ಶಿವಮೊಗ್ಗ: ಈಶ್ವರಪ್ಪ ಸ್ಪರ್ಧಿಸದಿದ್ದರೆ ಬಿಜೆಪಿಯಿಂದ ಯಾರು?


Team Udayavani, Mar 8, 2023, 6:20 AM IST

ಶಿವಮೊಗ್ಗ: ಈಶ್ವರಪ್ಪ ಸ್ಪರ್ಧಿಸದಿದ್ದರೆ ಬಿಜೆಪಿಯಿಂದ ಯಾರು?

ಶಿವಮೊಗ್ಗ: ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟ ಆರಂಭಿಸಿದ ಮೇಲೆ ಕಾಂಗ್ರೆಸ್‌ ಪಾಲಿಗೆ ಈ ಕ್ಷೇತ್ರ ಕಬ್ಬಿಣದ ಕಡಲೆಯಾಗಿದೆ. ಈ ಬಾರಿ ಮೂರು ಪಕ್ಷದಿಂದಲೂ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಸ್ಪಷ್ಟತೆ ಇಲ್ಲ. ಬಿಜೆಪಿ, ಕಾಂಗ್ರೆಸ್‌ನಲ್ಲಿ ಡಜನ್‌ಗಟ್ಟಲೇ ಆಕಾಂಕ್ಷಿಗಳು ಟಿಕೆಟ್‌ ನಿರೀಕ್ಷೆಯಲ್ಲಿದ್ದಾರೆ. ಜೆಡಿಎಸ್‌ ಕಣದಲ್ಲಿ ಇಲ್ಲ.

ಶಿವಮೊಗ್ಗ ಬಿಜೆಪಿ ಭದ್ರ ಕೋಟೆ. ಸಂಘಟನೆ ವಿಚಾರದಲ್ಲಿ ಸದೃಢವಾಗಿದೆ. ಬಿಜೆಪಿ ಮತದಾರರ ಸೆಳೆಯಲು ಅಭಿವೃದ್ಧಿ-ಹಿಂದುತ್ವದ ವಿಚಾರಗಳನ್ನು ಬಳಸಲು ಮುಂದಾಗಿದೆ. ಕಾಂಗ್ರೆಸ್‌ ಈ ಬಾರಿ ಆಡಳಿತ ವಿರೋಧಿ ಅಲೆ,

ಕೋಮು ಗಲಭೆ, ಜನರಿಗೆ ತೊಂದರೆಯಾಗುತ್ತಿರುವ ವಿಷಯಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೊರಟಿದೆ. ಆದರೆ ಎರಡೂ ಪಕ್ಷಗಳಲ್ಲಿ ಅಭ್ಯರ್ಥಿ ಯಾರೆಂಬ ಸ್ಪಷ್ಟತೆ ಇಲ್ಲ. ಬಿಜೆಪಿಯಲ್ಲಿ ಸದ್ಯ ಹಾಲಿ ಶಾಸಕ ಈಶ್ವರಪ್ಪ ಪುತ್ರ ಕಾಂತೇಶ್‌ ಹೆಸರು ಮುಂಚೂಣಿಯಲ್ಲಿದ್ದರೆ, ಎಂಎಲ್‌ಸಿ ಆಯನೂರು ಮಂಜುನಾಥ್‌ “ಕಾರು ಡ್ರೈವ್‌’ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ವೈದ್ಯ ವೃತ್ತಿಯಲ್ಲಿ ಹೆಸರು ಮಾಡಿರುವ ಡಾ|ಧನಂಜಯ ಸರ್ಜಿ ಅವರು ಟಿಕೆಟ್‌ಗೆ ಪ್ರಬಲ ಪೈಪೋಟಿ ನಡೆಸುತ್ತಿದ್ದಾರೆ. ಕೈಗಾರಿಕಾ ನಿಗಮದ ಉಪಾಧ್ಯಕ್ಷರಾಗಿದ್ದ ಎಸ್‌.ದತ್ತಾತ್ರಿ, ಸೂಡಾ ಅಧ್ಯಕ್ಷರಾಗಿದ್ದ ಜ್ಯೋತಿ ಪ್ರಕಾಶ್‌, ಪಾಲಿಕೆ ಸದಸ್ಯ ಚನ್ನಬಸಪ್ಪ, ಯುವ ಮೋರ್ಚಾ ಅಧ್ಯಕ್ಷ ಹರಿಕೃಷ್ಣ ಹೆಸರು ಚರ್ಚೆಯಲ್ಲಿವೆ.

ಕೈನಲ್ಲಿ 13 ಆಕಾಂಕ್ಷಿಗಳು: ಇನ್ನು ಕಾಂಗ್ರೆಸ್‌ನಿಂದ ಹದಿಮೂರು ಅಕಾಂಕ್ಷಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌.ಸುಂದರೇಶ್‌, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌, ಪಾಲಿಕೆ ಸದಸ್ಯ ಎಚ್‌.ಸಿ.ಯೋಗೇಶ್‌, ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಎಸ್‌.ಪಿ. ದಿನೇಶ್‌, ಮಾಜಿ ಮೇಯರ್‌ ಎಸ್‌.ಕೆ.ಮರಿಯಪ್ಪ, ಇಮಿ¤ಯಾಜ್‌, ಶೀನ್‌ ಜೋಸೆಫ್‌, ವೈ.ಎಚ್‌.

ನಾಗರಾಜ್‌, ನರಸಿಂಹಮೂರ್ತಿ, ಎಲ್‌.ಸತ್ಯನಾರಾಯಣರಾವ್‌, ನಯಾಜ್‌ ಅಹಮ್ಮದ್‌ ಖಾನ್‌, ಡಾ|ದಿನೇಶ್‌ ಅವರು ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ ಎಚ್‌.ಎಸ್‌.ಸುಂದರೇಶ್‌, ಮಾಜಿ ಶಾಸಕ ಕೆ.ಬಿ.ಪ್ರನಸ್ನಕುಮಾರ್‌, ಪಾಲಿಕೆ ಸದಸ್ಯ ಎಚ್‌.ಸಿ.ಯೋಗೇಶ್‌ ಹೆಸರು ಅಂತಿಮ ಪಟ್ಟಿಯಲ್ಲಿದೆ ಎನ್ನಲಾಗಿದೆ. ಹೊಸ ಬೆಳವಣಿಗೆಯಲ್ಲಿ ಶಾಮನೂರು ಶಿವಶಂಕರಪ್ಪ ಸಂಬಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಪ್ತರಾಗಿರುವ ನಿವೃತ್ತ ಡಿವೈಎಸ್‌ಪಿ ಪಿ.ಒ.ಶಿವಕುಮಾರ್‌ ಹೆಸರು ಕೂಡ ರೇಸ್‌ನಲ್ಲಿದೆ.

ಬಂಡಾಯಗಾರರ ನಿರೀಕ್ಷೆ: 2008ರಲ್ಲಿ 19,232 ಹಾಗೂ 2013ರ ಚುನಾವಣೆಯಲ್ಲಿ 21,638 ಮತ ಪಡೆದಿದ್ದ ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್‌ ಅವರು ಈ ಬಾರಿ ತಟಸ್ಥರಾಗಿದ್ದಾರೆ. 2018ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ನಿರಂಜನ್‌ ಅವರು ಕೇವಲ 5796 ಮತ ಪಡೆದು ರಾಜಕೀಯದಿಂದಲೇ ದೂರ ಉಳಿದರು. ಈಗ ಮತ್ತೂಮ್ಮೆ ಎಂ.ಶ್ರೀಕಾಂತ್‌ ಅವರಿಗೆ ಟಿಕೆಟ್‌ ಕೊಡಲು ಹೈಕಮಾಂಡ್‌ ಉತ್ಸುಕವಾಗಿದ್ದರೂ ಶ್ರೀಕಾಂತ್‌ ಅವರು ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ. ವೈದ್ಯ ಧನಂಜಯ ಸರ್ಜಿ ಅವರನ್ನು ಜೆಡಿಎಸ್‌ಗೆ ಕರೆತರುವ ಪ್ರಯತ್ನ ಫಲಕೊಡಲಿಲ್ಲ. ಬಂಡಾಯಗಾರರ ನಿರೀಕ್ಷೆಯಲ್ಲಿ ಜೆಡಿಎಸ್‌ ಇದೆ.

ಈಚೆಗೆ ರಾಷ್ಟ್ರೀಯ ಪಕ್ಷವಾಗಿ ಗುರುತಿಸಿ ಕೊಂಡಿರುವ ಆಮ್‌ ಆದ್ಮಿ ಪಾರ್ಟಿ(ಆಪ್‌) ವತಿಯಿಂದ ಸಾಮಾಜಿಕ ಕಾರ್ಯಕರ್ತೆ ಋನೇತ್ರಾವತಿ ಗೌಡ, ಮನೋಹರ್‌ ಗೌಡ ಹೆಸರು ಮುಂಚೂಣಿಯಲ್ಲಿದೆ. ಜೆಡಿಯು, ಸಮಾಜವಾದಿ ಪಕ್ಷದಿಂದಲೂ ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆ ಇದೆ. ಹಾಗೆಯೇ ಬಂಡಾಯ ನಿಂತು ಶಿವಮೊಗ್ಗದಲ್ಲಿ ಗೆಲ್ಲುವ ವಾತಾವರಣ ಮೊದಲಿನಿಂದಲೂ ಇಲ್ಲ.

ಕಾಂತೇಶ್‌ಗೆ ಟಿಕೆಟ್‌ ಕೊಡಿಸಲು ಯತ್ನ?
ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೆ.ಎಸ್‌.ಈಶ್ವರಪ್ಪನವರು ಹಾಲಿ ಶಾಸಕರಾಗಿದ್ದು ವಯೋಮಿತಿ ಕಾರಣಕ್ಕೆ ಮುಂದಿನ ಚುನಾವಣೆಗೆ ಅವರಿಗೆ ಟಿಕೆಟ್‌ ಸಿಗುವುದಿಲ್ಲ ಎಂಬ ಚರ್ಚೆಗಳು ಪಕ್ಷದೊಳಗೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಆಕಾಂಕ್ಷಿಗಳ ಪಟ್ಟಿ ಏರುತ್ತಿದೆ. ಮಗ ಕಾಂತೇಶ್‌ಗೆ ಟಿಕೆಟ್‌ ಕೊಡಿಸಲು ಈಶ್ವರಪ್ಪನವರು ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಸಂಘಟನೆ ಭದ್ರವಾಗಿರುವುದರಿಂದ ಪಕ್ಷ ಪ್ರಯೋಗಕ್ಕೆ ಮುಂದಾಗುವುದೋ ಅಥವಾ  ಗೆಲ್ಲುವ ಕುದುರೆ’ ಈಶ್ವರಪ್ಪನವರಿಗೆ ಮತ್ತೊಂದು ಅವಕಾಶ ಕೊಡುವುದೇ ಕುತೂಹಲ ಮೂಡಿಸಿದೆ.

-ಶರತ್‌ ಭದ್ರಾವತಿ

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.