ಕದ್ದ ಜೆಸಿಬಿಯಲ್ಲೇ ಎಟಿಎಂ ಯಂತ್ರ ಕದಿಯಲು ಯತ್ನಿಸಿದ ಖದೀಮ… ಪೊಲೀಸರನ್ನು ಕಂಡು ಪರಾರಿ
Team Udayavani, Jul 26, 2023, 9:25 AM IST
ಶಿವಮೊಗ್ಗ: ಕದ್ದಿರುವ ಜೆಸಿಬಿ ಬಳಸಿ ಎಟಿಎಂ ಯಂತ್ರ ಕದಿಯಲು ಯತ್ನಿಸಿದ ಕಳ್ಳನೊಬ್ಬ ಪೊಲೀಸರನ್ನು ಕಂಡು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರ ಪೊಲೀಸ್ ಠಾಣಾಯಲ್ಲಿ ಮಂಗಳವಾರ ರಾತ್ರಿ ನಡೆದೆದಿದೆ.
ಇಲ್ಲಿನ ವಿನೋಬನಗರ ಪೊಲೀಸ ಸ್ಟೇಷನ್ ವ್ಯಾಪ್ತಿಯ ಶಿವಾಲಯ ಬಳಿಯ ಆಕ್ಸಿಸ್ ಬ್ಯಾಂಕ್ ಎಟಿಎಂವೊಂದರಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಕಳ್ಳತನ ಮಾಡಿದ್ದ ಜೆಸಿಬಿಯನ್ನು ತಂದ ಖದೀಮ ಎಟಿಎಂ ಯಂತ್ರವನ್ನು ಎಗರಿಸಲು ಮುಂದಾಗಿದ್ದಾನೆ ಈ ವೇಳೆ ರಾತ್ರಿ ಬೀಟ್ ನಲ್ಲಿದ್ದ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ ಇದನ್ನು ಕಂಡ ಕಳ್ಳ ಜೆಸಿಬಿ ಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಸಮಯಕ್ಕೆ ಸರಿಯಾಗಿ ಬಂದ ಪೊಲೀಸರಿಂದ ನಡೆಯಬೇಕಿದ್ದ ಕಳ್ಳತನವೊಂದು ತಪ್ಪಿದಂತಾಗಿದೆ.
ದುಷ್ಕರ್ಮಿಯು ಜೆಸಿಬಿ ಬಳಸಿ ಎಟಿಎಂ ಓಪನ್ ಮಾಡುತ್ತಿರುವುದನ್ನ ಗಮನಿಸಿದ ಪೊಲೀಸರು ಆತನನ್ನು ಹಿಡಿಯಲು ಮುಂದಾಗಿದ್ದಾರೆ. ಅಷ್ಟರಲ್ಲಿ ಆರೋಪಿ ಎಸ್ಕೇಪ್ ಆಗಿದ್ಧಾನೆ. ಸಮೀಪದಲ್ಲಿಯೇ ಇರುವ ಪೆಟ್ರೋಲ್ ಬಂಕ್ ಬಳಿಯಲ್ಲಿ ನಿಲ್ಲಿಸಲಾಗಿದ್ದ ಜೆಸಿಬಿಯನ್ನು ಕದ್ದು ಎಟಿಎಂ ಯಂತ್ರ ಕದಿಯಲು ಮುಂದಾಗಿದ್ದಾನೆ ಎನ್ನಲಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬಿಸಿದ್ದಾರೆ.
ಸದ್ಯ ಘಟನೆ ಸಂಬಂಧ ವಿನೋಬನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಜೆಸಿಬಿಯನ್ನು ಕೂಡ ತಮ್ಮ ವಶಕ್ಕೆ ಪಡೆದು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ: Anju: ಪಾಕ್ ಗೆಳೆಯನೊಂದಿಗೆ ಭಾರತದ ಅಂಜು ಮದುವೆ ಆದದ್ದು ನಿಜವೇ? ಇಲ್ಲಿದೆ ಸತ್ಯಾಸತ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ