ಪರಿಹಾರ ಮಧ್ಯವರ್ತಿಗಳ ಪಾಲಾಗದಂತೆ ಕ್ರಮ ಕೈಗೊಳ್ಳಿ


Team Udayavani, Jun 15, 2021, 10:57 PM IST

15-20

ಶಿವಮೊಗ್ಗ: ಅಸಂಘಟಿತ ಕಾರ್ಮಿಕರಿಗಾಗಿ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್‌ ಹಣವನ್ನು ಮಧ್ಯವರ್ತಿಗಳು ಪಡೆಯುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಹಾಗೂ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ್‌ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಈ ಪ್ಯಾಕೇಜ್‌ ಹಣವನ್ನು ಅರ್ಹರಿಗೆ ತಲುಪಿಸುವ ನಡುವೆ ಕೆಲವು ಮಧ್ಯವರ್ತಿಗಳು 300 ರಿಂದ 350 ರೂ. ಕಮಿಷನ್‌ ಪಡೆಯುತ್ತಿದ್ದಾರೆ ಎಂಬ ದೂರುಗಳು ಸಾಕಷ್ಟು ಬಂದಿವೆ. ಇದನ್ನು ತಾವು ತೀವ್ರವಾಗಿ ಖಂಡಿಸುವುದಲ್ಲದೆ ಈ ಮಧ್ಯವರ್ತಿಗಳನ್ನು ದೂರವಿಟ್ಟು ಅರ್ಹ ಫಲಾನುಭವಿಗಳಿಗೆ ನೇರವಾಗಿ ಘೋಷಿತ ಮೊತ್ತ ತಲುಪಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

ಮಧ್ಯವರ್ತಿಗಳ ಬಗ್ಗೆ ಸರ್ಕಾರ ಮತ್ತು ಇಲಾಖೆಯ ಅ ಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಅಸಂಘಟಿತ ಕಾರ್ಮಿಕರಿಗೆ ನೀಡುವ ಸೌಲಭ್ಯಗಳು ದುರುಪಯೋಗವಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಮತ್ತು ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಪ್ರಾಮಾಣಿಕವಾಗಿ ತಲುಪಬೇಕು ಈ ನಿಟ್ಟಿನತ್ತ ಸಂಘ ಕೆಲಸ ಮಾಡುತ್ತಿದೆ ಎಂದರು.

ಅಸಂಘಟಿತ ಕಾರ್ಮಿಕರೆಲ್ಲರೂ ಸಂಘಟಿತರಾಗಬೇಕಾದ ಅಗತ್ಯವಿದೆ. ಅನೇಕ ಅಸಂಘಟಿತ ಕಾರ್ಮಿಕರು ಇಂದು ಯಾವುದೇ ಸೌಲಭ್ಯಗಳು ಇಲ್ಲದೆ ವಂಚಿತರಾಗುತ್ತಿದ್ದಾರೆ. ಉದಾಹರಣೆಗೆ ಅಡುಗೆ ಕೆಲಸ ಮಾಡುವವರು ಸಾಕಷ್ಟು ಜನ ಇದ್ದಾರೆ. ಆದರೆ ಮುಜರಾಯಿ ದೇವಸ್ಥಾನದಲ್ಲಿ ಅಡುಗೆ ಮಾಡುವರರಿಗೆ ಮಾತ್ರ ಸರ್ಕಾರ ಪರಿಹಾರ ಘೋಷಿಸಿದೆ. ಉಳಿದ ಸಾವಿರಾರು ಅಡುಗೆ ಮಾಡುವವರು ಎಲ್ಲಿಗೆ ಹೋಗಬೇಕು. ಹಾಗೆಯೇ ಟೈಲರಿಂಗ್‌ ಮಾಡುವವರು, ಹೊಟೇಲ್‌ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬೀಡಿ ಕಟ್ಟುವವರು ಹೀಗೆ ಲಕ್ಷಾಂತರ ಜನರು ಇನ್ನು ಸಂಘಟಿತರಾಗಿಲ್ಲ. ಅಸಂಘಟಿತರೂ ಅಗಿಲ್ಲ. ಇಂತಹವರಿಗೆ ಸರ್ಕಾರದ ಪರಿಹಾರಗಳು ಸಿಗುವುದಾದರೂ ಹೇಗೆ? ಹಾಗಾಗಿ ಮೊದಲು ಇವರನ್ನೆಲ್ಲಾ ಒಂದೇ ಸೂರಿನಡಿ ತರಬೇಕಾಗಿದೆ ಎಂದರು.

ಇದುವರೆಗೂ ಕಾರ್ಮಿಕ ಇಲಾಖೆಯಲ್ಲಿ ತಮ್ಮ ಹೆಸರು, ಉದ್ಯೋಗವನ್ನು ನೋಂದಾಯಿಸದೆ ಇರುವ ಅಸಂಘಟಿತ ಕಾರ್ಮಿಕರು ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಪಂ, ನಗರ ಪ್ರದೇಶಗಳಲ್ಲಿ, ನಗರಸಭೆ ಅಥವಾ ಪಾಲಿಕೆ ಅಥವಾ ಪಪಂಗಳಲ್ಲಿ ನಿಯೋಜಿತ ಅಧಿ ಕಾರಿಗಳಿಂದ ದೃಢೀಕರಣ ಪತ್ರ ಪಡೆದು ಬ್ಯಾಂಕ್‌ ಪಾಸ್‌ ಪುಸ್ತಕ ಜೆರಾಕ್ಸ್‌ ಪ್ರತಿ, ಬಿಪಿಎಲ್‌ ಕಾರ್ಡ್‌, ಆಧಾರ್‌ ಕಾರ್ಡ್‌, ಫೋಟೋದೊಂದಿಗೆ ಅಗತ್ಯ ದಾಖಲೆಗಳನ್ನು ನೀಡಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದ ಅವರು, ಇದು ಕೇವಲ ಪರಿಹಾರ ಪಡೆಯಲು ಅಷ್ಟೆ ಅಲ್ಲದೆ ಉಚಿತ ಲಸಿಕೆ ಹಾಕಿಸಿಕೊಳ್ಳಲು ಕೂಡ ನೆರವಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಕುಪೇಂದ್ರ ಆಯನೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೇಘಾ ಮೋಹನ ಜೆಟ್ಟಿ, ಉಪಾಧ್ಯಕ್ಷೆ ಗೌರಿ ಶ್ರೀನಾಥ್‌, ಪದಾ  ಧಿಕಾರಿಗಳಾದ ಸುರೇಖಾ ಪಾಲಾಕ್ಷಪ್ಪ ಇದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.