ಶಿವಮೊಗ್ಗದಲ್ಲಿ ಪತ್ತೆಯಾದ ಅನಾಮಧೇಯ ಪತ್ರಕ್ಕೆ ಟ್ವಿಸ್ಟ್ : ಪ್ರಕರಣದ ಹಿಂದೆ ಲವ್ ಸ್ಟೋರಿ
ಕೋಮುಗಲಭೆಯ ಸಂಚು ರೂಪಿಸಿ ತಾನೇ ಬಂಧಿಯಾದ
Team Udayavani, Aug 24, 2022, 2:38 PM IST
ಶಿವಮೊಗ್ಗ : ನಗರದಲ್ಲಿ ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ ವೇಳೆ ಉಂಟಾದ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು ಈ ನಡುವೆ ಕಳೆದ ಶನಿವಾರ ನಗರದಲ್ಲಿ ಅನಾಮದೇಯ ಪತ್ರವೊಂದು ಪತ್ತೆಯಾಗಿ ಭಾರಿ ತಲ್ಲಣ ಸೃಷ್ಠಿಸಿತ್ತು, ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಸೂಳೆಬೈಲಿನ ಅಯೂಬ್ ಎಂಬಾತನನ್ನು ಬಂಧಿಸುವ ಜೊತೆಗೆ ನಗರದಲ್ಲಿ ಕೋಮು ಗಲಭೆ ಸೃಷ್ಟಿಸುವ ಅನಾಮಧೇಯ ಪತ್ರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದಂತಾಗಿದೆ..
ಅಂದಹಾಗೆ ಈ ಪತ್ರ ಬರೆದಿರುವುದು ಕೂಡಾ ಆತನೇ.. ಕಾರಣ ಅದೇ ಊರಿನ ಫೈಜಲ್ ಎಂಬಾತನ ಪತ್ನಿಯನ್ನು ಅಯೂಬ್ ಪ್ರೀತಿಸುತಿದ್ದನಂತೆ ಕಳೆದ ನಾಲ್ಕು ವರ್ಷಗಳ ಹಿಂದೆ ಇವರಿಬ್ಬರ ಮದುವೆಯಾಗಿದ್ದು ಹೇಗಾದರೂ ಮಾಡಿ ಫೈಜಲ್ ನನ್ನು ಜೈಲಿಗೆ ಅಟ್ಟಿ ಆತನ ಪತ್ನಿ ಜೊತೆಗೆ ಸುಖವಾಗಿ ಇರಬಹುದು ಎಂದು ಪ್ಲಾನ್ ಮಾಡಿದ್ದನಂತೆ ಅದಕ್ಕೆ ಸರಿಯಾಗಿ ಶಿವಮೊಗ್ಗದಲ್ಲಿ ಸಾವರ್ಕರ್ ಭಾವಚಿತ್ರ ವಿಚಾರದಲ್ಲಿ ಉಂಟಾದ ಗಲಭೆಯನ್ನು ಫೈಜಲ್ ಮೇಲೆ ಹಾಕಿ ಗಣೇಶ ಹಬ್ಬದ ಸಂದರ್ಭ ಕೋಮು ಗಲಭೆ ಎಬ್ಬಿಸುವ ರೀತಿಯಲ್ಲಿ ಏನಾದರು ಮಾಡಬೇಕೆಂದು ಸಂಚು ರೂಪಿಸಿ ಅಯೂಬ್ ಪತ್ರ ಬರೆದು ಜೈಲಿಗಟ್ಟುವ ಪ್ಲಾನ್ ಮಾಡಿದ್ದ.. ಆದರೆ ಕೊನೆಗೆ ತಾನು ಹೆಣೆದ ಬಲೆಗೆ ತಾನೆ ಬಿದ್ದು ಜೈಲು ಸೇರಿದ ಕಥೆ ಇದು…
ಏನು ಪ್ರಕರಣ :
ಕಳೆದ ಶನಿವಾರ ರಾತ್ರಿ ಗಾಂಧಿ ಬಜಾರ್ ನಿವಾಸಿ ಪ್ರಶಾಂತ್ ಅವರು ತನ್ನ ಅಂಗಡಿ ಬಂದ್ ಮಾಡಿ ದೇವಸ್ಥಾನದ ಲೈಟ್ ಬಂದ್ ಮಾಡಲು ತೆರಳುತ್ತಿದ್ದ ವೇಳೆ ದೇವಸ್ಥಾನದ ಎದುರು ಕವರ್ ಪತ್ತೆಯಾಗಿದ್ದು ಅದರೊಳಗೆ ಇದ್ದ ಪತ್ರದಲ್ಲಿ ಗಣೇಶ ಹಬ್ಬದ ದಿನ ನಡೆಯುವ ಕೋಮುಗಲಭೆ ನಿಲ್ಲಿಸಿ ಹಾಗೂ ಮೂವರ ಜೀವ ಉಳಿಸಿ ಎಂದು ಬರೆಯಲಾಗಿತ್ತು.
ಇದನ್ನೂ ಓದಿ : ರಾಜ್ಯಾಧ್ಯಕ್ಷರ ಬದಲಾವಣೆ: ಹೈಕಮಾಂಡಿಗೆ ಬಿಟ್ಟದ್ದು: ಸಚಿವ ಕೆ.ಗೋಪಾಲಯ್ಯ
ಪತ್ರದಲ್ಲೇನಿತ್ತು ? :
ಓರ್ವ ಮಾರ್ವಾಡಿಯನ್ನ ಅರ್ಧಂಬರ್ಧ ಕೊಲೆ ಮಾಡಲಾಗಿದೆ ಆತನನ್ನ ಸಂಪೂರ್ಣ ತೆಗೆಯಬೇಕು. ಇನ್ನೊಬ್ಬ ಮಾರ್ವಾಡಿ, ಉದ್ದಿಮೆದಾರ ಹಾಗೂ ಹರ್ಷನ ಸಹಚರನನ್ನ ಕೊಲೆಯಾಗಬೇಕೆಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮಾರುಕಟ್ಟೆಯಲ್ಲಿ ಶೌಚಾಲಯದ ಬಳಿ ಮೂವರು ಗಾಂಜಾ ಸೇದುತ್ತಿದ್ದವರು ಈ ಬಗ್ಗೆ ಮಾತನಾಡಿಕೊಂಡಿರುವುದನ್ನ ನಾನು ಕೇಳಿಸಿಕೊಂಡು ಭಯಭೀತಿಯಾಗಿದ್ದೇನೆ ಅಲ್ಲದೆ ಈ ಕಾರ್ಯಕ್ಕೆ ಮೂವರನ್ನ ಮಂಗಳೂರಿನಿಂದ ಕರೆಸಬೇಕು ಎಂದು ಮಾತನಾಡಿಕೊಂಡಿದ್ದಾರೆ. ಕೃತ್ಯದ ವೇಳೆ ಮೊಬೈಲ್ ಫೋನ್ ಜೊತೆಗೆ ಯಾವುದೇ ವಾಹನ ಬಳಸಬಾರದು ಅಲ್ಲದೆ ಯಾವುದೇ ಕಾರಣಕ್ಕೂ ಯಾರಿಗೂ ಈ ಬಗ್ಗೆ ತಿಳಿಯಬಾರದು. ಗಲಾಟೆ ನಡೆದರೆ ಮಾತ್ರ ಗಣೇಶ ಹಬ್ಬ ನಿಲ್ಲಿಸಲು ಸಾಧ್ಯ ಎಂದು ಮಾತನಾಡುತ್ತಿದ್ದರು ಬಳಿಕ ನಾನು ಕಷ್ಟಪಟ್ಟು ಆ ವ್ಯಕ್ತಿಗಳು ಯಾರೆಂದು ನೋಡಿದಾಗ ಓರ್ವ ಮೊಹ್ಮದ್ ಫೈಜಲ್ ಎಂಬಾತನಾಗಿದ್ದ ಆತ ನನ್ನ ಪರಿಚಿತನೇ ಆಗಿದ್ದ ಆತನ ಹೆಸರು ಫೈಸಲ್, ಈತ ಗಾಂಜಾ ಮಾರಾಟ ಮಾಡುವುದು ಜೊತೆಗೆ ಗಾಂಜಾ ಸೇವನೆಯನ್ನೂ ಮಾಡುತ್ತಾನೆ ಅಲ್ಲದೆ ಈತ ಆಜಾದ್ ನಗರದಲ್ಲಿ ರೌಡಿಸಂ ಮಾಡಿಕೊಂಡು ಇದ್ದವನು. ಹಾಗಾಗಿ ಪೊಲೀಸರು ಈತನನ್ನು ಬಂಧಿಸಿ ಮುಂದೆ ನಡೆಯುವ ಗಲಭೆಯನ್ನು ನಿಯಂತ್ರಿಸಬಹುದು ಎಂದು ಬರೆದುಕೊಂಡಿದ್ದ.
ಘಟನೆ ಕುರಿತು ತನಿಖೆ ಕೈಗೆತ್ತಿಕೊಂಡ ಪೊಲೀಸರು ಫೈಜಲ್ ನನ್ನು ವಿಚಾರಣೆ ನಡೆಸಿದ ವೇಳೆ ತನ್ನ ಪತ್ನಿಯ ಜೊತೆ ಅಯೂಬ್ ಅನೈತಿಕ ಸಂಬಂಧ ಹೊಂದಿರುವುದು ಗೊತ್ತಾಗಿದೆ, ಬಳಿಕ ಪೊಲೀಸರು ಅಯೂಬ್ ನನ್ನು ವಿಚಾರಣೆ ನಡೆಸಿದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!