ಕಾಗೋಡು ಸತ್ಯಾಗ್ರಹದ ಇನ್ನಷ್ಟು ವಿಸ್ತೃತ ಅಧ್ಯಯನ ಅಗತ್ಯ


Team Udayavani, Apr 19, 2021, 7:00 PM IST

19-20

ಸಾಗರ: ಕಾಗೋಡು ಸತ್ಯಾಗ್ರಹ ಕುರಿತು ಇನ್ನಷ್ಟು ವಿಸ್ತೃತ ಅಧ್ಯಯನದ ಅಗತ್ಯವಿದೆ. ಇಂತಹ ಸತ್ಯಾಗ್ರಹವನ್ನು ದೀರ್ಘ‌ವಾಗಿ ಅಧ್ಯಯನ ನಡೆಸಿ, ಸತ್ಯಾಗ್ರಹಕ್ಕೆ ಮೂಲ ಕಾರಣ, ಈಡೇರಿದ ಆಶಯ ಕುರಿತು ವಿಶ್ಲೇಷಣೆ ನಡೆಸಬೇಕಿದೆ ಎಂದು ಹಿರಿಯ ಸಾಹಿತಿ ಡಾ| ನಾ.ಡಿಸೋಜಾ ಪ್ರತಿಪಾದಿಸಿದರು.

ಇಲ್ಲಿನ ಶೃಂಗೇರಿ ಶಂಕರಮಠದ ಭಾರತೀತೀರ್ಥ ಸಭಾಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕಾಗೋಡು ಚಳುವಳಿಯ 70ರ ನೆನಪು ಹಾಗೂ ಡಾ| ಎಚ್‌.ಗಣಪತಿಯಪ್ಪ ನೇಗಿಲಯೋಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಎಲ್ಲ ರೈತ ಚಳುವಳಿಗಿಂತ ಅತ್ಯಂತ ದೊಡ್ಡ ರೈತ ಚಳುವಳಿಯಾಗಿ ಇತಿಹಾಸದ ಪುಟದಲ್ಲಿ ಗುರುತಿಸಿಕೊಂಡಿರುವುದು ಕಾಗೋಡು ರೈತ ಚಳುವಳಿ ಎನ್ನುವುದು ದಾಖಲಾರ್ಹ. ಉಳುವವನದ್ದೇ ಭೂಮಿ ಎಂಬ ತತ್ವ ಅನುಷ್ಠಾನಕ್ಕೆ ಕಾರಣವಾಗಿರುವ ಸತ್ಯಾಗ್ರಹವನ್ನು ಯುವಪೀಳಿಗೆಗೆ ಮನದಟ್ಟು ಮಾಡಿಕೊಡುವ ಪ್ರಯತ್ನ ನಡೆಸಬೇಕು ಎಂದು ಹೇಳಿದರು.

ದಿಕ್ಸೂಚಿ ಭಾಷಣ ಮಾಡಿದ ಕರ್ನಾಟಕ ಜಾನಪದ ಪರಿಷತ್‌ನ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್‌, ಕಾಗೋಡು ರೈತ ಚಳುವಳಿ ಜನಮಾನಸದಿಂದ ದೂರವಾಗಲು ಬಿಟ್ಟರೆ ನಾವು ಚಳುವಳಿಗೆ ದ್ರೋಹ ಬಗೆದಂತೆ ಆಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಹೋರಾಟ ತನ್ನ ಮಹತ್ವ ಕಳೆದುಕೊಳ್ಳುತ್ತಿದೆ. ಪ್ರಭುತ್ವ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಯೋಜಿತವಾಗಿ ನಡೆಯುತ್ತಿದೆ. ನಾವು ಏನು ಮಾತನಾಡಿದರೂ ಕಷ್ಟ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿರುವುದು ಪ್ರಜಾಪ್ರಭುತ್ವದ ದುರಂತ. ವಿಶ್ವದ ಯಾವ ರಾಷ್ಟ್ರಗಳಲ್ಲೂ ಕಾಣದ ಕಠಿಣ ಸಂದರ್ಭ ಭಾರತದಲ್ಲಿ ನಿರ್ಮಾಣವಾಗಿದೆ. ಇಂತಹ ಹೊತ್ತಿನಲ್ಲಿ ನಾವು ಕಾಗೋಡು ರೈತ ಚಳುವಳಿಯ 70ರ ನೆನಪು ಕಾರ್ಯಕ್ರಮ ನಡೆಸುತ್ತಿದ್ದೇವೆ. ಭವಿಷ್ಯದ ಹೋರಾಟಕ್ಕೆ ಈ ಹೋರಾಟದ ಕಿಚ್ಚು ಮಾರ್ಗಸೂಚಿಯಾಗಬೇಕು ಎಂದು ತಿಳಿಸಿದರು. ಡಾ| ಎಚ್‌.ಗಣಪತಿಯಪ್ಪ ನೇಗಿಲಯೋಗಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹಿರಿಯ ಕಾಗೋಡು ಸತ್ಯಾಗ್ರಹಿ ದೊಡ್ಡೇರಿ ಈರಪ್ಪ ಮಂಡಗಳಲೆ, ಕಾಗೋಡು ಸತ್ಯಾಗ್ರಹ ಸಾವಿರಾರು ಕುಟುಂಬವನ್ನು ಜಮೀನುದಾರಿಕೆ ದಾಸ್ಯದಿಂದ ಮುಕ್ತಿಗೊಳಿಸಿದೆ. ಆ ಹೋರಾಟದ ಕಾಲ ಅತ್ಯಂತ ಕಠಿಣವಾಗಿತ್ತು. ಹೋರಾಟದ ಯಶಸ್ಸು ಕಂಡು ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ನಮಗೆಲ್ಲ ಭೂಮಿಹಕ್ಕು ನೀಡಿದಾಗ ನಮ್ಮ ಹೋರಾಟದ ಬದುಕು ಸಾರ್ಥಕವಾಗಿತ್ತು ಎಂದು ಹೇಳಿದರು.

ಶಿವಮೊಗ್ಗ ಸಹ್ಯಾದ್ರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ| ಮೋಹನ್‌ ಚಂದ್ರಗುತ್ತಿ ಈ ಹೊತ್ತಿನ ಹೋರಾಟದ ಆತಂಕಗಳ ಕುರಿತು ಮಾತನಾಡಿದರು. ಶೃಂಗೇರಿ ಶಂಕರಮಠದ ಅಶ್ವಿ‌ನಿಕುಮಾರ್‌, ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ನಾಗೇಶ್‌, ವೈಜ್ಞಾನಿಕ ಪರಿಷತ್‌ ಜಿಲ್ಲಾಧ್ಯಕ್ಷ ರಾಜೇಂದ್ರ ಆವಿನಹಳ್ಳಿ, ರೈತ ಮುಖಂಡರಾದ ದಿನೇಶ್‌ ಶಿರವಾಳ, ಅಮೃತರಾಜ್‌ ತ್ಯಾಗರ್ತಿ ಇದ್ದರು. ಅಂಬಿಕಾ ಪ್ರಾರ್ಥಿಸಿದರು. ದೇವರಾಜ್‌ ವಿ.ಜಿ. ಸ್ವಾಗತಿಸಿದರು. ಹೊಯ್ಸಳ ಗಣಪತಿಯಪ್ಪ ವಂದಿಸಿದರು. ಲೋಕೇಶಕುಮಾರ್‌ ನಿರೂಪಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.