ದಂಡ ವಸೂಲಿ ಬದಲು ಮಾಸ್ಕ್ ನೀಡಿದ ಪೊಲೀಸರು!
Team Udayavani, Apr 20, 2021, 6:21 PM IST
ಶಿವಮೊಗ್ಗ: ಮಾಸ್ಕ್ ಧರಿಸದವರಿಂದ ದಂಡ ವಸೂಲಿ ಮಾಡುವ ಬದಲಿಗೆ ಅವರಿಗೆ ಮಾಸ್ಕ್ ನೀಡಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಪೊಲೀಸರು ವಿಶಿಷ್ಟ ಕಾರ್ಯಾಚರಣೆ ನಡೆಸಿದರು.
ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿ ಕಾರಿ ಎಚ್.ಟಿ. ಶೇಖರ್ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಾಸ್ಕ್ ಧರಿಸದೆ ನಿರ್ಲಕ್ಷé ವಹಿಸಿದವರನ್ನು ತರಾಟೆಗೆ ತೆಗೆದುಕೊಂಡು ಮಾಸ್ಕ್ ವಿತರಣೆ ಮಾಡಿ ಕೊರೊನಾ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.
ಖಾಸಗಿ ಬಸ್ ನಿಲ್ದಾಣದಲ್ಲಿ ಮಾಸ್ಕ್ ಧರಿಸದೆ ತಿರುಗಾಡುತ್ತಿದ್ದರು. ಸಾಮಾಜಿಕ ಅಂತರವಿಲ್ಲದೆ ಪ್ರಯಾಣಿಕರು ನಿಂತಿದ್ದರು.ಇದನ್ನು ಗಮನಿಸಿದ ಎಎಸ್ಪಿ ಡಾ|ಎಚ್.ಟಿ ಶೇಖರ್, ಡಿವೈಎಸ್ಪಿ ಪ್ರಶಾಂತ್ ಹಾಗೂ ಸಿಬ್ಬಂದಿ ಪ್ರತಿಯೊಬ್ಬರಿಗೂ ಮಾಸ್ಕ್ ವಿತರಣೆ ಮಾಡಿದರು. ಅಲ್ಲದೇ ಮಾಸ್ಕ್ ತೊಡದೆ ಬಸ್ಸಿಗಾಗಿ ಕಾದು ಕುಳಿತಿದ್ದ ಮಕ್ಕಳಿಗೆ ಎಎಸ್ಪಿಯವರು ಮಾಸ್ಕ್ ತೊಡಿಸಿ,ಪೋಷಕರಿಗೆ ತಿಳುವಳಿಕೆ ನೀಡಿದರು. ಪೊಲೀಸರು ಬಸ್ ನಿಲ್ದಾಣದಲ್ಲಿ ದಿಢೀರ್ ಕಾರ್ಯಾಚರಣೆ ನಡೆಸುತ್ತಿದ್ದಂತೆ ಕೆಲವರು ಕರ್ಚಿಫ್,ಟವೆಲ್ ಮುಖಕ್ಕೆ ಕಟ್ಟಿಕೊಂಡರು.
ಇದನ್ನು ಗಮನಿಸಿ ಬಸ್ ಏರಿದ ಎಎಸ್ಪಿ ಶೇಖರ್, ಜೀವ ಹಾಗೂ ಜೀವನ ಮುಖ್ಯ.ದಂಡಕ್ಕೆ ಹೆದರಿ ಮುಖ ಮುಚ್ಚಿಕೊಳ್ಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಕೊರೊನಾದಿಂದ ಬಚಾವ್ ಆಗುವುದು ಮುಖ್ಯ ಎಂದು ತಿಳುವಳಿಕೆ ನೀಡಿ, ಮಾಸ್ಕ್ ವಿತರಣೆ ಮಾಡಿದರು.
ಸಿಟಿ ಬಸ್ನಲ್ಲಿ ಡಿವೈಎಸ್ಪಿ ಪಾಠ: ಇನ್ನು ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಅವರು, ನಗರ ಸಾರಿಗೆ ಬಸ್ಸುಗಳಲ್ಲಿ ಮಾಸ್ಕ್ ಧರಿಸದವರಿಗೆ ಕೊರೊನಾ ಸೋಂಕು ಜೀವಕ್ಕೆ ಎಷ್ಟು ಅಪಾಯಕಾರಿ ಎನ್ನುವುದರ ಬಗ್ಗೆ ತಿಳುವಳಿಕೆ ನೀಡಿದರು. ಕೊರೊನಾ ಸೋಂಕಿನಿಂದ ತಮ್ಮನ್ನು ಕಾಪಾಡಿಕೊಳ್ಳಲು ಮಾಸ್ಕ್ ಧರಿಸುವುದು ಕಡ್ಡಾಯ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಹೇಳಿದರು.
ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದಂಡ ಪ್ರಯೋಗದ ಜೊತೆಗೆ ಮಾಸ್ಕ್ ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ