ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ : ಪ್ರಮುಖ ಆರೋಪಿಯ ಕಾಲಿಗೆ ಪೊಲೀಸರಿಂದ ಗುಂಡೇಟು
Team Udayavani, Aug 16, 2022, 7:58 AM IST
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಮಾರ್ನಾಮಿಬೈಲ್ ನ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಆರೋಪಿ ಹಲ್ಲೆಗೆ ಯತ್ನಿಸಿದ್ದಾನೆ ಈ ವೇಳೆ ಶಿವಮೊಗ್ಗ ವಿನೋಬನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿರುವ ಮಂಜುನಾಥ್ ಕುರಿ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋ ಶಂಕರ ಲೇಔಟ್ ನಲ್ಲಿ ಘಟನೆ ನಡೆದಿದ್ದು, ಸದ್ಯ ಆರೋಪಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ದೊಡ್ಡಪೇಟೆ ಪೊಲೀಸರು ಈಗಾಗಲೇ ಶಿವಮೊಗ್ಗ ಜೆಸಿ ನಗರದ ನದೀಮ್ (25) ಹಾಗೂ ಬುದ್ಧ ನಗರದ ಅಬ್ದುಲ್ ರೆಹಮಾನ್ (25) ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮತ್ತಿಬ್ಬರ ಬಂಧನಕ್ಕೆ ಪೊಲೀಸರಿಂದ ಕಾರ್ಯಾಚರಣೆ ಮುಂದುವರಿದಿತ್ತು.
ನಗರದಲ್ಲಿ ವಿ ಡಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ಬಿಗುವಿನ ವಾತಾವಣವಿದೆ. ಅಲ್ಲದೇ ಎರಡು ಕಡೆಗಳಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಪರಿಣಾಮ ಮತ್ತಷ್ಟು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ಇಂದು ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : ಶಿವಮೊಗ್ಗ : ಯುವಕನಿಗೆ ಚಾಕು ಇರಿತ ಪ್ರಕರಣ ; ಇಬ್ಬರ ಬಂಧನ, ನಗರದಲ್ಲಿ ಪೊಲೀಸ್ ಕಟ್ಟೆಚ್ಚರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು