ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ,ತೊಟ್ಟಿಯಲ್ಲಿರುವ ಕಸದಂತಾಗಿದೆ ಅವರ ಪರಿಸ್ಥಿತಿ: ಈಶ್ವರಪ್ಪ
Team Udayavani, Apr 5, 2021, 1:10 PM IST
ಶಿವಮೊಗ್ಗ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಲೆಕ್ಕದಲ್ಲೂ ಇಲ್ಲ, ಬುಕ್ ನಲ್ಲೂ ಇಲ್ಲ. ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಅವರ ಪರಿಸ್ಥಿತಿ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು.
ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ ಸಂದರ್ಭ, ತಮ್ಮ ಮಾತು ಕೇಳಲಿಲ್ಲ ಎಂದು ನಾಲ್ಕು ದಿನ ಹೋಗಿ ರೆಸಾರ್ಟ್ ನಲ್ಲಿ ಕೂತಿದ್ದರು. ಸಿದ್ದರಾಮಯ್ಯ ಅವರಿಗೆ ಅನ್ಯಾಯವಾಗಿದೆ ಎಂದು ರಮೇಶ್ ಕುಮಾರ್ ಅವರೂ ಹೇಳಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಸ್ಥಿತಿ ಹೇಗಿದೆ ಅಂದರೆ ತೊಟ್ಟಿಯಲ್ಲಿರುವ ಕಸದಂತಾಗಿದೆ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಕೋವಿಡ್ : ಮುಂಬೈ ಆಯ್ತು ರಾಜಸ್ಥಾನದಲ್ಲೂ ರಾತ್ರಿ ಕರ್ಫ್ಯೂ ಜಾರಿ, 1ರಿಂದ 9ನೇ ತರಗತಿ ಬಂದ್
ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ:
ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಸಿದ್ದರಾಮಯ್ಯ ಅವರಿಗೆ ಹುಚ್ಚು ಹಿಡಿದಿದೆ. ಕರ್ನಾಟಕದಲ್ಲಿ ಇಷ್ಟೊಂದು ಅಭಿವೃದ್ಧಿ ಆಗುತ್ತಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಇದರಿಂದ ಸಿದ್ದರಾಮಯ್ಯ ಅವರಿಗೆ ತಲೆಕೆಟ್ಟು ಹೋಗಿದೆ ಎಂದು ಆರೋಪಿಸಿದರು.
ಬೆಂಗಳೂರಿಗೆ ಹೋಗಿ ಪಟ್ಟಿ ಕೊಡುತ್ತೇನೆ
ಅಧಿಕಾರಿಗಳು ಮಾತು ಕೇಳುತ್ತಿಲ್ಲ, ಸಚಿವರು ಮಾತು ಕೇಳುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಾಳೆಯೋ, ನಾಡಿದ್ದೋ ಬೆಂಗಳೂರಿಗೆ ಹೋಗುತ್ತೇನೆ. ಸ್ವಾತಂತ್ರ್ಯ ನಂತರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಏನೇನು ಆಗಿರಲಿಲ್ಲ, ಈಗ ಏನೇನು ಆಗಿದೆ ಅನ್ನುವದರ ಪಟ್ಟಿ ಕೊಡುತ್ತೇನೆ. ನಾವು, ನಮ್ಮ ಅಧಿಕಾರಿಗಳು ಏನೆಲ್ಲ ಕೆಲಸ ಮಾಡಿದ್ದೇವೆ ಎಂದು ತಿಳಿಸುತ್ತೇನೆ ಎಂದರು.
ಇದನ್ನೂ ಓದಿ: ಅಕ್ರಮ ಡಿನೋಟಿಫಿಕೇಶನ್ ಪ್ರಕರಣ: ಯಡಿಯೂರಪ್ಪ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ