ಇರುವಾಗಲೇ ಮಹಾನಗರ ಪಾಲಿಕೆ ಸಭೆಯ ಅಜೆಂಡಾದಲ್ಲಿ ಈ ವಿಷಯ ಸೇರಿಸಿರುವುದು ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದೆ.

ಅಲ್ಲದೆ ಗಮನಕ್ಕಿಲ್ಲದೆ ಈ ವಿಷಯ ಚರ್ಚೆಗೆ ಅಂಜೆಡಾದಲ್ಲಿ ಸೇರಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಯಾವುದೇ ವಿಷಯ ಅಜೆಂಡಾದಲ್ಲಿ ಸೇರ್ಪಡೆಯಾಗಬೇಕಾದರೆ ನಿಯಮದ ಪ್ರಕಾರ, ಮೇಯರ್‌ ಇಲ್ಲವೇ ಆಯುಕ್ತರಿಂದ ಅನುಮೋದನೆಗೊಳ್ಳಲೇಬೇಕು. ನಂತರ, ಅದನ್ನು ಕೌನ್ಸಿಲ್‌ ಕಾರ್ಯದರ್ಶಿಗಳು ಗಮನಿಸಬೇಕು. ಬೇಡದ ವಿಚಾರಗಳಿದ್ದರೆ ಅದನ್ನು ಅಲ್ಲಿಯೇ ಕೈಬಿಡಲಾಗುತ್ತದೆ. ಈ ಎರಡೂ ಹಂತಗಳನ್ನು ದಾಟಿ ಈ ವಿಷಯ ಅಜೆಂಡಾದಲ್ಲಿ ಜಾಗ ಪಡೆದಿದ್ದು ಹೇಗೆ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

2020 ರಲ್ಲಿ ನಡೆದ ತೆರಿಗೆ ಸ್ಥಾಯಿ ಸಮಿತಿಯಲ್ಲಿ ಈ ವಿಚಾರ ಆಗಿನ ಮೇಯರ್‌ ಅವರ ಗಮನಕ್ಕೆ ತರದೇ ಅಜೆಂಡಾಗೆ ಸೇರಿಸಲಾಗಿತ್ತು. ಭಾರಿ ಚರ್ಚೆಯ ಬಳಿಕ ಅದನ್ನು ಅಲ್ಲಿಗೆ ಕೈ ಬಿಡಲಾಗಿತ್ತು. ಈಗ ಮತ್ತೆ ಇದು ಮುನ್ನೆಲೆಗೆ ಬಂದಿದೆ. ಪ್ರತಿಪಕ್ಷದವರು ಆಡಳಿತ ಪಕ್ಷದ ಮೇಲೆ ಆರೋಪ ಮಾಡುತ್ತಿದ್ದು, ಆಡಳಿತ ಪಕ್ಷದವರು ಅ ಧಿಕಾರಿಗಳ ತಪ್ಪಿನಿಂದ ಈ ಕೆಲಸ ಆಗಿದೆ ಎಂದು ಜಾರಿಕೊಳ್ಳುತ್ತಿದ್ದಾರೆ.

ಆದರೆ, ಯಾವ ಉದ್ದೇಶಕ್ಕಾಗಿ ಈ ವಿಷಯ ಪದೇ ಪದೆ ಅಜೆಂಡಾದಲ್ಲಿ ಸೇರ್ಪಡೆಯಾಗುತ್ತಿದೆ ಎಂಬುದು ಯಕ್ಷಪ್ರಶ್ನೆಯಾಗಿದೆ. ಪಾಲಿಕೆಯಲ್ಲಿ ಗುರುವಾರ ಜಿಲ್ಲಾವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳು ಹಾಗೂ ಪಾಲಿಕೆಯ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆದಿತ್ತು. ಆಗ ಲೀಸ್‌ ಅವ ಧಿ 99 ವರ್ಷಕ್ಕೆ ವಿಸ್ತರಣೆ ಮಾಡುವ ವಿಚಾರ ಅಜೆಂಡಾದಲ್ಲಿರುವುದು ಗಮನಕ್ಕೆ ಬಂದಿದೆ. ಆದರೆ, ಮೇಯರ್‌ ಅವರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗದು ಎಂದು ಕೈಬಿಟ್ಟಿದ್ದಾರೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.