ಕೊರೊನಾ ಲಸಿಕೆ ಕಡಿಮೆ ಬೀಳದಂತೆ ಗಮನ ಹರಿಸಿ


Team Udayavani, Apr 14, 2021, 6:30 PM IST

14-19

ಸಾಗರ: ತಾಲೂಕಿನಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಜನರು ಕೊರೊನಾ ಲಸಿಕೆ ತೆಗೆದುಕೊಂಡಿದ್ದಾರೆ. ನಗರದ ಆಸ್ಪತ್ರೆಗಳಲ್ಲಿ 4,230 ಡೋಸ್‌, ಗ್ರಾಮಾಂತರ ಪ್ರದೇಶದ ಆಸ್ಪತ್ರೆಯಲ್ಲಿ 1,600 ಡೋಸ್‌ ಲಸಿಕೆ ಸಂಗ್ರಹದಲ್ಲಿದೆ. ಅಗತ್ಯ ಬಿದ್ದರೆ ಇನ್ನಷ್ಟು ಪ್ರಮಾಣದಲ್ಲಿ ಲಸಿಕೆ ಸಂಗ್ರಹಿಸಲಾಗುತ್ತದೆ. ಯಾವುದೇ ಕಾರಣಕ್ಕೆ ಲಸಿಕೆ ಕಡಿಮೆ ಬೀಳದಂತೆ ನೋಡಿಕೊಳ್ಳುತ್ತೇವೆ ಎಂದು ಎಂಎಸ್‌ಐಎಲ್‌ ಅಧ್ಯಕ್ಷ ಹಾಗೂ ಶಾಸಕ ಎಚ್‌. ಹಾಲಪ್ಪ ಹರತಾಳು ಭರವಸೆ ನೀಡಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ತೆಗೆದುಕೊಳ್ಳಲು ಜನರು ಹಿಂದೇಟು ಹಾಕಬಾರದು. 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಲಸಿಕೆ ಪಡೆಯುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಈಗಾಗಲೇ ಲಸಿಕೆ ಮಹೋತ್ಸವ ನಡೆಸಲಾಗುತ್ತಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಲಸಿಕೆ ಕೊಡುವುದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗ್ರಾಪಂ ಅಧ್ಯಕ್ಷರು, ಪಿಡಿಒ ಸಭೆ ಕರೆದು ಮಾಹಿತಿ ನೀಡಲಾಗಿದೆ ಎಂದರು.

ತಾಲೂಕಿನಲ್ಲಿ ಕೆಎಫ್‌ಡಿ ನಿಯಂತ್ರಣದಲ್ಲಿದೆ. ಆದರೂ ಮೈಮರೆಯಬಾರದು ಎಂದು ಆರೋಗ್ಯ ಇಲಾಖೆಗೆ ಮತ್ತು ಗ್ರಾಪಂಗಳಿಗೆ ಸೂಚನೆ ನೀಡಲಾಗಿದೆ. ಭಾನುವಾರ ಹಸಿರುಮಕ್ಕಿ ಶರಾವತಿ ಹಿನ್ನೀರಿನ ಕಾಡಿನಲ್ಲಿ 10 ಮಂಗಗಳು ಒಂದೇ ಕಡೆ ಸತ್ತು ಬಿದ್ದಿರುವುದಕ್ಕೆ ಕಾರಣ ಏನು ಎನ್ನುವ ಬಗ್ಗೆ ಆರೋಗ್ಯ ಇಲಾಖೆ, ಪಶು ವೈದ್ಯಾಧಿಕಾರಿಗಳ ತಂಡ ಪರಿಶೀಲನೆ ನಡೆಸಲಾಗುತ್ತಿದೆ. ಮೇಲ್ನೋಟಕ್ಕೆ ಇದು ವಿಷ ಪ್ರಾಶನದಿಂದ ಮೃತಪಟ್ಟಿರಬಹುದು ಅಥವಾ ಎಲ್ಲಿಯೋ ಸತ್ತ ಮಂಗಗಳನ್ನು ಇಲ್ಲಿ ತಂದು ಎಸೆದಿರಬೇಕು ಎನ್ನುವ ಅನುಮಾನ ವ್ಯಕ್ತವಾಗಿದೆ ಎಂದರು. ನಗರವ್ಯಾಪ್ತಿಯ ರಾಮನಗರ ಭಾಗದಲ್ಲಿ ಡೆಂಘೀ ಪ್ರಕರಣ ಜಾಸ್ತಿಯಾಗುತ್ತಿದೆ. ಬಿಸಿಲಿನ ತಾಪ ಹೆಚ್ಚಿರುವುದು, ಹಿಂದೆ ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಮಾಡಿರುವುದರಿಂದ ಕೊಳಚೆ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗಿ ಡೆಂಘೀ ಹರಡುವ ಸಾಧ್ಯತೆ ಇದೆ. ಇನ್ನು ಮುಂದೆ ಗುತ್ತಿಗೆದಾರರರಿಗೆ ಇಂತಹ ಚರಂಡಿ ನಿರ್ಮಾಣದ ಬಿಲ್‌ ಪಾವತಿಸದಿರಲು ನಿರ್ಧರಿಸಲಾಗಿದೆ. ನಗರದಲ್ಲಿ ಸ್ವತ್ಛತೆಗೆ ಒತ್ತು ನೀಡಲು ನಗರಸಭೆ ಅಧಿ ಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಬಿ.ಎಚ್‌. ರಸ್ತೆ ಚತುಷ್ಪಥ ನಿರ್ಮಾಣಕ್ಕೆ 77 ಕೋಟಿ ರೂ. ಮಂಜೂರಾಗಿದ್ದು, ಟೆಂಡರ್‌ ಹಂತಕ್ಕೆ ಬಂದಿದೆ. ತ್ಯಾಗರ್ತಿ ಕ್ರಾಸ್‌ನಿಂದ ಎಲ್‌.ಬಿ. ಕಾಲೇಜುವರೆಗೆ 7.5 ಕಿಮೀ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಮೊದಲು 6.5 ಕಿಮೀಗೆ 66 ಕೋಟಿ ರೂ. ಮಂಜೂರಾಗಿತ್ತು. ಆದರೆ ಸಂಸದ ಬಿ.ವೈ. ರಾಘವೇಂದ್ರ ಅವರ ಪ್ರಯತ್ನದಿಂದ ಹೆಚ್ಚು ಹಣ ಬಿಡುಗಡೆಯಾಗಿದೆ. ಜೊತೆಗೆ ಹಳೇ ಖಾಸಗಿ ಬಸ್‌ ನಿಲ್ದಾಣವನ್ನು ಪಿಕಪ್‌ ಸ್ಟಾÂಂಡ್‌ ಮಾಡುವಂತೆ ತಿಳಿಸಲಾಗಿತ್ತು. ಇದರ ಬಗ್ಗೆ ಸಹ ಗಮನ ಹರಿಸಲಾಗುತ್ತದೆ ಎಂದರು.

ಗೋಷ್ಠಿಯಲ್ಲಿ ಎಪಿಎಂಸಿ ಅಧ್ಯಕ್ಷ ಚೇತನರಾಜ್‌ ಕಣ್ಣೂರು, ಪ್ರಮುಖರಾದ ಗಣೇಶಪ್ರಸಾದ್‌, ಕೊಟ್ರಪ್ಪ ನೇದರವಳ್ಳಿ, ದೇವೇಂದ್ರಪ್ಪ ಯಲಕುಂದ್ಲಿ, ಅರುಣ ಕುಗ್ವೆ, ಬಿ.ಟಿ. ರವೀಂದ್ರ, ಅರುಣ ಸೂರನಗದ್ದೆ, ವಿನಾಯಕರಾವ್‌ ಮನೆಘಟ್ಟ ಇದ್ದರು.

ಟಾಪ್ ನ್ಯೂಸ್

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.