ಶಿವಮೊಗ್ಗ: ಭೀಕರ ರಸ್ತೆ ಅಪಘಾತದಲ್ಲಿ ಪತಿ, ತುಂಬು ಗರ್ಭಿಣಿ ಪತ್ನಿ ಸಾವು
ಮೃತಳ ಹೊಟ್ಟೆಯಲ್ಲಿರುವ ಮಗುವನ್ನು ಉಳಿಸಲು ವೈದ್ಯರ ಪ್ರಯತ್ನ
Team Udayavani, Jun 24, 2022, 9:43 PM IST
ಶಿವಮೊಗ್ಗ : ಬೇಡರ ಹೊಸಳ್ಳಿ ಕೆರೆಯ ಬಳಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪತಿ ಮತ್ತು ತುಂಬು ಗರ್ಭಿಣಿ ಪತ್ನಿ ದಾರುಣವಾಗಿ ಸಾವನ್ನಪ್ಪಿ,ಇಬ್ಬರಿಗೆ ತೀವ್ರ ಗಾಯಗಳಾಗಿವೆ.
ಬೇಡರ ಹೊಸಳ್ಳಿ ಕೆರೆಯ ಏರಿಯ ಮೇಲೆ ಶಿವಮೊಗ್ಗ ಕಡೆಯಿಂದ ಹೋಗುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಹೊನ್ನಾಳಿ ಕಡೆಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಐ20 ಕಾರು ಢಿಕ್ಕಿ ಹೊಡೆದಿದೆ. ಓಮ್ನಿ ಕಾರು ನುಜ್ಜುಗುಜ್ಜಾಗಿದ್ದು, ದಾವಣಗೆರೆ ಕಡೆ ಸಾಗುತ್ತಿದ್ದ ಧನಂಜರಿ(35) ಪತ್ನಿ ರೋಜಾ(23) ಚೇತನ್(23)ಸುನೀತಾ ಎಂಬುವರಿಗೆ ಗಾಯಗಳಾಗಿತ್ತು. ಇವರನ್ನ ಮೆಗ್ಗಾನ್ ಗೆ ದಾಖಲಿಸಲಾಗಿತ್ತು. ಧನ್ವಂತರಿಯವರು ಚಿಕಿತ್ಸೆ ಫಲಕಾರಿ ಯಾಗದೆ ಸಾವನ್ನಪ್ಪಿದ್ದಾರೆ. ಕೆಲ ಹೊತ್ತಲ್ಲಿ ಪತ್ನಿ, ತುಂಬು ಗರ್ಭಿಣಿಯಾಗಿದ್ದ ರೋಜಾ ಅಸುನೀಗಿದ್ದು ಆಕೆಯ ಹೊಟ್ಟೆಯಲ್ಲಿದ್ದ ಮಗುವನ್ನು ಬಜಾವ್ ಮಾಡಲು ಮೆಗ್ಗಾನ್ ನಲ್ಲಿ ವೈದ್ಯರು ತುರ್ತು ಘಟಕ ವಿಭಾಗದಲ್ಲಿ ಶಸ್ತ್ರ ಚಿಕಿತ್ಸೆ ಮೂಲಕ ಪ್ರಯತ್ನ ಪಟ್ಟರಾದರೂ ಅಪಘಾತದ ತೀವ್ರತೆಗೆ ಮಗು ಗರ್ಭದಲ್ಲೇ ಸಾವನ್ನಪ್ಪಿತ್ತು.
ಚೇತನ್ ಮತ್ತು ಸುನೀತರನ್ನ ಮೆಗ್ಗಾನ್ ತುರ್ತು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಓಮ್ನಿ ಕಾರನ್ನ ಚಲಾಯಿಸುತ್ತಿದ್ದ ಧನಂಜರಿಗೆ ಕಾಲಿಗೆ ತೀವ್ರಗಾಯಗಳಾಗಿತ್ತು. ಪತಿ ಸಾವನ್ನಪ್ಪಿ ಒಂದು ಗಂಟೆಯ ನಂತರ ಪತ್ನಿ ರೋಜಾ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?