ಬಿಜೆಪಿ ಮತ್ತೆ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ: ಬಿಎಸ್ವೈ
Team Udayavani, Aug 28, 2021, 2:03 PM IST
ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನ ತೊರೆದ ಬಳಿಕ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ ಸ್ವಾಗತಿಸಿದರು. ವಿನೋಬನಗರದಲ್ಲಿರುವ ನಿವಾಸಕ್ಕೆ ಯಡಿಯೂರಪ್ಪ ಅವರು ಸಂಜೆ ಆಗಮಿಸಿದರು.
ಈ ವೇಳೆ ಪಟಾಕಿ ಸಿಡಿಸಿ, ಹೂಗುತ್ಛ ನೀಡಿ ಸ್ವಾಗತಿಸಿದರು. ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಯಡಿಯೂರಪ್ಪ ಅವರಿಗೆ ರಾಖೀ ಕಟ್ಟಲಾಯಿತು. ವಿನೋಬನಗರದ ನಿವಾಸಕ್ಕೆ ಮುಂದೆ ಕಾರ್ಯಕರ್ತರ ಸಭೆ ನಡೆಸಿದ ಯಡಿಯೂರಪ್ಪ, ಇಡೀ ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆ ಮತ್ತು ನಗರ ಮಾದರಿ ಕ್ಷೇತ್ರವಾಗಿದೆ. ಆರು ತಿಂಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ವಿಮಾನ ಹಾರಾಟ ಪ್ರಾರಂಭವಾಗಲಿದೆ. ಕೈಗಾರಿಕೆಗಳು ಶಿವಮೊಗ್ಗಕ್ಕೆ ಆಗಮಿಸಲಿದ್ದು, ಹತ್ತಾರು ಸಾವಿರ ಯುವಕರಿಗೆ ಉದ್ಯೋಗ ಸಿಗಲಿದೆ. ಇದರಿಂದ ತಮ್ಮ ಕನಸು ನನಸಾದಂತಾಗಲಿದೆ ಎಂದರು.
ಇನ್ನೊಂದು ವರ್ಷದಲ್ಲಿ ಮತ್ತೂಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಿದೆ. ಅದಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದೇನೆ. ಬಳಿಕ ವಿಧಾನಸಭೆ ಕ್ಷೇತ್ರವಾರು ಪ್ರವಾಸಕೈಗೊಳ್ಳುತ್ತೇನೆ. ಮೊದಲಿಗೆ ನಮ್ಮ ಶಾಸಕರು ಇರುವಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತೇನೆ. ಬಳಿಕ ನಮ್ಮ ಶಾಸಕರು ಇರದ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಅಲ್ಲೆಲ್ಲ ಬಿಜೆಪಿ ಗೆಲ್ಲಿಸುವ ಪ್ರಯತ್ನ ಮಾಡುತ್ತೇನೆ. ಸ್ವಂತ ಶಕ್ತಿ ಮೇಲೆ ಬಿಜೆಪಿ ಅಧಿಕಾರಕ್ಕೆ ತರಬೇಕಿದೆ. ನಮ್ಮ ಮನೆ ಬಾಗಿಲು ಯಾವಾಗಲೂ ತೆಗೆದಿರುತ್ತದೆ. ಜನರು ಯಾವುದೇ ಸಮಸ್ಯೆ ಇದ್ದರೂ ಜಾತಿ, ಧರ್ಮ ಭೇದವಿಲ್ಲದೆ ಎಲ್ಲರೂ ಬರಬಹುದು ಎಂದರು.
ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಪದ್ಮನಾಭ ಭಟ್ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ