ಬೆಳಕಿನ ಹಬ್ಬಕ್ಕೆ ಹಸಿರು ಪಟಾಕಿ ರಂಗು


Team Udayavani, Nov 3, 2021, 5:17 PM IST

shivamogga news

ಶಿವಮೊಗ್ಗ: ದೀಪಾವಳಿ ಹಿನ್ನೆಲೆಯಲ್ಲಿ ನಗರದಲ್ಲಿಪಟಾಕಿ ಮಾರಾಟ ಆರಂಭವಾಗಿದೆ. ನಗರದಎರಡು ಕಡೆ ಪಟಾಕಿ ಮಾರಾಟ ಮಳಿಗೆಗಳನ್ನುಸ್ಥಾಪಿಸಲಾಗಿದೆ.

ಬಗೆ ಬಗೆಯ ಪಟಾಕಿಗಳುಮಾರುಕಟ್ಟೆಗೆ ಬಂದಿವೆ. ಆದರೆ ಪೆಟ್ರೋಲ್‌,ಡೀಸೆಲ್‌ ದರ ಏರಿಕೆಯಿಂದಾಗಿ ಪಟಾಕಿಗಳ ಬೆಲೆತುಸು ಹೆಚ್ಚಳವಾಗಿದೆ.

ಶಿವಮೊಗ್ಗದ ನೆಹರೂ ಕ್ರೀಡಾಂಗಣ ಮತ್ತು ಸೈನ್ಸ್‌ಮೈದಾನದಲ್ಲಿ ಪಟಾಕಿ ಮಾರಾಟ ಮಳಿಗೆಗಳನ್ನುಸ್ಥಾಪಿಸಲಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂಬಗೆ ಬಗೆಯ ಪಟಾಕಿಗಳನ್ನು ಮಳಿಗೆಗಳಲ್ಲಿಇರಿಸಲಾಗಿದೆ.ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿಹಸಿರು ಪಟಾಕಿ ಮಾರಾಟ ಮಾಡುವಂತೆ ಸರ್ಕಾರಸೂಚಿಸಿದೆ. ಕಳೆದ ವರ್ಷ ಹಬ್ಬಕ್ಕೆ ಒಂದೆರಡು ದಿನಮೊದಲು ಹಸಿರು ಪಟಾಕಿ ಮಾರಾಟ ಮಾಡುವಂತೆಸರ್ಕಾರ ಸೂಚಿಸಿದ್ದರಿಂದ, ವ್ಯಾಪಾರಿಗಳು ನಷ್ಟಅನುಭವಿಸಿದ್ದರು.

ಆದ್ದರಿಂದ ಈ ಭಾರಿ ಸಂಪೂರ್ಣಹಸಿರು ಪಟಾಕಿಗಳನ್ನು ಮಾರಾಟಕ್ಕೆ ಇರಿಸಲಾಗಿದೆ.ಗ್ರಾಹಕರು ಕೂಡ ಹಸಿರು ಪಟಾಕಿಯನ್ನೇ ಕೇಳಿಖರೀದಿಸುತ್ತಿದ್ದಾರೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಈ ಬಾರಿಯೂ ಹತ್ತಾರು ವಿಧದ ಪಟಾಕಿಗಳನ್ನುಮಾರಾಟಕ್ಕೆ ಇಡಲಾಗಿದೆ. ಮಕ್ಕಳು ಇಷ್ಟಪಡುವವಿವಿಧ ಪಟಾಕಿಗಳಿಗೆ ಸ್ವಲ್ಪ ಬೇಡಿಕೆ ಇದೆ. ಬಗೆಬಗೆಯ ಪಿಸ್ತೂಲುಗಳನ್ನು ಇರಿಸಲಾಗಿದ್ದು, ಮಕ್ಕಳಕಣ್ಸೆಳೆಯಲಿವೆ. ಇನ್ನು, ಕಳೆದ ಬಾರಿಗಿಂತಲೂ ಈಭಾರಿ ಪಟಾಕಿ ಬೆಲೆ ಸ್ವಲ್ಪ ಹೆಚ್ಚಳವಾಗಿದೆ ಎಂದುವ್ಯಾಪಾರಿಗಳು ತಿಳಿಸಿದ್ದಾರೆ. ಶೇ.10ರಷ್ಟು ದರಏರಿಕೆಯಾಗಿರುವ ಕುರಿತು ವ್ಯಾಪಾರಿಗಳು ಬೇಸರವ್ಯಕ್ತಪಡಿಸಿದ್ದಾರೆ.ಪೆಟ್ರೋಲ್‌, ಡಿಸೇಲ್‌ ದರ ಹೆಚ್ಚಳದ ಬಿಸಿಪಟಾಕಿಗೂ ತಟ್ಟಿದೆ.

ತಮಿಳುನಾಡು ಸೇರಿದಂತೆವಿವಿಧೆಡೆಯಿಂದ ಪಟಾಕಿ ತರಿಸಲಾಗಿದೆ. ಡೀಸೆಲ್‌ದರದ ಏರಿಕೆಯಿಂದಾಗಿ ಪಟಾಕಿ ಸಾಗಣೆ ವೆಚ್ಚದುಬಾರಿಯಾಗಿದೆ. ಇದು ಕೂಡ ಗ್ರಾಹಕರ ಜೇಬುಸುಡಲಿದೆ.ಕೋವಿಡ್‌ ಮತ್ತು ಲಾಕ್‌ಡೌನ್‌ನಿಂದಾಗಿಪಟಾಕಿ ಉದ್ಯಮದ ಮೇಲೆ ಭಾರೀ ಪೆಟ್ಟುಬಿದ್ದಿದೆ. ಪಟಾಕಿ ಖರೀದಿ ಮಾಡುವವರ ಸಂಖ್ಯೆದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ. ಇದರಪರಿಣಾಮ ಶಿವಮೊಗ್ಗದಲ್ಲಿ ಪಟಾಕಿ ಮಾರಾಟಗಾರರಸಂಖ್ಯೆ ಕುಸಿತ ಕಾಣುತ್ತಿದೆ. ಈ ಬಾರಿ ನೆಹರೂಸ್ಟೇಡಿಯಂನಲ್ಲಿ 11 ಮಳಿಗೆಗಳು ಮಾತ್ರ ಇವೆ.ಕಳೆದ ವರ್ಷ ಸುಮಾರು 15 ಮಳಿಗೆಗಳಿದ್ದವು.ಗ್ರಾಹಕರ ಸಂಖ್ಯೆಯೂ ಇಳಿಮುಖವಾಗಿದೆಎಂದು ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.ನಿರೀಕ್ಷೆಯಂತೆ ಗ್ರಾಹಕರು ಪಟಾಕಿ ಖರೀದಿಗೆಬರುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.

ಪಟಾಕಿ ಮಳಿಗೆ ಬಾಡಿಗೆ ಪಡೆಯಲು ಮಹಾನಗರಪಾಲಿಕಗೆ ನಿಗದಿತ ಶುಲ್ಕ ಪಾವತಿಸಬೇಕು. ಆ ಬಳಿಕಸುರಕ್ಷತಾ ಕ್ರಮಗಳನ್ನು ಅನುಸರಿಸಿ ಮಳಿಗೆಗಳನ್ನುಒದಗಿಸಲಾಗುತ್ತದೆ. ಅಗ್ನಿ ಅವಘಡ ಸಂಭವಿಸಿದರೆಬೆಂಕಿ ನಿಯಂತ್ರಿಸಲು ಪ್ರತಿ ಮಳಿಗೆಯ ಮುಂದೆನೀರಿನ ಡ್ರಮ್‌ ಇಡಲಾಗಿದೆ. ಒಂದು ಬಕೆಟ್‌ನಲ್ಲಿಮರಳು ಮತ್ತು ನೀರು ಇಡಲಾಗಿದೆ.

ಆದರೆಪ್ರತ್ಯೇಕವಾಗಿ ಅಗ್ನಿಶಾಮಕ ವಾಹನ ಮತ್ತುಸಿಬ್ಬಂದಿಯನ್ನು ನಿಯೋಜಿಸಬೇಕು ಎಂದುಕೆಲವು ವ್ಯಾಪಾರಿಗಳು ಆಗ್ರಹಿಸಿದ್ದಾರೆ. ವಿದ್ಯುತ್‌ದೀಪದ ಸಂಪರ್ಕವು ಕಡಿಮೆ ಎಂಬ ಆರೋಪವುಕೇಳಿ ಬಂದಿವೆ. ದೀಪಾವಳಿ ಸಮೀಪದಲ್ಲಿದ್ದರೂಜನರು ಪಟಾಕಿ ಖರೀದಿಗೆ ನಿರಾಸಕ್ತಿ ತೋರಿದ್ದಾರೆ.ಇದು ವ್ಯಾಪಾರಿಗಳನ್ನು ಚಿಂತೆಗೀಡು ಮಾಡಿದೆ.ಬುಧವಾರದಿಂದ ಪಟಾಕಿ ಖರೀದಿ ಬಿರುಸುಪಡೆಯುವ ಸಾದ್ಯತೆ ಇದೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.