
Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು
ಆಯನೂರು ಬಾರ್ ಕ್ಯಾಶಿಯರ್ ಪ್ರಕರಣದಲ್ಲಿ ಕಾರ್ಯಾಚರಣೆ
Team Udayavani, Jun 5, 2023, 7:13 PM IST

ಶಿವಮೊಗ್ಗ: ಬಾರ್ ಕ್ಯಾಶಿಯರ್ ಕೊಲೆ ಆರೋಪಿಯನ್ನು ವಶಕ್ಕೆ ಪಡೆಯುವ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿದ್ದು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಗುಂಡು ಹಾರಿಸಲಾಗಿದೆ.
ಆಯನೂರು ಬಾರ್ನಲ್ಲಿ ಕಳೆದ ರಾತ್ರಿ ಕ್ಯಾಶಿಯರ್ಗೆ ಚಾಕು ಚುಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸತೀಶ್ ಎಂಬಾತನನ್ನು ಪೊಲೀಸರು ಬಂಧಿಸಲು ಮುದ್ದಿನಕೊಪ್ಪ ಬಳಿ ತೆರಳಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿ ಪ್ರವೀಣ್ ಮತ್ತು ಶಿವರಾಜ್ ಅವರು ಆರೋಪಿ ಸತೀಶನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಸತೀಶ ಪೊಲೀಸ್ ಸಿಬಂದಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಈ ವೇಳೆ ಪಿಎಸ್ಐ ರಾಜುರೆಡ್ಡಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಸತೀಶನಿಗೆ ಎಚ್ಚರಿಕೆ ನೀಡಿದ್ದಾರೆ. ಹೀಗಿದ್ದೂ ಸತೀಶ ಪಿಎಸ್ಐ ಮೇಲೆ ಚಾಕುವಿನಿಂದ ದಾಳಿಗೆ ಮುಂದಾಗಿದ್ದ. ಆಗ ಸಬ್ಇನ್ಸ್ಪೆಕ್ಟರ್ ಹಾರಿಸಿದ ಗುಂಡು ಸತೀಶನ ಕಾಲಿಗೆ ತಗುಲಿದೆ. ಸತೀಶ ಮತ್ತು ಗಾಯಗೊಂಡ ಪೊಲೀಸ್ ಸಿಬಂದಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

Forest ಭೂಮಿಯಲ್ಲಿ ಸಾಗುವಳಿ ಮಾಡುವ ರೈತರ ತೆರವು; ಖಂಡ್ರೆ ಪತ್ರಕ್ಕೆ ಬಿವೈಆರ್ ಖಂಡನೆ

Cauvery issue; ಎಲ್ಲ ಪಕ್ಷದವರ ಜೊತೆ ಚರ್ಚಿಸಿ ನೀರು ಬಿಡಬೇಕಿತ್ತು: ಕೆಎಸ್ ಈಶ್ವರಪ್ಪ

Cauvery issue; ಕಾಂಗ್ರೆಸ್ ಗೆ ರಾಜ್ಯದ ಜನರ ಹಿತ ಮುಖ್ಯವಲ್ಲ: ಆರಗ ಟೀಕೆ

Theft in Temple: ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು