ಬೆಲೆ ಏರಿಕೆ ಖಂಡಿಸಿ ವಿನೂತನ ಪ್ರತಿಭಟನೆ

ಸಿಲಿಂಡರ್‌ಗೆ ಹೂವಿನ ಮಾಲೆ ಹಾಕಿ ಬೋಂಡಾ-ಹಪ್ಪಳ ಕರಿದ ಪ್ರತಿಭಟನಾಕಾರರು

Team Udayavani, Mar 7, 2021, 7:00 PM IST

Shivamogga Congress protest

ಶಿವಮೊಗ್ಗ: ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ವಿರೋಧಿ ಸಿ ಶನಿವಾರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌. ಎಸ್‌. ಸುಂದರೇಶ್‌ ನೇತೃತ್ವದಲ್ಲಿ ಶಿವಪ್ಪನಾಯಕ ಪ್ರತಿಮೆ ಪಕ್ಕದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಸ್ಥಳದಲ್ಲಿ ಸಿಲಿಂಡರ್‌ಗೆ ಹೂವಿನ ಮಾಲೆ ಹಾಕಿ ಪಕ್ಕದಲ್ಲಿ 3 ಸೌದೆ ಒಲೆಯಲ್ಲಿ ಬೋಂಡ ಹಾಗೂ ಹಪ್ಪಳ ಕರಿದು ಮತ್ತು ಟೀ ಮಾಡಿಕೊಂಡು ಪ್ರತಿಭಟನಾಕಾರರು ಸೇವಿಸಿ ವಿನೂತನ ಪ್ರತಿಭಟನೆ ನಡೆಸಿದರು. ತಾತ್ಕಾಲಿಕವಾಗಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎನ್ನುವ ಸರ್ಕಾರದ ವರದಿಯ ಜೊತೆ ಜೊತೆಗೆ ಎರಡನೇ ಹಂತದ ಕೊರೊನಾ ಭಾರೀ ವೇಗದಲ್ಲಿ ಹರಡುತ್ತಿದೆ ಎಂದು ಸರ್ಕಾರವೇ ಆತಂಕಗೊಂಡಿರುವ ಸಂದರ್ಭದಲ್ಲಿ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದು, ದಿನನಿತ್ಯ ಊಟ ಮಾಡಲು ಪರಿದಾಡುವಂತಹ ಕಷ್ಟಕರ ಪರಿಸ್ಥಿತಿ ಉಂಟಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

2 ವಾರಗಳ ಹಿಂದಷ್ಟೇ ಗ್ಯಾಸ್‌ ದರ ದಿಢೀರನೆ 50 ರೂ. ಏರಿಕೆಯಿಂದಾಗಿ ಗ್ರಾಹಕರು ಕಂಗಾಲಾಗಿದ್ದರು. ಒಂದು ವಾರದಲ್ಲಿ 2 ಬಾರಿ ದರ ಏರಿಕೆಯಿಂದಾಗಿ ಗ್ರಾಹಕರಿಗೆ ಶಾಕ್‌ ನೀಡಿ ಈಗ ಗ್ಯಾಸ್‌ ದರ 880 ರೂ.ಗೆ ತಲುಪಿದೆ. ಬಡ ಜನತೆ ಕೊಳ್ಳಲಾರದಪರಿಸ್ಥಿತಿಗೆ ತಲುಪಿದ್ದಾರೆ. ಸಿಲಿಂಡರ್‌ಗೆ ಸಬ್ಸಿಡಿ ನೀಡುತ್ತಿದ್ದ ಕೇಂದ್ರ ಸರ್ಕಾರ 6 ತಿಂಗಳಿನಿಂದ ನಿಲ್ಲಿಸಿದೆ. ಆದರೆ ದರ ಏರಿಕೆ ಮಾತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ ಎಂದು ಆರೋಪಿಸಿದರು.  ಕಳೆದ 1 ತಿಂಗಳಿನಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಕೈಗೆ ನಿಲುಕದಷ್ಟು ಏರಿಕೆಯಾಗಿದೆ. ಈಗಾಗಲೇ ಪೆಟ್ರೋಲ್‌ ಲೀ.100 ರೂ.ಮುಟ್ಟಿದೆ. ಇದರಿಂದಾಗಿ ವಾಹನ ಸವಾರರಿಗೆ, ಲಾರಿ, ಬಸ್‌, ಟ್ಯಾಕ್ಸಿ ಮಾಲೀಕರಿಗೆ ದರದ ಬಿಸಿ ತಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್‌ ಮತ್ತು ಡೀಸೆಲ್‌ಗೆ ವಿ ಧಿಸಿರುವ ತೆರಿಗೆ ರದ್ದು ಪಡಿಸಬೇಕು ಅಥವಾ ಕಡಿತ ಮಾಡಬೇಕು ಎಂದು ಒತ್ತಾಯಿಸಿದರು.

ಅಗತ್ಯ ವಸ್ತುಗಳಾದ ಅಡುಗೆ ಎಣ್ಣೆ, ಬೇಳೆಕಾಳುಗಳು, ತರಕಾರಿ ಸೇರಿದಂತೆ ಇನ್ನಿತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ಶ್ರೀಸಾಮಾನ್ಯರು ಆತಂಕಗೊಂಡಿದ್ದಾರೆ ಮತ್ತು ಅರೆಹೊಟ್ಟೆಯಲ್ಲಿ ಮಲಗುವ ಪರಿಸ್ಥಿತಿ ಉಂಟಾಗಿದೆ. ಒಟ್ಟಾರೆ ಬಿಜೆಪಿಯವರ ಸಾಧನೆ ಬಡವರ ಪಾಲಿಗೆ ಆತಂಕಕಾರಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌. ಎಸ್‌. ಸುಂದರೇಶ್‌, ಪಾಲಿಕೆ ಸದಸ್ಯರಾದ ಎಚ್‌.ಸಿ. ಯೋಗೇಶ್‌, ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಮುಖಂಡರಾದ ಇಸ್ಮಾಯಿಲ್‌ಖಾನ್‌, ಎಲ್‌.  ರಾಮೇಗೌಡ, ಎಸ್‌.ಪಿ. ಶೇಷಾದ್ರಿ, ಎನ್‌. ರಮೇಶ್‌, ವೈ.ಎಚ್‌. ನಾಗರಾಜ್‌, ವಿಶ್ವನಾಥ ಕಾಶಿ, ವಿಜಯಲಕ್ಷಿ¾à ಪಾಟೀಲ್‌, ಸಿ.ಎಸ್‌. ಚಂದ್ರಭೂಪಾಲ್‌, ಎನ್‌.ಡಿ. ಪ್ರವೀಣ್‌ ಕುಮಾರ್‌, ಚಂದನ್‌, ಸೌಗಂ ಧಿಕ, ಎಚ್‌.ಪಿ. ಗಿರೀಶ್‌ ಇನ್ನಿತರರು ಇದ್ದರು.

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.