ರೈಲಿನಡಿ ಸಿಲುಕುತ್ತಿದ್ದ ಮಹಿಳೆ ರಕ್ಷಣೆ
Team Udayavani, Nov 11, 2021, 3:37 PM IST
ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಇಳಿಯಲುಹೋಗಿ ಆಯತಪ್ಪಿ ಬಿದ್ದ ಮಹಿಳೆಯೊಬ್ಬರನ್ನುರೈಲ್ವೆ ಪೊಲೀಸರು ರಕ್ಷಿಸಿದ್ದು, ಸಂಭವಿಸುತ್ತಿದ್ದಅನಾಹುತವೊಂದನ್ನು ತಪ್ಪಿಸಿದ್ದಾರೆ. ಪ್ರಾಣದಹಂಗು ತೊರೆದು ಪೊಲೀಸರು ಮಹಿಳೆ ರಕ್ಷಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಂಗಳವಾರ ತಾಳಗುಪ್ಪ-ಬೆಂಗಳೂರುಇಂಟರ್ ಸಿಟಿ ರೈಲು ಶಿವಮೊಗ್ಗ ನಿಲ್ದಾಣದಿಂದಹೊರಟಾಗ ಈ ಘಟನೆ ಸಂಭವಿಸಿದೆ. ಬೆಳಗ್ಗೆ6.55ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ಬರುವ ರೈಲು7.05ಕ್ಕೆ ನಿಲ್ದಾಣದಿಂದ ಹೊರಡಲಿದೆ. ಸಂಬಂಧಿಕರನ್ನು ರೈಲು ಹತ್ತಿಸಲು ಬಂದಿದ್ದ ಮಹಿಳೆರೈಲು ಏರಿದ್ದರು. ರೈಲು ಹೊರಡುತ್ತಿದ್ದಂತೆಗಾಬರಿಯಿಂದ ಕೆಳಗಿಳಿಯಲು ಮುಂದಾಗಿದ್ದಾರೆ.
ವ್ಯಕ್ತಿಯೊಬ್ಬರು ಮಹಿಳೆಯಕೈ ಹಿಡಿದು ಕೆಳಗಿಳಿಸುತ್ತಿರುವುದು ಸಿಸಿಟಿವಿಯಲ್ಲಿಸೆರೆಯಾಗಿದೆ. ರೈಲು ಚಲಿಸುತ್ತಿದ್ದ ವಿರುದ್ಧದಿಕ್ಕಿಗೆ ಮುಖ ಮಾಡಿಕೊಂಡು ಮಹಿಳೆ ಪ್ಲಾಟ್ಫಾರಂಗೆ ಕಾಲಿಟ್ಟಿದ್ದಾರೆ. ವಿರುದ್ಧ ದಿಕ್ಕಿಗೆ ಮುಖಮಾಡಿದ್ದು ಮತ್ತು ಸೀರೆ ಧರಿಸಿದ್ದರಿಂದ ಮಹಿಳೆ ಆಯತಪ್ಪಿ ಬಿದ್ದಿದ್ದಾರೆ.
ಈ ವೇಳೆ ಪ್ಲಾಟ್ಫಾರಂ ಮೇಲೆ ನಿಂತಿದ್ದರೈಲ್ವೆ ಪೊಲೀಸರು ಪ್ರಾಣದ ಹಂಗು ತೊರೆದು ಮಹಿಳೆಯ ರಕ್ಷಣೆ ಮಾಡಿದ್ದಾರೆ. ರೈಲ್ವೆಪ್ರೊಟೆಕ್ಷನ್ ಫೋರ್ಸ್ನ ಸಿಬ್ಬಂದಿ ಜಗದೀಶ್,ರೈಲ್ವೆ ಪೊಲೀಸರಾದ ಅಣ್ಣಪ್ಪ ಎ.ಎಸ್. ಮತ್ತುಬಿ.ಎಸ್. ಸಂತೋಷ್ ಅವರು ಕೂಡಲೆಮಹಿಳೆಯ ನೆರವಿಗೆ ಧಾವಿಸಿ ಮಹಿಳೆ ರೈಲಿನಡಿಸಿಲುಕದಂತೆ ನೋಡಿಕೊಂಡಿದ್ದಾರೆ.
ರೈಲ್ವೆ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಈ ಎಲ್ಲ ದೃಶ್ಯ ಸೆರೆಯಾಗಿದೆ. ರೈಲ್ವೆ ಇಲಾಖೆ ಹಿರಿಯಅ ಧಿಕಾರಿಗಳು ಇದನ್ನು ಗಮನಿಸಿ ಪೊಲೀಸರ ಕಾರ್ಯಕ್ಕೆ ಶಹಬ್ಟಾಸ್ ತಿಳಿಸಿದ್ದಾರೆ. ರೈಲ್ವೆಇಲಾಖೆ ಮೈಸೂರು ವಿಭಾಗದ ಡಿವಿಜನಲ್ಮ್ಯಾನೇಜರ್ ರಾಹುಲ್ ಅಗರ್ವಾಲ್ ಅವರು ಪೊಲೀಸರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ