25ರಿಂದ ಶ್ರೀಕ್ಷೇತ್ರ ವರದಪುರ ಪ್ರವೇಶಕ್ಕೆ ಭಕ್ತರಿಗೆ ಅವಕಾಶ

ಮಧ್ಯಾಹ್ನ 2.30 ರಿಂದ 5 ಗಂಟೆವರೆಗಷ್ಟೇ ದರ್ಶನ

Team Udayavani, Jan 22, 2021, 6:46 PM IST

Sagara Varadapura, Shiavmogga

ಸಾಗರ: ಕೊರೊನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದ ಶ್ರೀಕ್ಷೇತ್ರ ವರದಪುರದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ಜ.25ರಿಂದ ಮಧ್ಯಾಹ್ನ 2.30ರ ನಂತರ ಭಗವಾನ್‌ ಸದ್ಗುರು ಶ್ರೀಧರ ಸ್ವಾಮಿಗಳ ಸನ್ನಿಧಾನ ದರ್ಶನಕ್ಕೆ ಅವಕಾಶ ಕಲ್ಪಿಸಲು ತಾಲೂಕಿನ ಶ್ರೀ ಶ್ರೀಧರ ಸೇವಾ ಮಹಾಮಂಡಲ ನಿರ್ಧರಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಮಹಾಮಂಡಲ, ಪ್ರತಿ ದಿನ ಮಧ್ಯಾಹ್ನ 2.30ರಿಂದ 5ರವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 5ರ ನಂತರ ಆಶ್ರಮದ ಪರಿಸರದಲ್ಲಿ ಸಿಬ್ಬಂದಿ ಮತ್ತು ಆಶ್ರಮವಾಸಿಗಳ ವಿನಃ ಸಾರ್ವಜನಿಕರ ಉಪಸ್ಥಿತಿಯನ್ನು ನಿಷೇ ಧಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ :  ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ: ಡಾ.ಕೆ.ಸುಧಾಕರ್

60 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷದ ಒಳಗಿನವರಿಗೆ ಆಶ್ರಮದ ಪ್ರವೇಶ ನಿರ್ಬಂಧಿ ಸಲಾಗಿದೆ. ಆಶ್ರಮಕ್ಕೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸಿ ಭೌತಿಕ ಅಂತರ ಕಾಪಾಡಬೇಕು. ಶ್ರೀಧರ ತೀರ್ಥದಲ್ಲಿ ಕೈಕಾಲು-ಮುಖ ತೊಳೆಯಲು ಮಾತ್ರ ಅವಕಾಶ ಇದೆ. ಸದ್ಯ ತೀರ್ಥಸ್ನಾನಕ್ಕೆ ಅವಕಾಶ ನೀಡಿಲ್ಲ. ಭಗವಾನರ ಸನ್ನಿಧಾನ ಮಂದಿರದ ಒಳಗೆ ಪ್ರವೇಶವಿರುವುದಿಲ್ಲ. ಮಂದಿರದ ಹೊರಗಿನಿಂದಲೇ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಂದಿರಕ್ಕೆ ಪ್ರದಕ್ಷಿಣೆ ಹಾಕುವುದು, ಮಂದಿರದ ಒಳಭಾಗದಲ್ಲಿ ಕುಳಿತುಕೊಳ್ಳುವುದು, ಭಜನೆ, ಸಂಗೀತ, ಜಪಾನುಷ್ಠಾನಗಳನ್ನು ತಾತ್ಕಾಲಿಕವಾಗಿ ನಿಷೇಧಿ ಸಲಾಗಿದೆ ಎಂದು ತಿಳಿಸಲಾಗಿದೆ.

ಸರ್ಕಾರದ ಆದೇಶದಂತೆ ತೀರ್ಥ-ಪ್ರಸಾದ, ಮಂತ್ರಾಕ್ಷತೆ ವಿನಿಯೋಗ, ಕಾಯಿ ಒಡೆಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ವರದಪುರದಲ್ಲಿ ವಸತಿ ಮುಂತಾದ ವ್ಯವಸ್ಥೆಗಳು ಇರುವುದಿಲ್ಲ. ಆಶ್ರಮದಲ್ಲಿರುವ ಕಾರ್ಯಾಲಯದ ಸೇವೆಗಳು ಲಭ್ಯವಿರುವುದಿಲ್ಲ. ಭಕ್ತರು ತಮ್ಮ ಪಾದರಕ್ಷೆ ಮುಂತಾದ ವಸ್ತುಗಳನ್ನು ತಮ್ಮ ವಾಹನಗಳಲ್ಲೇ ಇಡತಕ್ಕದ್ದು. ಆಶ್ರಮದ ಆವರಣದಲ್ಲಿ ವಾಹನ ಪ್ರವೇಶವನ್ನು ಕಡ್ಡಾಯವಾಗಿ ನಿಷೇ ಧಿಸಲಾಗಿದೆ. ಆಶ್ರಮಕ್ಕೆ ಪ್ರವೇಶಿಸುವ ಮುನ್ನ ಸ್ಯಾನಿಟೈಸರ್‌ ಕಡ್ಡಾಯವಾಗಿ ಉಪಯೋಗಿಸತಕ್ಕದ್ದು. ಆರೋಗ್ಯ ಸೇತು ಆ್ಯಪ್‌ ಹೊಂದಿರತಕ್ಕದ್ದು. ಆಧಾರ್‌ ಕಾರ್ಡ್‌ ತರತಕ್ಕದ್ದು ಹಾಗೂ ಸರ್ಕಾರವು ಕಾಲಕಾಲಕ್ಕೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸತಕ್ಕದ್ದು ಎಂದು ಶ್ರೀಧರ ಸೇವಾ ಮಹಾಮಂಡಲ ಷರತ್ತುಗಳನ್ನು ವಿಧಿಸಿದೆ.

ಕಳೆದ ವರ್ಷದ ಮಾ. 20ರಿಂದಲೇ ಕೊರೊನಾ ಹಿನ್ನೆಲೆಯಲ್ಲಿ ವರದಪುರದಲ್ಲಿ ಭಕ್ತರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಲವೆಡೆ ದೇವಾಲಯಗಳು ಆರಂಭಗೊಂಡಿದ್ದರೂ ಇಲ್ಲಿ ನಿರ್ಬಂಧ ಮುಂದುವರಿಸಲಾಗಿತ್ತು. ಸ್ಥಳೀಯರು ಹಾಗೂ ಪ್ರಭಾವಿಗಳಿಗೂ ಪ್ರವೇಶಾವಕಾಶ ಕೊಡದೆ ಅತಿ ಕಠಿಣವಾಗಿ ಕೋವಿಡ್‌ ನಿಯಮಗಳನ್ನು ಪಾಲಿಸಿರುವುದು ವಿಶೇಷ.

ಇದನ್ನೂ ಓದಿ : ಎಲ್ಲಾ ಬಗೆಯ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.