ಶಿವಮೊಗ್ಗ ಪಾಲಿಕೆ: 219.07 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ


Team Udayavani, Mar 29, 2020, 4:02 PM IST

ಶಿವಮೊಗ್ಗ ಪಾಲಿಕೆ: 219.07 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ

ಶಿವಮೊಗ್ಗ: ಒಂದೆಡೆ ಅನಿವಾರ್ಯ, ಮತ್ತೂಂದೆಡೆ ಇಂತಹ ಸಮಯದಲ್ಲಿ ಇದು ಬೇಕೆ? ಎಂಬ ಸಂದಿಗ್ಧತೆ ನಡುವೆ ಶನಿವಾರ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ 2020-21ನೇ ಸಾಲಿನಲ್ಲಿ 219.07 ಲಕ್ಷ ರೂ.ಗಳ ಉಳಿತಾಯ ಬಜೆಟ್‌ ಮಂಡನೆಯಾಗಿದೆ.

ಪ್ರಸಕ್ತ ಈ ಸಾಲಿನಲ್ಲಿ ಒಟ್ಟು ಜಮೆ 27953.80 ಲಕ್ಷ ರೂ. ಗಳಾಗಿದ್ದು, ಇದರಲ್ಲಿ 10185.65 ಆರಂಭಿಕ ಶುಲ್ಕ 10750.91 ಲಕ್ಷ ರೂ. ರಾಜಸ್ವ ಜಮೆಗಳಾಗಿರುತ್ತವೆ. 5444 ಲಕ್ಷ ರೂ ಬಡಾವಳ ಜಮೆ ಒಳಗೊಂಡಿದ್ದು, 1573.24 ಅಸಾಧಾರಣ ಜಮೆಯಾಗಿರುತ್ತದೆ. ಒಟ್ಟು ವೆಚ್ಚ 27734.10 ಲಕ್ಷ ರೂ. ಗಳಾಗಿದ್ದು, 9567.24 ಲಕ್ಷ ರೂ ರಾಜಸ್ವ ವೆಚ್ಚವಾಗಿದೆ. 16598 ಲಕ್ಷ ರೂ. ಬಂಡವಾಳ ವೆಚ್ಚ, 1568.24 ಲಕ್ಷ ರೂ. ಅಸಾಧಾರಣ ವೆಚ್ಚವಾಗಿದ್ದು, ಒಟ್ಟಾರೆ 2020-21ನೇ ಸಾಲಿನ ಶಿವಮೊಗ್ಗ ಮಹಾನಗರ ಪಾಲಿಕೆಯು 219.70 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡಿಸಲಾಗಿದೆ.

ಮೇಯರ್‌ ಸುವರ್ಣ ಶಂಕರ್‌ ಅಧ್ಯಕ್ಷತೆಯಲ್ಲಿ ಇಂದು ಆರಂಭ ಗೊಂಡ ಆಯವ್ಯಯ ಭಾಷಣಕ್ಕೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕೊರೊನಾದಂತಹ ಕಾಯಿಲೆಯ ಇಂತಹ ಸಂದರ್ಭದಲ್ಲಿ ಬಜೆಟ್‌ ಮಂಡನೆ ಸರಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಎಚ್‌.ಸಿ. ಯೋಗೇಶ್‌, ರಮೇಶ್‌ ಹೆಗ್ಡೆ, ನಾಗರಾಜ್‌ ಕಂಕಾರಿ, ಸತ್ಯನಾರಾಯಣ್‌ ಸೇರಿದಂತೆ ಹಲವರು ಆಕ್ಷೇಪಿಸಿದರು. ಮಾತಿಗೆ ಮಾತಿಗೆ ಬೆಳೆದ ಸಂದರ್ಭದಲ್ಲಿ ಪ್ರಸಕ್ತ ಬಜೆಟ್‌ ಮಂಡನೆಯ ಅನಿವಾರ್ಯತೆಯ ಬಗ್ಗೆ ಆಯುಕ್ತ ಚಿದಾನಂದ ವಟಾರೆ ಮಾಹಿತಿ ನೀಡಲು ಮುಂದಾದರು.

ಈ ಸಂದರ್ಭದಲ್ಲಿ ಪ್ರತಿ ಪಕ್ಷದ ಸದಸ್ಯರು ಸಭಾ ತ್ಯಾಗ ಮಾಡಿದರು. ಈ ಮಾರ್ಚ್‌ ತಿಂಗಳ ಅಂತ್ಯದೊಳಗೆ ಬಜೆಟ್‌ ಮಂಡಿಸುವುದು ಆದ್ಯ ಕರ್ತವ್ಯ. ಪ್ರಸಕ್ತ ಸನ್ನಿವೇಶದಲ್ಲಿ ಅಗತ್ಯವಿರುವ ಕೆಮಿಕಲ್ಸ್‌ ಹಾಗೂ ಮತ್ತಿತರರ ಸಾಮಗ್ರಿಕೊಳ್ಳಲು, ಸಿಬ್ಬಂದಿಗಳ ವೇತನ ನೀಡುವಿಕೆಗೆ ಬಜೆಟ್‌ ಮಂಡನೆ ಅನಿವಾರ್ಯ ಎಂದು ಚಿದಾನಂದ ವಾಟಾರೆ ತಿಳಿಸಿದರು. ಉಪಮೇಯರ್‌ ಸುರೇಖಾ ಮುರುಳೀಧರ್‌, ಹಣಕಾಸು ಕಂದಾಯ ತೆರಿಗೆ ನಿರ್ಧರಣೆ ಸ್ಥಾಯಿ ಸಮಿತಿ ಅಧಕ್ಷ ವಿಶ್ವನಾಥ್‌ ಮಾತನಾಡಿದರು. ಮೇಯರ್‌ ಸುವರ್ಣ ಶಂಕರ್‌ ಇದ್ದರು.

ಪ್ರತಿಭಟನೆ: ಮಹಾನಗರ ಪಾಲಿಕೆಯ 2020 21ನೇ ಸಾಲಿನ ಆಯವ್ಯಯ ಮಂಡನೆ ಮಾಡುವುದಕ್ಕೆ ಪಾಲಿಕೆಯ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿ ಮೇಯರ್‌ ಮುಂಭಾಗ ಪ್ರತಿಭಟನೆ ನಡೆಸಿದರು. ಮೂರು ತಿಂಗಳಿಂದ ಸಾಮಾನ್ಯ ಸಭೆ ಸಹ ಕರೆದಿಲ್ಲ. ಸಭೆ ಕರೆಯುವಂತೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಅಲ್ಲದೆ ಈ ಬಾರಿ ಬಜೆಟ್‌ನಲ್ಲಿ ಯಾವುದೇ ಹೊಸಯೋಜನೆ ಇಲ್ಲ. ಇದೊಂದು ಬೋಗಸ್‌ ಬಜೆಟ್‌ ಆಗಿದೆ ಎಂದು ವಿಪಕ್ಷ ಸದಸ್ಯರು ಆರೋಪಿಸಿದರು. ಪಾಲಿಕೆ ವಿಪಕ್ಷ ನಾಯಕ ಎಚ್‌ .ಸಿ. ಯೋಗೇಶ್‌, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸದಸ್ಯರಾದ ರಮೇಶ್‌ ಹೆಗ್ಡೆ, ನಾಗರಾಜ್‌ ಕಂಕಾರಿ, ರೇಖಾ ರಂಗನಾಥ್‌, ಆರ್‌.ಸಿ. ನಾಯ್ಕ, ಯಮುನಾ ರಂಗೇಗೌಡ ಮತ್ತಿತರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಿಪಕ್ಷ ಸದಸ್ಯರ ತೀವ್ರ ಗದ್ದಲದ ನಡುವೆಯೇ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ವಿಶ್ವನಾಥ್‌, 2020 21 ನೇ ಸಾಲಿನ ಪಾಲಿಕೆ ಬಜೆಟ್‌ ಮಂಡಿಸಿದರು.

 

ಕಳೆದ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ 18 ಕೋಟಿ ಮೊತ್ತದ ಯಾವ ಯೋಜನೆಗಳನ್ನು ಅನುಷ್ಠಾನ ಮಾಡಿಲ್ಲ. ಈ ಬಾರಿ ಮತ್ತೆ 19.5 ಕೋಟಿ ಹೊಸ ಯೋಜನೆ ಘೋಷಿಸಿದ್ದಾರೆ. ಬಿಜೆಪಿಗೆ ಘೋಷಿಸುವ ಚಟವಿದೆಯೇ ಹೊರತು, ಅನುಷ್ಠಾನ ಮಾಡುವ ಹಠ ಇಲ್ಲ. ಮೊದಲು ಹಿಂದಿನ ವರ್ಷದ ಯೋಜನೆಗಳ ಅನುಷ್ಠಾನ ಮಾಡಲಿ. ನಂತರ ಹೊಸ ಯೋಜನೆ ಜಾರಿ ಮಾಡಲಿ.  -ಎಚ್‌.ಸಿ. ಯೋಗೀಶ್‌, ವಿಪಕ್ಷ ನಾಯಕ

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.