Shivamogga: ಕಾರಿಗೆ ಬೆಂಕಿ ಹಚ್ಚಿ ಶಿವಮೊಗ್ಗದ ಯುವಕನ ಭೀಕರ ಹತ್ಯೆ
Team Udayavani, Mar 16, 2024, 2:40 PM IST
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಹತ್ಯೆಗೀಡಾದ ಯುವಕ ಎಂದು ಹೇಳಲಾಗಿದ್ದು, ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಈ ಘಟನೆ ನಡೆದಿದೆ.
ಆತ ಕೊಂಡೊಯ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ.
ರಾತ್ರಿ ಗಾಡಿಕೊಪ್ಪದ ಮನೆಯಲ್ಲಿದ್ದ ಯುವಕನಿಗೆ, ಕೆಲ ಪರಿಚಿತರು ಆತನ ಮೊಬೈಲ್ ಫೋನ್ ಗೆ ಕರೆ ಮಾಡಿದ್ದರು. ಸ್ನೇಹಿತರೋರ್ವರ ಇನ್ನೋವಾ ಕಾರಿನಲ್ಲಿ ವೀರೇಶ್ ತೆರಳಿದ್ದರು. ನಂತರ ಮನೆಗೆ ಹಿಂದಿರುಗಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಶಿಕಾರಿಪುರ ಡಿವೈಎಸ್ಪಿ ಕೇಶವ್, ಇನ್ಸ್ ಪೆಕ್ಟರ್ ರುದ್ರೇಶ್, ಶಿರಾಳಕೊಪ್ಪ ಠಾಣೆ ಸಬ್ ಇನ್ಸ್’ಪೆಕ್ಟರ್ ರಮೇಶ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ