Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು
ಆಯನೂರು ಬಾರ್ ಕ್ಯಾಶಿಯರ್ ಪ್ರಕರಣದಲ್ಲಿ ಕಾರ್ಯಾಚರಣೆ
Team Udayavani, Jun 5, 2023, 7:13 PM IST
ಶಿವಮೊಗ್ಗ: ಬಾರ್ ಕ್ಯಾಶಿಯರ್ ಕೊಲೆ ಆರೋಪಿಯನ್ನು ವಶಕ್ಕೆ ಪಡೆಯುವ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿದ್ದು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಗುಂಡು ಹಾರಿಸಲಾಗಿದೆ.
ಆಯನೂರು ಬಾರ್ನಲ್ಲಿ ಕಳೆದ ರಾತ್ರಿ ಕ್ಯಾಶಿಯರ್ಗೆ ಚಾಕು ಚುಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸತೀಶ್ ಎಂಬಾತನನ್ನು ಪೊಲೀಸರು ಬಂಧಿಸಲು ಮುದ್ದಿನಕೊಪ್ಪ ಬಳಿ ತೆರಳಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿ ಪ್ರವೀಣ್ ಮತ್ತು ಶಿವರಾಜ್ ಅವರು ಆರೋಪಿ ಸತೀಶನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಸತೀಶ ಪೊಲೀಸ್ ಸಿಬಂದಿ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಈ ವೇಳೆ ಪಿಎಸ್ಐ ರಾಜುರೆಡ್ಡಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಸತೀಶನಿಗೆ ಎಚ್ಚರಿಕೆ ನೀಡಿದ್ದಾರೆ. ಹೀಗಿದ್ದೂ ಸತೀಶ ಪಿಎಸ್ಐ ಮೇಲೆ ಚಾಕುವಿನಿಂದ ದಾಳಿಗೆ ಮುಂದಾಗಿದ್ದ. ಆಗ ಸಬ್ಇನ್ಸ್ಪೆಕ್ಟರ್ ಹಾರಿಸಿದ ಗುಂಡು ಸತೀಶನ ಕಾಲಿಗೆ ತಗುಲಿದೆ. ಸತೀಶ ಮತ್ತು ಗಾಯಗೊಂಡ ಪೊಲೀಸ್ ಸಿಬಂದಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ