ಪರಿಹಾರ ಮಧ್ಯವರ್ತಿಗಳ ಪಾಲಾಗದಂತೆ ಕ್ರಮ ಕೈಗೊಳ್ಳಿ


Team Udayavani, Jun 15, 2021, 10:57 PM IST

15-20

ಶಿವಮೊಗ್ಗ: ಅಸಂಘಟಿತ ಕಾರ್ಮಿಕರಿಗಾಗಿ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್‌ ಹಣವನ್ನು ಮಧ್ಯವರ್ತಿಗಳು ಪಡೆಯುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಹಾಗೂ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ್‌ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಈ ಪ್ಯಾಕೇಜ್‌ ಹಣವನ್ನು ಅರ್ಹರಿಗೆ ತಲುಪಿಸುವ ನಡುವೆ ಕೆಲವು ಮಧ್ಯವರ್ತಿಗಳು 300 ರಿಂದ 350 ರೂ. ಕಮಿಷನ್‌ ಪಡೆಯುತ್ತಿದ್ದಾರೆ ಎಂಬ ದೂರುಗಳು ಸಾಕಷ್ಟು ಬಂದಿವೆ. ಇದನ್ನು ತಾವು ತೀವ್ರವಾಗಿ ಖಂಡಿಸುವುದಲ್ಲದೆ ಈ ಮಧ್ಯವರ್ತಿಗಳನ್ನು ದೂರವಿಟ್ಟು ಅರ್ಹ ಫಲಾನುಭವಿಗಳಿಗೆ ನೇರವಾಗಿ ಘೋಷಿತ ಮೊತ್ತ ತಲುಪಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

ಮಧ್ಯವರ್ತಿಗಳ ಬಗ್ಗೆ ಸರ್ಕಾರ ಮತ್ತು ಇಲಾಖೆಯ ಅ ಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಅಸಂಘಟಿತ ಕಾರ್ಮಿಕರಿಗೆ ನೀಡುವ ಸೌಲಭ್ಯಗಳು ದುರುಪಯೋಗವಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಮತ್ತು ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಪ್ರಾಮಾಣಿಕವಾಗಿ ತಲುಪಬೇಕು ಈ ನಿಟ್ಟಿನತ್ತ ಸಂಘ ಕೆಲಸ ಮಾಡುತ್ತಿದೆ ಎಂದರು.

ಅಸಂಘಟಿತ ಕಾರ್ಮಿಕರೆಲ್ಲರೂ ಸಂಘಟಿತರಾಗಬೇಕಾದ ಅಗತ್ಯವಿದೆ. ಅನೇಕ ಅಸಂಘಟಿತ ಕಾರ್ಮಿಕರು ಇಂದು ಯಾವುದೇ ಸೌಲಭ್ಯಗಳು ಇಲ್ಲದೆ ವಂಚಿತರಾಗುತ್ತಿದ್ದಾರೆ. ಉದಾಹರಣೆಗೆ ಅಡುಗೆ ಕೆಲಸ ಮಾಡುವವರು ಸಾಕಷ್ಟು ಜನ ಇದ್ದಾರೆ. ಆದರೆ ಮುಜರಾಯಿ ದೇವಸ್ಥಾನದಲ್ಲಿ ಅಡುಗೆ ಮಾಡುವರರಿಗೆ ಮಾತ್ರ ಸರ್ಕಾರ ಪರಿಹಾರ ಘೋಷಿಸಿದೆ. ಉಳಿದ ಸಾವಿರಾರು ಅಡುಗೆ ಮಾಡುವವರು ಎಲ್ಲಿಗೆ ಹೋಗಬೇಕು. ಹಾಗೆಯೇ ಟೈಲರಿಂಗ್‌ ಮಾಡುವವರು, ಹೊಟೇಲ್‌ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬೀಡಿ ಕಟ್ಟುವವರು ಹೀಗೆ ಲಕ್ಷಾಂತರ ಜನರು ಇನ್ನು ಸಂಘಟಿತರಾಗಿಲ್ಲ. ಅಸಂಘಟಿತರೂ ಅಗಿಲ್ಲ. ಇಂತಹವರಿಗೆ ಸರ್ಕಾರದ ಪರಿಹಾರಗಳು ಸಿಗುವುದಾದರೂ ಹೇಗೆ? ಹಾಗಾಗಿ ಮೊದಲು ಇವರನ್ನೆಲ್ಲಾ ಒಂದೇ ಸೂರಿನಡಿ ತರಬೇಕಾಗಿದೆ ಎಂದರು.

ಇದುವರೆಗೂ ಕಾರ್ಮಿಕ ಇಲಾಖೆಯಲ್ಲಿ ತಮ್ಮ ಹೆಸರು, ಉದ್ಯೋಗವನ್ನು ನೋಂದಾಯಿಸದೆ ಇರುವ ಅಸಂಘಟಿತ ಕಾರ್ಮಿಕರು ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಪಂ, ನಗರ ಪ್ರದೇಶಗಳಲ್ಲಿ, ನಗರಸಭೆ ಅಥವಾ ಪಾಲಿಕೆ ಅಥವಾ ಪಪಂಗಳಲ್ಲಿ ನಿಯೋಜಿತ ಅಧಿ ಕಾರಿಗಳಿಂದ ದೃಢೀಕರಣ ಪತ್ರ ಪಡೆದು ಬ್ಯಾಂಕ್‌ ಪಾಸ್‌ ಪುಸ್ತಕ ಜೆರಾಕ್ಸ್‌ ಪ್ರತಿ, ಬಿಪಿಎಲ್‌ ಕಾರ್ಡ್‌, ಆಧಾರ್‌ ಕಾರ್ಡ್‌, ಫೋಟೋದೊಂದಿಗೆ ಅಗತ್ಯ ದಾಖಲೆಗಳನ್ನು ನೀಡಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದ ಅವರು, ಇದು ಕೇವಲ ಪರಿಹಾರ ಪಡೆಯಲು ಅಷ್ಟೆ ಅಲ್ಲದೆ ಉಚಿತ ಲಸಿಕೆ ಹಾಕಿಸಿಕೊಳ್ಳಲು ಕೂಡ ನೆರವಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಕುಪೇಂದ್ರ ಆಯನೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೇಘಾ ಮೋಹನ ಜೆಟ್ಟಿ, ಉಪಾಧ್ಯಕ್ಷೆ ಗೌರಿ ಶ್ರೀನಾಥ್‌, ಪದಾ  ಧಿಕಾರಿಗಳಾದ ಸುರೇಖಾ ಪಾಲಾಕ್ಷಪ್ಪ ಇದ್ದರು.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸಭೆಗೆ ಈಶ್ವರಪ್ಪ ಗೈರು: ಬಿಜೆಪಿ ನಿರ್ಲಕ್ಷ್ಯ

PM ಮೋದಿ ಸಭೆಗೆ ಈಶ್ವರಪ್ಪ ಗೈರು: ಬಿಜೆಪಿ ನಿರ್ಲಕ್ಷ್ಯ

Teachers ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು

Teachers ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು

11-thirthahalli

Thirthahalli: ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ

2-shivamogga

Shivamogga: ಲಾಂಗ್ ನಿಂದ ಯುವಕನಿಗೆ ಹಲ್ಲೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.