ವಿಮಾನ ನಿಲ್ದಾಣ ಹೆಸರು; ಸರ್ಕಾರಕ್ಕೆ ಬಿಸಿ ಉಸಿರು

ಬಿಎಸ್‌ವೈ ಹೆಸರಿಡಲು ಸರ್ಕಾರದ ತೀರ್ಮಾನ

Team Udayavani, May 2, 2022, 1:25 PM IST

airport

ಶಿವಮೊಗ್ಗ: ರಾಜ್ಯದ ಎರಡನೇ ಅತಿ ದೊಡ್ಡ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ ಹೊಂದಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾವ ಹೆಸರಿಡಬೇಕೆಂಬ ಚರ್ಚೆ ಜೋರಾಗಿದ್ದು, ಸರಕಾರಕ್ಕೆ ಬಿಸಿತುಪ್ಪವಾಗಿದೆ.

ಇತ್ತೀಚೆಗೆ ಶಿವಮೊಗ್ಗ ಪ್ರವಾಸದಲ್ಲಿದ್ದ ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ರಾಜ್ಯ ಸರಕಾರ ಸಂಪುಟದಲ್ಲಿ ಅನುಮೋದಿಸಿದ್ದು, ಕೇಂದ್ರ ಸರಕಾರಕ್ಕೆ ಕಳುಹಿಸುವುದಾಗಿ ತಿಳಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಬಿ.ಎಸ್. ಯಡಿಯೂರಪ್ಪನವರು ಈ ನಿರ್ಧಾರವನ್ನು ಪುನರ್‌ ಪರಿಶೀಲಿಸಿ, ದೇಶದ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದವರ ಹೆಸರು ಇಡುವಂತೆ ಮನವಿ ಮಾಡಿ ದೊಡ್ಡತನ ಮೆರೆದಿದ್ದರು.

ಬಿಎಸ್‌ವೈ ಅವರ ನಿರ್ಧಾರದ ನಂತರ ಮತ್ತೆ ವಿಮಾನ ನಿಲ್ದಾಣಕ್ಕೆ ಅನೇಕ ಹೆಸರುಗಳು ಕೇಳಿ ಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ, ಒತ್ತಾಯ, ಪೋಲಿಂಗ್‌ ಸಹ ಮಾಡಲಾಗುತ್ತಿದೆ. ಇದು ಸರಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

ನೂರಾರು ಹೆಸರುಗಳು

ಗೇಣಿ ಹೋರಾಟದ ರೂವಾರಿ ಗಣಪತಿಯಪ್ಪ, ಜಿಲ್ಲೆಯಿಂದ ಸಿಎಂ ಆದ ಕಡಿದಾಳು ಮಂಜಪ್ಪ, ಎಸ್.ಬಂಗಾರಪ್ಪ, ಬಿ.ಎಸ್‌ .ಯಡಿಯೂರಪ್ಪ, ಶಾಂತವೇರಿ ಗೋಪಾಲಗೌಡ, ಪುನೀತ್‌ ರಾಜ್‌ಕುಮಾರ್‌ ಹೆಸರು ಸಹ ಇತ್ತೀಚಿಗೆ ಕೇಳಿಬಂದಿದೆ. ಇನ್ನು ಸಾಹಿತ್ಯ ವಿಷಯದಲ್ಲಿ ಕನ್ನಡದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು ಅವರ ಹೆಸರಿಡಲು ಹೆಚ್ಚಿನ ಒತ್ತಾಯ ಕೇಳಿಬಂದಿದೆ. ಕೆಳದಿ ಸಂಸ್ಥಾನದ ಪ್ರಖ್ಯಾತ ದೊರೆ ಶಿವಪ್ಪನಾಯಕ, ಜತೆಗೆ ಉಡುತಡಿಯ ಅಕ್ಕಮಹಾದೇವಿ, ಅಲ್ಲಮ್ಮಪ್ರಭು, ಜಗಜ್ಯೋತಿ ಬಸವಣ್ಣ, ಕನ್ನಡದ ಮೊದಲ ದೊರೆ ಮಯೂರ ವರ್ಮ, ಭಗತ್‌ ಸಿಂಗ್‌, ಅಂಬೇಡ್ಕರ್‌, ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಬಿ.ಕೃಷ್ಣಪ್ಪ ಅವರ ಹೆಸರು ಸಹ ಕೇಳಿಬರುತ್ತಿದೆ.

ಅಲ್ಲದೆ ವಿಮಾನ ನಿಲ್ದಾಣ ಇರುವುದು ಸೋಗಾನೆ ಎಂಬ ಗ್ರಾಮದಲ್ಲಿ. ಅದೇ ಹೆಸರನ್ನು ಇಟ್ಟರೆ ಭೂಮಿ ಕೊಟ್ಟ ರೈತರಿಗೆ ಗೌರವ ನೀಡಿದಂತಾಗುತ್ತದೆ ಎಂಬ ವಾದವೂ ಕೇಳಿಬಂದಿದೆ. ಜತೆಗೆ ಮಲೆನಾಡು ಏರ್‌ಪೋರ್ಟ್‌ ಹೆಸರಿಡಬೇಕೆಂಬ ಕೂಗು ಕೇಳಿಬಂದಿದೆ. ಬಿಎಸ್‌ವೈ ಅವರ ಹೆಸರಿಡಲು ನಿರ್ಧರಿಸುವ ಮೊದಲು ಅನೇಕ ಸಂಘಟನೆಗಳು ವಿವಿಧ ಹೆಸರುಗಳನ್ನು ಇಡಲು ಮನವಿ ಮಾಡಿದ್ದವು. ಬಿಎಸ್‌ವೈ ಹೆಸರಿಡಲೂ ಸಹ ಅಭಿಮಾನಿಗಳು ಮನವಿ ಮಾಡಿದ್ದರು. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಅನೇಕರ ಕೊಡುಗೆ ಇದೆ. ದಿನೇ ದಿನೇ ಹೆಸರುಗಳ ಪಟ್ಟಿ ಬೆಳೆಯುತ್ತಲೇ ಇದೆ. ಯಾವ ಹೆಸರನ್ನು ಅಂತಿಮಗೊಳಿಸಿ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂಬುದೇ ಈಗ ಗೊಂದಲ ಮೂಡಿಸಿದೆ.

ಬಿಎಸ್‌ವೈ ಏರ್‌ಪೋರ್ಟ್‌ ರೂವಾರಿ

ಶಿವಮೊಗ್ಗಕ್ಕೆ ಏರ್‌ಪೋರ್ಟ್‌ ಕನಸು ನನಸು ಮಾಡಿದವರು ಬಿ.ಎಸ್. ಯಡಿಯೂರಪ್ಪ. 2009ರಲ್ಲಿ ಸಿಎಂ ಆದಾಗ ವಿಮಾನ ನಿಲ್ದಾಣಕ್ಕೆ ಪಿಪಿಪಿ ಮಾದರಿಯಲ್ಲಿ ಚಾಲನೆ ನೀಡಿದ್ದರು. ತಾಂತ್ರಿಕ ಕಾರಣಗಳಿಂದ ಅದು ಅಲ್ಲಿಗೆ ನಿಂತು ಹೋಯ್ತು. ನಂತರ ಬಂದ ಕಾಂಗ್ರೆಸ್‌ ಸರ್ಕಾರ ಅದರ ಬಗ್ಗೆ ಆಸಕ್ತಿ ತೋರಲಿಲ್ಲ. 2019 ರಲ್ಲಿ ಮತ್ತೆ ಸಿಎಂ ಆದ ಬಿಎಸ್‌ವೈ ಕಾಮಗಾರಿ ಪೂರ್ಣಗೊಳಿಸಲು ಆದೇಶ ನೀಡಿ ಅಗತ್ಯ ಅನುದಾನ ಬಿಡುಗಡೆ ಮಾಡಿದರು. 3200 ಮೀಟರ್‌ ರನ್‌ವೇ ಸಿದ್ಧವಾಗಿದ್ದು ಫಿನಿಶಿಂಗ್‌ ಹಂತದಲ್ಲಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಲಾಗಿದೆ. ಈ ವರ್ಷದ ಕೊನೆಗೆ ವಿಮಾನ ಹಾರುವುದು ಶತಸಿದ್ಧ. ಯಾರು ಏನೇ ಹೇಳಿದರೂ ಯಡಿಯೂರಪ್ಪನವರ ಹೆಸರೇ ಸೂಕ್ತ ಎನ್ನುತ್ತಿದೆ ಅಭಿಮಾನಿ ಪಡೆ.

ಮಲೆನಾಡು ಹಾಗೂ ಬಯಲುಸೀಮೆಗೆ ಹೊಂದಿಕೊಂಡಿರುವ ಶಿವಮೊಗ್ಗದಲ್ಲಿ ಏರ್‌ಪೋರ್ಟ್‌ ಸ್ಥಾಪನೆ ಅಷ್ಟು ಸುಲಭವಾಗಿರಲಿಲ್ಲ. 800 ಎಕರೆ ಭೂಮಿಯನ್ನು ಇದಕ್ಕಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ನೂರಾರು ರೈತರು ಭೂಮಿ ಬಿಟ್ಟುಕೊಟ್ಟಿದ್ದಾರೆ. ಈಗಲೂ ಪೂರ್ಣ ಪ್ರಮಾಣದಲ್ಲಿ ಪರಿಹಾರ, ಭೂಸ್ವಾಧೀನ ಆಗಿಲ್ಲ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಏರ್‌ಪೋರ್ಟ್‌ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದ್ದು ಬಿಎಸ್‌ವೈ ಪರಿಶ್ರಮದಿಂದ ಎಂಬುದು ಸತ್ಯ. ಹೀಗಾಗಿ ಇವರ ಹೆಸರನ್ನೇ ಇಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

ಶರತ್‌ ಭದ್ರಾವತಿ

 

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.