ಎಸ್ಡಿಪಿಐ, ಪಿಎಫ್ಐ, ಆರ್ ಎಸ್ಎಸ್, ಭಜರಂಗದಳ ಯಾರೇ ಇರಲಿ..: ಸಿದ್ದರಾಮಯ್ಯ
Team Udayavani, Apr 24, 2022, 2:42 PM IST
ಶಿವಮೊಗ್ಗ: ಪಿಎಸ್ಐ ನೇಮಕಾತಿ ಅಕ್ರಮ ನಡೆದ ಕೇಂದ್ರ ಯಾರದ್ದೆಂದು ನೀವ್ಯಾರು ಹೇಳುವುದೇ ಇಲ್ಲ. ಕಾಂಗ್ರೆಸ್ ನವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬಾರದು. ಬಿಜೆಪಿಯವರು ಅವರ ತಪ್ಪಿನಿಂದ ಬಚಾವಾಗಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಸಂಸ್ಥೆ ಬಿಜೆಪಿಯವರಿಗೆ ಸೇರಿದ್ದು, ಆಕೆ ಮಹಿಳಾ ಮೋರ್ಚಾದವರು. ಆಕೆಯ ಗಂಡನನ್ನು ಬಂಧಿಸಿದ್ದಾರೆ. ಆಕೆ ತಲೆ ಮರೆಸಿಕೊಂಡಿದ್ದಾಳೆ. ಅಂತಹ ಸಂಸ್ಥೆಯಲ್ಲಿ ಕಾಂಗ್ರೆಸ್ ನವರು ಅಕ್ರಮ ಮಾಡಲು ಸಾಧ್ಯವೇ? ಯಾರೇ ಇರಲಿ, ತಪ್ಪಿತಸ್ಥರಿಗೆ ಶಿಕ್ಷೆ ಅಗಬೇಕು ಎಂದರು.
ಇದನ್ನೂ ಓದಿ:ಪಿಎಸ್ಐ ನೇಮಕ ಅಕ್ರಮ; ಹಿನ್ನೆಲೆಯೆಲ್ಲವೂ ಕಾಂಗ್ರೆಸ್ ಮಯ: ಸುನಿಲ್ ಕುಮಾರ್
ಹಿಜಾಬ್, ಹಲಾಲ್, ಆಜಾನ್ ಹುಟ್ಟು ಹಾಕಿದವರು ಯಾರು? ರಾಜ್ಯದಲ್ಲಿ ಅಶಾಂತಿ ಹುಟ್ಟು ಹಾಕಿದವರು ಯಾರು? ಧಾರ್ಮಿಕ ವಿಚಾರದ ಮೂಲಕ ಜನರ ಭಾವನೆ ಕೆರಳಿಸುತ್ತಿರುವುದು ಯಾರು? ಸಂಘ- ಪರಿವಾರದವರು ಮಾಡಿದ್ದಲ್ಲವೇ? ಸಮಾಜದಲ್ಲಿ ಶಾಂತಿ, ಭ್ರಾತೃತ್ವ ಹಾಳು ಮಾಡುತ್ತಿರುವುದ್ಯಾರು? ಬಿಜೆಪಿ, ಶ್ರೀರಾಮಸೇನೆ, ಬಜರಂಗದಳ, ಆರ್ ಎಸ್ಎಸ್, ಹಿಂದೂ ಮಹಾಸಭಾದವರೇ ಮಾಡುತ್ತಿರುವುದು. ಎಸ್ ಡಿಪಿಐ, ಪಿಎಫ್ಐ, ಆರ್ ಎಸ್ಎಸ್, ಭಜರಂಗದಳ ಯಾರೇ ಇರಲಿ,ಯಾರೇ ಹುಟ್ಟು ಹಾಕಿರಲಿ, ಅವರನ್ನು ಪತ್ತೆ ಹಚ್ಚಿ ತನಿಖೆ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ