
ಈಶ್ವರಪ್ಪನಂತಹ ಕಡು ಭ್ರಷ್ಟ ಮತ್ಯಾರೂ ಇಲ್ಲ: ಸಿದ್ದರಾಮಯ್ಯ
Team Udayavani, Nov 29, 2022, 6:30 AM IST

ಶಿವಮೊಗ್ಗ: ಈಶ್ವರಪ್ಪನಂತಹ ಕಡು ಭ್ರಷ್ಟ ಮತ್ಯಾರೂ ಇಲ್ಲ. ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರನಿಗೆ ಈಶ್ವರಪ್ಪ ಬಿಲ್ ಕೊಡಲಿಲ್ಲ. ಆತ ಆತ್ಮಹತ್ಯೆ ಮಾಡಿಕೊಂಡ. ಅವರದ್ದೇ ಪೊಲೀಸರಿಂದ ತನಿಖೆ ಮಾಡಿಸಿ, ಕೇಸ್ ಖುಲಾಸೆ ಮಾಡಿಸಿದ್ರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.
ನಗರದಲ್ಲಿ ಸೋಮವಾರ ಶರಾವತಿ ಮುಳುಗಡೆ ಸಂತ್ರಸ್ತರ ಕಾಂಗ್ರೆಸ್ ಜಾಗೃತಿ ಸಮಿತಿ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಮಾತನಾಡಿದರು.
ಪರೇಶ್ ಮೇಸ್ತಾ ಎಂಬ ಯುವಕ ಹೊನ್ನಾವರದಲ್ಲಿ ಸಹಜ ಸಾವಿಗೀಡಾದಾಗ ಅದು ಕೊಲೆ ಎಂದು ಹೇಳಿ ಇಡೀ ಕರಾವಳಿ ಜಿಲ್ಲೆಗಳಲ್ಲಿ ಹೋರಾಟ ಮಾಡಿ ಗೆಲ್ಲುವ ಪ್ರಯತ್ನ ಮಾಡಿದರು. ಆದರೆ ಸಿಬಿಐ ಬಿ ರಿಪೋರ್ಟ್ ಕೊಟ್ಟಿದೆ. ಈಶ್ವರಪ್ಪ ಪ್ರಕರಣದಲ್ಲಿ ಕೊಟ್ಟ ಬಿ ರಿಪೋರ್ಟ್ ಒಪ್ಪಿಕೊಳ್ಳುತ್ತಾರೆ. ಸಿಬಿಐ ವರದಿ ಒಪ್ಪಿಕೊಳ್ಳದೆ ಸಾಕ್ಷéನಾಶ ಆಗಿದೆ ಎಂದು ಹೇಳುವ ಈ ಬಿಜೆಪಿಯವರಿಗೆ ನಾಚಿಕೆಯಾಗಬೇಕು ಎಂದು ವಾಗ್ಧಾಳಿ ನಡೆಸಿದರು.
ನರೇಂದ್ರ ಮೋದಿ ಅವರು ” ನಾ ಖಾವೂಂಗಾ..ನಾ ಖಾನೇ ದೂಂಗಾ..’ ಎಂದರು. ಗುತ್ತಿಗೆದಾರರ ಸಂಘದ ಕೆಂಪಣ್ಣ ಕೊಟ್ಟ ದೂರಿಗೆ ಈವರೆಗೆ ಕ್ರಮ ತೆಗೆದುಕೊಳ್ಳಲು ಆಗಿಲ್ಲ. ಭ್ರಷ್ಟರಿಗೆ ಮೋದಿ ರಕ್ಷಣೆ ಕೊಡುತ್ತಿದ್ದಾರೆ. ಐಟಿ-ಇಡಿಯವರು ಹುಡುಕಿ ಹುಡುಕಿ ದಾಳಿ ಮಾಡುತ್ತಿದ್ದಾರೆ. ಬಿಜೆಪಿಯವರು ಪ್ರಾಮಾಣಿಕರು, ಸತ್ಯ ಹರಿಶ್ಚಂದ್ರರಾ? ಹೋಟೆಲ್ಗಳಲ್ಲಿ ತಿಂಡಿಗಳ ಲಿಸ್ಟ್ ಹಾಕುವಂತೆ ಲಂಚದ ಪಟ್ಟಿ ಹಾಕಿದ್ದಾರೆ. ಇಂತಹ ಸರಕಾರಗಳು ಉಳಿಯಬೇಕಾ ಎಂದು ಪ್ರಶ್ನಿಸಿದರು.
10 ಕೆ.ಜಿ ಉಚಿತ ಅಕ್ಕಿ : ನಾನು ನಾಲ್ಕು ಕೋಟಿ ಜನರಿಗೆ ಉಚಿತ ಅಕ್ಕಿ ಕೊಡಲು ಪ್ರಾರಂಭಿಸಿದೆ. ಅದು ಕೇಂದ್ರ ಸರಕಾರದ ಅಕ್ಕಿ ಎಂದು ಹೇಳುತ್ತಾರೆ. ಆಹಾರ ಭದ್ರತಾ ಕಾಯ್ದೆ ತಂದಿದ್ದು ಮನ್ಮೋಹನ್ ಸಿಂಗ್ ಸರಕಾರ. ವಾಜಪೇಯಿ, ಮೋದಿ ಸರಕಾರ ಅಲ್ಲ. ಬೊಮ್ಮಾಯಿಗೆ ಕೇಳ್ತಿನಿ.. ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶದಲ್ಲಿ ಉಚಿತ ಅಕ್ಕಿ ಏಕೆ ಕೊಡುತ್ತಿಲ್ಲ. ಏಳು ಕೆ.ಜಿ ಯಿಂದ ಐದು ಕೆಜಿಗೆ ಇಳಿಸಿದ ಇವರು ಬಡವರ ಪರವಾಗಿ ಇದ್ದಾರಾ..? ನಾನು ಮತ್ತೆ ಭರವಸೆ ಕೊಡ್ತೇನೆ. ಕಾಂಗ್ರೆಸ್ ಪಕ್ಷ ಅಧಿ ಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ಉಚಿತ ಕೊಡ್ತೇನೆ ಎಂದು ಭರವಸೆ ನೀಡಿದರು.
ಶರಾವತಿ ನದಿಗೆ ಅಣೆಕಟ್ಟೆ ಕಟ್ಟಿದ್ದರಿಂದ ಸಾವಿರಾರು ಜನ ಸಂತ್ರಸ್ತರಾಗಿದ್ದಾರೆ. 130 ಹಳ್ಳಿಗಳು ಮುಳುಗಡೆಯಾಗಿದ್ದವು. ಸಂತ್ರಸ್ತರಿಗೆ ಅರಣ್ಯ ಪ್ರದೇಶದಲ್ಲಿ ವಸತಿ ಕಲ್ಪಿಸಲಾಗಿತ್ತು. ಆದರೆ ಈ ಪ್ರದೇಶವನ್ನು ಬಿಡುಗಡೆಗೊಳಿಸಿ ಡಿ ನೋಟಿಫಿಕೇಷನ್ ಮಾಡಿಲ್ಲ.
-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ದೇವರದಾಸಿಮಯ್ಯ ಹಟಗಾರ ಜಗದ್ಗುರುಗಳ ಸಂಭ್ರಮದ ಪುರಪ್ರವೇಶ