ನೈಸರ್ಗಿಕ ಆಹಾರೋತ್ಪನ್ನ ಬೆಳೆಯಿರಿ

ಕೃಷಿಯಲ್ಲಿ ರಸಗೊಬ್ಬರಗಳ ಅತಿಯಾದ ಬಳಕೆ ಬೇಡ: ಡಾ| ಎಸ್‌.ಪಿ. ನಟರಾಜು ಕರೆ

Team Udayavani, Jan 19, 2020, 4:13 PM IST

19-January-21

ಶಿವಮೊಗ್ಗ: ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಕೃಷಿ ಇಲಾಖೆ, ಸಹಯೋಗದಲ್ಲಿ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆ, ದಕ್ಷಿಣ ಅರೆ ಮಲೆನಾಡು ವಲಯ-07 ರ ಸಮುದಾಯ ಸಹಾಯಕರು ಮತ್ತು ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಮುಂಗಾರೋತ್ತರ ಕಾರ್ಯಗಾರವನ್ನು ಶುಕ್ರವಾರ ನವುಲೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ವಿಸ್ತರಣಾ ನಿರ್ದೇಶಕ ಡಾ| ಎಸ್‌.ಪಿ.ನಟರಾಜು, ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ನಮ್ಮ ಪೂರ್ವಿಕರ ಕಾಲದಿಂದಲೂ ಮಾಡುತ್ತಿದ್ದ ಕೃಷಿಯಾಗಿದ್ದು, ಕಾಲ ಕಳೆದಂತೆ ಜನಸಂಖ್ಯೆಗೆ ಅನುಗುಣವಾಗಿ ಕೃಷಿಯಲ್ಲಿ ತಳಿಯ ಆವಿಷ್ಕಾರ- ಸಂಶೋಧನೆಗಳು ನಡೆದು ಆಹಾರ, ಹಣ್ಣು ಹಾಗೂ ಹಾಲಿನ ಉತ್ಪಾದನೆ ಹೆಚ್ಚಾಗಿದೆ.

ಇದರಿಂದ ಕೃಷಿಯು ನೈಸರ್ಗಿಕವಾಗಿ ಉಳಿಯದೆ ಹೇರಳವಾದ
ರಸಗೊಬ್ಬರಗಳ ಬಳಕೆಯಿಂದ ಕೃತಕ ಕೃಷಿಯಾಗಿ ಮಾರ್ಪಟ್ಟಿದೆ. ಇದರ ಪರಿಣಾಮವಾಗಿ ವಾತಾವರಣದಲ್ಲಿ ವ್ಯತ್ಯಾಸ ಉಂಟಾಗಿ ಬೆಳೆಗಳ ಮೇಲೆ ಹವಾಮಾನ ಬದಲಾವಣೆಯ ದುಷ್ಪರಿಣಾಮಗಳುಂಟಾಗಿವೆ. ಬದಲಾದ ಪರಿಸ್ಥಿತಿಗೆ ಹೊಂದಿಕೊಂಡಂತೆ ಕೃಷಿಯಲ್ಲಿ ನೈಸರ್ಗಿಕ ಪರಿಕರಗಳನ್ನು ಉಪಯೋಗಿಸಿಕೊಂಡು ಕೃಷಿ ಮಾಡುವುದರಿಂದ ಕೃಷಿ ವೆಚ್ಚ
ಕಡಿಮೆಯಾಗಿ ನೈಸರ್ಗಿಕ ಆಹಾರ ಉತ್ಪನ್ನಗಳನ್ನು ಬೆಳೆಯಬಹುದಾಗಿದೆಯೆಂದು ಹೇಳಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಡಾ| ಯೋಗೀಶ್‌ ಎಚ್‌.
ಆರ್‌. ಮಾತನಾಡಿ, ತೋಟಗಾರಿಕಾ ಬೆಳೆಗಳಲ್ಲಿ ಅಂತರ ಬೆಳೆಗಳನ್ನು ಬೆಳೆಯುವುದರಿಂದ ಕಳೆ ನಿಯಂತ್ರಣ ಹಾಗೂ ತೋಟಗಾರಿಕಾ ಬೆಳೆಗಳಾದ ತೆಂಗು, ಅಡಕೆಯಲ್ಲಿ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳುವುದರಿಂದ ಕೀಟ- ರೋಗಗಳ ಹತೋಟಿ ಮಾಡಬಹುದಾಗಿದೆ ಎಂದು ಹೇಳಿದರು. ರೈತರು ಸ್ವಯಂ ಪ್ರೇರಿತವಾಗಿ ತಯಾರಿಸಿಕೊಂಡ ಅಕ್ಕಿಯ ಗಂಜಿಯನ್ನು ಉಪಯೋಗಿಸಿ ತೆಂಗಿನಲ್ಲಿ ಕಂಡುಬರುವ ಕೀಟ ಬಾಧೆಯನ್ನು ಹತೋಟಿಗೆ ತರುತ್ತಾರೆ. ಅದೇ ರೀತಿ ಅಂತರ ಬೆಳೆಗಳನ್ನು ಬೆಳೆಯಲು ಸಲಹೆ ನೀಡಿದರು. ರೈತರ ಆದಾಯ ದ್ವಿಗುಣ ಮಾಡಬೇಕಾಗಿದ್ದು, ಜಮೀನಿನಲ್ಲೇ ಸಿಗುವ ಔಷ ಧೀಯ ಎಲೆಗಳು, ಸಗಣಿ ಹಾಗೂ ಗಂಜಲ ಉಪಯೋಗಿಸಿಕೊಂಡು ಖರ್ಚು ಕಡಿಮೆ ಮಾಡಿ ಪರಿಸರದಲ್ಲಿ ಸಮತೋಲನತೆ ಕಾಪಾಡಬೇಕಾಗಿದೆ ಎಂದು ಹೇಳಿದರು.

ಸಹಾಯಕ ಕೃಷಿ ನಿರ್ದೇಶಕ ಗಣೇಶ್‌ಮಾತನಾಡಿ, ಕೃಷಿಯಲ್ಲಿ ರಾಸಾಯನಿಕ ಗೊಬ್ಬರಗಳ ಬಳಕೆ ಹೆಚ್ಚಾಗಿದ್ದು ಮಣ್ಣು ಮತ್ತು ಆಹಾರ ಪದಾರ್ಥಗಳು ವಿಷಯುಕ್ತವಾಗಿವೆ. ಇದರಿಂದ ದೂರ ಉಳಿಯಲು ರೈತರು ಸಮಗ್ರ ಕೃಷಿಯಲ್ಲಿ ಸಾವಯವ ಕೃಷಿ, ನೈಸರ್ಗಿಕ ಕೃಷಿ ಅಳವಡಿಸಕೊಳ್ಳಬೇಕೆಂದು ತಿಳಿಸಿದರು.

ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆಯ ವಲಯ-7 ಕ್ಕೆ
ಒಳಪಡುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳಿಂದ 14 ಸಮುದಾಯ ಸಹಾಯಕರು, 38 ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಕಾರ್ಯವಾಹಿ ಸಂಶೋಧನಾ ಯೋಜನಾ ತಂಡದ ವಿಜ್ಞಾನಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಪಾಲ್ಗೊಂಡಿದ್ದವರನ್ನು  ರ್ಯವಾಹಿ
ಸಂಶೋಧನಾ ಯೋಜನಾ ಸಭೆಯ ಮುಖ್ಯಸ್ಥರಾದ ಡಾ| ಎಚ್‌. ಕೆ.
ವೀರಣ್ಣ ಸ್ವಾಗತಿಸಿ, ಯೋಜನೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕೃಷಿ ತೋಟಗಾರಿಕಾ ವಿವಿ ಡೀನ್‌ (ಕೃಷಿ) ಡಾ| ಚಿದಾನಂದಪ್ಪ ಎಚ್‌. ಎಂ. ಅವರು ಮಣ್ಣಿನ ಆರೋಗ್ಯ, ಫಲವತ್ತತೆ ಮತ್ತು ಭೌತಿಕ ಹಾಗೂ ಜೈವಿಕ ಗುಣಧರ್ಮಗಳ ಮಹತ್ವವನ್ನು ಹೇಳಿ,
ಯೋಜನೆಯ ಯಶಸ್ಸಿಗೆ ದಿಧೀರ್ಘಾವಧಿಯ ಸಂಶೋಧನೆ ಅಗತ್ಯವೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಒಆರ್‌ಪಿ
ತಂಡದ ಸದಸ್ಯ ಕುಮಾರ್‌ ನಾಯು ಇತರರಿದ್ದರು. ಡಾ| ಶಿಲ್ಪ ಎಚ್‌.ಡಿ. ಕಾರ್ಯಕ್ರಮ ನಿರೂಪಿಸಿದರು. ಡಾ| ಪ್ರಶಾಂತ್‌ ಕೆ. ಎಂ. ವಂದಿಸಿದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.