ವೀರಶೈವ ಧರ್ಮಕ್ಕೆ ಶಿವಾಗಮಗಳೇ ಮೂಲ


Team Udayavani, Oct 12, 2021, 3:22 PM IST

shivamogga news

ಶಿವಮೊಗ್ಗ: ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸಿದವೀರಶೈವ ಧರ್ಮ, ಸಾಹಿತ್ಯಕ್ಕೆ 28 ಶಿವಾಗಮಗಳೇಮೂಲ ಬೇರುಗಳೆಂದು ಬಾಳೆಹೊನ್ನೂರು ಶ್ರೀರಂಭಾಪುರಿ ಡಾ| ಪ್ರಸನ್ನ ರೇಣುಕ ವೀರಸೋಮೇಶ್ವರ ಭಗವತ್ಪಾದರು ಅಭಿಪ್ರಾಯಪಟ್ಟರು.
ಶಿಕಾರಿಪುರ ತಾಲೂಕಿನ ಕಡೇನಂದಿಹಳ್ಳಿ ಕ್ಷೇತ್ರದಲ್ಲಿಜರಗುತ್ತಿರುವ ಶರನ್ನವರಾತ್ರಿ ದಸರಾ ಧರ್ಮಸಮಾರಂಭದ 5ನೇ ದಿನದ ಸಾನ್ನಿಧ್ಯ ವಹಿಸಿ ಅವರುಆಶೀರ್ವಚನ ನೀಡಿದರು.

ಧರ್ಮ ಎನ್ನುವುದು ಹಸಿದವನಿಗೆ ಅನ್ನ,ಬಾಯಾರಿದವನಿಗೆ ನೀರು, ಕುರುಡನಿಗೆ ಕಣ್ಣು, ಹಕ್ಕಿಗೆರೆಕ್ಕೆ ಇದ್ದ ಹಾಗೆ. ಉದಾತ್ತ ಜೀವನ ಮೌಲ್ಯಗಳನ್ನುಸಂಪಾದಿಸಿಕೊಂಡು ನಡೆಯುವುದೇ ನಿಜವಾದಧರ್ಮ. ಪರಿಶುದ್ಧ ಮತ್ತು ಪವಿತ್ರವಾದ ಜೀವನ ರೂಪಿತಗೊಳ್ಳಲು ಧರ್ಮ ಪ್ರಜ್ಞೆ ಅವಶ್ಯಕವಾಗಿದೆ.

ವೀರಶೈವ ಧರ್ಮ ಅಂತರಂಗ ಮತ್ತು ಬಹಿರಂಗ ಶುದ್ಧಿಗೆಪ್ರಾಧಾನ್ಯತೆ ಕೊಟ್ಟಿದೆ. ಉತ್ಛ ನೀಚ, ಬಡವ- ಬಲ್ಲಿದಮತ್ತು ಗಂಡು- ಹೆಣ್ಣು ಎನ್ನುವ ತಾರತಮ್ಯವಿಲ್ಲದೆಸರ್ವರ ಶ್ರೇಯೋಭಿವೃದ್ಧಿಗೆ ಮಾರ್ಗದರ್ಶನನೀಡಿದೆ. ಮನುಷ್ಯ ಜೀವನದಲ್ಲಿ ಬದಲಾವಣೆ ಮತ್ತುಬೆಳವಣಿಗೆ ಎರಡೂ ಮುಖ್ಯ. ಹೂದೋಟದೊಳಗೆ ಯಾರೇ ಹೋಗಲಿ ಹೂಗಳು ಸುಗಂಧವನ್ನೇ ಬೀರುತ್ತವೆ.

ಹೂದೋಟದೊಳಗೆ ಹೋಗಿ ಬಂದನಂತರ ಮನುಷ್ಯ ಜೀವನ ಪರಿವರ್ತನೆಯಾಗಬೇಕು.ಮನೆಯ ಅಂಗಳದ ಕಸ ಗುಡಿಸಿ ಯಾರಾದರೂ ಹಸನಗೊಳಿಸಬಹುದು.

ಆದರೆ ಮನದ ಅಂಗಳವನ್ನುಶುಚಿಗೊಳಿಸುವುದು ಗುರುವಿನ ಆದ್ಯ ಕರ್ತವ್ಯವಾಗಿದೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್‌ಮಾತನಾಡಿ, ವೀರಶೈವ ಧರ್ಮಕ್ಕೊಂದುಇತಿಹಾಸವಿದೆ. ಸೈದ್ಧಾಂತಿಕ ತತ್ವತ್ರಯಗಳಿವೆ. ಸುಖ-ಶಾಂತಿ ಮತ್ತು ಸಮೃದ್ಧ ಬದುಕಿಗೆ ಧರ್ಮಾಚಾರ್ಯರಕೊಡುಗೆ ಅಪಾರವಾಗಿದೆ. ಶ್ರೀ ರಂಭಾಪುರಿಜಗದ್ಗುರುಗಳ ದಸರಾ ಧರ್ಮ ಸಮಾರಂಭಜನಮನದ ಮೇಲೆ ಅರಿವು ನೀಡಿ ಆದರ್ಶ ವ್ಯಕ್ತಿತ್ವರೂಪಿಸುತ್ತದೆ ಎಂದರು.ಲಕ್ಷೆ ¾àಶ್ವರ ಕ.ಸಾ.ಪ. ತಾಲೂಕು ಘಟಕದ ಅಧ್ಯಕ್ಷೆಡಾ| ಜಯಶ್ರೀ ಮಲ್ಲಿಕಾರ್ಜುನ ಹೊಸಮನಿ ಅವರಿಗೆ”ಸಾಹಿತ್ಯ ಸಿರಿ’ ಪ್ರಶಸ್ತಿ ಶ್ರೀ ರಂಭಾಪುರಿ ಜಗದ್ಗುರುಗಳುಪ್ರದಾನ ಮಾಡಿ ಶುಭ ಹಾರೈಸಿದರು. ಪ್ರಶಸ್ತಿ ಸ್ವೀಕರಿಸಿದಡಾ| ಜಯಶ್ರೀ ಮಲ್ಲಿಕಾರ್ಜುನ ಹೊಸಮನಿಮಾತನಾಡಿ, ಗುರು ಕಾರುಣ್ಯದ ಕೃಪಾ ಛತ್ರದಲ್ಲಿನಾನು ಮಾಡಿದ ಅಲ್ಪ ಸಾಹಿತ್ಯ ಸೇವೆಯನ್ನು ಗುರುತಿಸಿಪ್ರಶಸ್ತಿ ಅನುಗ್ರಹಿಸುತ್ತಿರುವುದು ನನ್ನ ಜೀವನದಸೌಭಾಗ್ಯವೆಂದು ಭಾವಿಸುವೆ. ಈ ಪ್ರಶಸ್ತಿಯಿಂದ ನನ್ನಜವಾಬ್ದಾರಿ ಇನ್ನಷ್ಟು ಹೆಚ್ಚಿದೆ ಎಂದರು.

ಕವಲೇದುರ್ಗ ಭುವನಗಿರಿ ಮಠದ ಮರುಳಸಿದ್ಧಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ವೀರಶೈವಧರ್ಮ ಸಾಹಿತ್ಯದ ಅರಿವು ತಿಳಿಯಲು ಎಲ್ಲರೂಮುಂದಾಗಬೇಕಾಗಿದೆ ಎಂದರು. ಹಾರನಹಳ್ಳಿಶಿವಯೋಗಿ ಶಿವಾಚಾರ್ಯರು ಮತ್ತು ಚನ್ನಗಿರಿಯಕೇದಾರ ಶಿವಶಾಂತವೀರ ಶಿವಾಚಾರ್ಯರು,ನಿಡಗುಂದಿ ರುದ್ರಮುನಿ ಶಿವಾಚಾರ್ಯರು,ಕೋಣಂದೂರು ಶ್ರೀಪತಿ ಪಂಡಿತಾರಾಧ್ಯಶಿವಾಚಾರ್ಯರು, ಕೆ.ಎಸ್‌. ವೀರಪ್ಪದೇವರುಸೇರಿದಂತೆ ಹಲವಾರು ಗಣ್ಯರಿಗೆ ಶ್ರೀ ರಂಭಾಪುರಿಜಗದ್ಗುರುಗಳು ಗುರುರಕ್ಷೆಯಿತ್ತು ಶುಭ ಹಾರೈಸಿದರು.ಬಂಕಾಪುರದ ರೇವಣಸಿದ್ಧೇಶ್ವರ ಶಿವಾಚಾರ್ಯಸ್ವಾಮಿಗಳು ಸಮ್ಮುಖ ವಹಿಸಿ ಉಪದೇಶಾಮೃತನೀಡಿದರು.

ಕಡೇನಂದಿಹಳ್ಳಿ ಪುಣ್ಯಾಶ್ರಮದರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ನೇತೃತ್ವವಹಿಸಿ ಮಾತನಾಡಿ ಈ ಅದ್ಭುತ ದಸರಾ ಧರ್ಮಸಮಾರಂಭದ ಯಶಸ್ಸಿಗೆ ಸಕಲ ಸದ್ಭಕ್ತರ ಸಹಕಾರ-ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದಕಾರಣವೆಂದರು. ಗಂಜೀಗಟ್ಟಿ ಕೃಷ್ಣಮೂರ್ತಿ ಜಾನಪದಗೀತೆಗಳನ್ನು ಪ್ರಸ್ತುತಪಡಿಸಿದರು. ಹೊಸಳ್ಳಿಯ ಭರತ್‌ಗು.ಚೀಲೂರು ಅವರು ಭರತ ನಾಟ್ಯ ಪ್ರದರ್ಶನನೀಡಿದರು. ಶ್ರೀ ಜಗದ್ಗುರು ರೇಣುಕಾಚಾರ್ಯಗುರುಕುಲದ ಸಾಧಕರಿಂದ ವೇದಘೋಷ ನಡೆಯಿತು.

ಕಡೇನಂದಿಹಳ್ಳಿಯ ಶಿಕ್ಷಕಿ ಕರಿಬಸಮ್ಮ ಸ್ವಾಗತಿಸಿದರು.ಗಾನಭೂಷಣ ವೀರೇಶ ಕಿತ್ತೂರ ಅವರಿಂದ ಸಂಗೀತಸೌರಭ ಜರುಗಿತು. ಶಿವಮೊಗ್ಗದ ಶಾಂತಾ ಆನಂದನಿರೂಪಿಸಿದರು. ಸಮಾರಂಭದ ಕೊನೆಗೆ ಆಕರ್ಷಕನಜರ್‌ (ಗೌರವ) ಸಮರ್ಪಣೆ ಜರುಗಿತು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.