ಭದ್ರಾ ಜಲಾಶಯದಿಂದ ನೀರು ಬಿಡುಗಡೆ
Team Udayavani, Aug 6, 2021, 6:44 PM IST
ಶಿವಮೊಗ್ಗ: ಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಪ್ರತಿದಿನ 1600 ಕ್ಯೂಸೆಕ್ಸ್ ನೀರನ್ನು ಹರಿಬಿಡಲಾಗುತ್ತಿದೆ ಎಂದು ಭದ್ರಾ ಜಲಾಶಯದ ಸೂಪರಿಂಟೆಂಡೆಂಟ್ ಇಂಜಿನಿಯರ್ ಚಂದ್ರಹಾಸ ಹೇಳಿದರು.
ಗುರುವಾರ ಜಲಾಶಯದ ನಾಲ್ಕು ಗೇಟುಗಳ ಮುಖಾಂತರ ನೀರನ್ನು ಹರಿಯಬಿಟ್ಟ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪ್ರಸ್ತುತ ಸಂದರ್ಭದಲ್ಲಿ ಹಲವು ದಶಕಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಳೆಗಾಲದ ಆರಂಭದಲ್ಲಿಯೇ ಜಲಾಶಯ ಭರ್ತಿಯಾಗುವ ಹಂತ ತಲುಪಿದೆ. ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಲು ಇನ್ನೂ ಒಂದೂವರೆ ಅಡಿ ಬಾಕಿ ಇದೆ. ನೀರಿನ ಒಳಹರಿವು ಹೀಗೆಯೇ ಮುಂದುವರಿದಲ್ಲಿ ಶೀಘ್ರದಲ್ಲಿ ಜಲಾಶಯ ಭರ್ತಿಯಾಗಲಿದೆ ಎಂದ ಅವರು, ಒಳಹರಿವಿನ ಪ್ರಮಾಣವನ್ನು ನೋಡಿಕೊಂಡು ನೀರನ್ನು ಹೊರಬಿಡಲಾಗುವುದು ಎಂದರು.
ಜಲಾಶಯ ತುಂಬುವ ಹಂತದಲ್ಲಿದ್ದು, ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ನದಿಪಾತ್ರದ ಜನರು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ನದಿ ಪಾತ್ರ ಜನರಿಗೆ ಹಾಗೂ ಜಾನುವಾರುಗಳನ್ನು ಮೇಯಿಸದಂತೆ ಈಗಾಗಲೇ ಸೂಚಿಸಲಾಗಿದೆ ಎಂದರು. ಪ್ರಸ್ತುತ 15206 ಕ್ಯೂಸೆಕ್ಸ್ ಒಳಹರಿವು ಇದ್ದು, ಭದ್ರಾ ಬಲದಂಡೆ ಮತ್ತು ಬಲದಂಡೆ, ವಿದ್ಯುತ್ ಉತ್ಪಾದನಾ ಘಟಕ ಮುಂತಾದ ನಾಲೆಗಳು ಸೇರಿದಂತೆ ಒಟ್ಟು 3911ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಒಳಹರಿವು ಹೆಚ್ಚಳವಾದಂತೆ ಹೊರಬಿಡುವ ನೀರನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದರು.
ಈ ನೀರು ತುಂಗಭದ್ರಾ ನದಿ ಹಾಗೂ ಏತ ನೀರಾವರಿ ಯೋಜನೆಗಳು, ನೆರೆಯ ಜಿಲ್ಲೆಗಳ ಕೆರೆ ಕಟ್ಟೆ ಕಾಲುವೆಗಳನ್ನು ಭರ್ತಿ ಮಾಡಲು ಅನುಕೂಲವಾಗಲಿದೆ. ಅಲ್ಲದೆ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗೆ ಸಹಕಾರಿಯಾಗಲಿದೆ ಎಂದರು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮಾತನಾಡಿ, ಈ ಅವ ಧಿಯಲ್ಲಿ ಪ್ರತಿ ವರ್ಷಕ್ಕಿಂತ ಹೆಚ್ಚಿನ ನೀರು ತುಂಬಿರುವುದು ರೈತರಲ್ಲಿ ಹರ್ಷ ಮೂಡಿಸಿದೆ.
ಇದರಿಂದಾಗಿ ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಅಚ್ಚುಕಟ್ಟು ಪ್ರದೇಶದ ಕೊನೆಯ ರೈತರ ಹೊಲಗಳಿಗೆ ನೀರು ಹರಿಯುವ ವಿಶ್ವಾಸ ತಮಗಿರುವುದಾಗಿ ತಿಳಿಸಿದರು. ಜಲಾಶಯದ ಪಾತ್ರದಲ್ಲಿ ಕಾಮಗಾರಿ ಕಳಪೆಯಾಗಿರುವ ಮಾಹಿತಿ ಇರುವ ಬಗ್ಗೆ ತಜ್ಞರಿಂದ ಮಾಹಿತಿ ಪಡೆದುಕೊಂಡಿದ್ದು, ಇದರಿಂದಾಗಿ ರೈತರಿಗೆ ಯಾವುದೇ ಹಾನಿಯಾಗುವುದಿಲ್ಲ. ಇದರಿಂದಾಗಿ ರೈತರು ಆತಂಕಪಡುವ ಅಗತ್ಯವಿಲ್ಲ ಎಂದ ಅವರು, ಈ ಸಂಬಂಧ ಮೂವರು ತಜ್ಞರ ಸಮಿತಿಯೊಂದನ್ನು ರಚಿಸಿದ್ದು, ಶೀಘ್ರದಲ್ಲಿ ವರದಿ ದೊರೆಯಲಿದೆ. ನಂತರ ಕ್ರಮ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಅಧಿ ಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.
ನಿರೀಕ್ಷೆಯಂತೆ ಜಲಾಶಯ ತುಂಬಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರು ತಮ್ಮ ಅಪೇಕ್ಷೆಯ ಬೆಳೆ ಬೆಳೆಯಲು ಆಕ್ಷೇಪಣೆ ಇಲ್ಲ. ಈ ಬಗ್ಗೆ ಯಾವುದೇ ನಿರ್ಬಂಧ ವಿ ಧಿಸುವುದನ್ನು ನಾವು ವಿರೋ ಧಿಸುವುದಾಗಿ ತಿಳಿಸಿದರು. ಗ್ರಾಪಂ ಅಧ್ಯಕ್ಷರು, ಸದಸ್ಯರು, ಇಂಜಿನಿಯರರು, ಸ್ಥಳೀಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga;ಹೆದ್ದಾರಿಯಲ್ಲೇ ಲಾಂಗ್ ಹಿಡಿದು ಓಡಾಡಿದ ಯುವಕ!
KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!
ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ
POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!
Fraud: ಮುಖೇಶ್ ಅಂಬಾನಿ ವಿಡಿಯೋ ನೋಡಿ 20 ಲಕ್ಷ ರೂ. ಕಳೆದುಕೊಂಡ ಉದ್ಯಮಿ
MUST WATCH
ಹೊಸ ಸೇರ್ಪಡೆ
Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ
ಪ್ಲಾಸ್ಟಿಕ್ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್!
ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ
Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್ ಜೆಹಾದ್ ತಡೆಗೆ ಸಹಾಯವಾಣಿ
ದುಬಾರಿ ದರಕ್ಕೆ ವಿದ್ಯುತ್ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ