ಸಿದ್ದರಾಮಯ್ಯ ಯಾವ ಕಾರಣಕ್ಕೂ ಕೋಲಾರದಲ್ಲಿ ಸ್ಪರ್ಧಿಸಲ್ಲ; ಮಾಡಿದರೂ..: ಈಶ್ವರಪ್ಪ


Team Udayavani, Mar 18, 2023, 12:24 PM IST

ಸಿದ್ದರಾಮಯ್ಯ ಯಾವ ಕಾರಣಕ್ಕೂ ಕೋಲಾರದಲ್ಲಿ ಸ್ಪರ್ಧಿಸಲ್ಲ; ಮಾಡಿದರೂ..: ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ ಯಾವ ಕಾರಣಕ್ಕೂ ಕೋಲಾರದಲ್ಲಿ ಸ್ಪರ್ಧೆ ಮಾಡುವುದಿಲ್ಲ. ಒಂದು ವೇಳೆ ಮಾಡಿದರೂ ಸೋಲುತ್ತಾರೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರಕ್ಕೆ ಬರಲಿ ಎಂದು ದಲಿತರು ಕಾಯುತ್ತಿದ್ದಾರೆ‌. ಅಲ್ಲಿ 61-62 ಸಾವಿರ ದಲಿತ ಮತಗಳಿವೆ. ಅದರಲ್ಲಿ ಪರಮೇಶ್ವರರನ್ನು ಸೋಲಿಸಿದ್ದು ಅವರಿಗೆ ನೆನಪಿದೆ. ಮುನಿಯಪ್ಪರನ್ನು ಇವರ ಶಿಷ್ಯರು ಸೋಲಿಸಿದ್ದು ನೆನಪಿದೆ. ಶ್ರೀನಿವಾಸ್ ಪ್ರಸಾದ್ ರನ್ನು ಪಕ್ಕಕ್ಕೆ ಸರಿಸಿದ ಸಿಟ್ಟು ದಲಿತ ಸಮಾಜಕ್ಕಿದೆ. ಜೊತೆಗೆ 40 ಸಾವಿರ ಒಕ್ಕಲಿಗ ವೋಟುಗಳಿವೆ. ಅವರೂ ಕಾಯುತ್ತಿದ್ದಾರೆ. ದೇವೆಗೌಡರಿಗೆ ಮಾಡಿದ ದ್ರೋಹ ಅವರಿಗೂ ಗೊತ್ತಿದೆ. ಇನ್ನು ಕುರುಬರ ವೋಟ್ ಗಳಿವೆ. ಅವರು ವರ್ತೂರು ಪ್ರಕಾಶ್ ಗೆ ಬೆಂಬಲ ಕೊಟ್ಟಿದ್ದಾರೆ. ಕೋಲಾರದಲ್ಲಿ ಅವರಿಗೆ ಉಳಿಯುವುದು ಮುಸ್ಲಿಂ ವೋಟುಗಳು ಮಾತ್ರ. ಹಾಗಾಗಿ ಕೋಲಾರದಲ್ಲಿ ನಿಲ್ಲಲ್ಲ. ನಿಂತರೂ ಸಿದ್ದರಾಮಯ್ಯ ಸೋಲುತ್ತಾರೆ ಎಂದರು.

ಇದನ್ನೂ ಓದಿ:ಅಂತರ್‌ ಜಾತಿ ಸಂಬಂಧಕ್ಕೆ ಮನೆಯವರ ವಿರೋಧ: ದೂರ ಹೋಗಿ ಮದುವೆಯಾದ ಖ್ಯಾತ ಯೂಟ್ಯೂಬರ್

ಚಾಮುಂಡೇಶ್ವರಿ, ಬಾದಾಮಿಯ ಜನರಿಗೂ ಅವರ ಹಣೆಬರಹ ಗೊತ್ತು. ಕಾಂಗ್ರೆಸ್ ನಲ್ಲಿ ಎಲ್ಲಿ ಬೇಕೋ ಅಲ್ಲಿ ತೀರ್ಮಾನ ಮಾಡುವ ಕೆಲವು ನಾಯಕರಿದ್ದಾರೆ. ಚುನಾವಣೆಯಲ್ಲಿ ಸೋತರೂ ವಿಶ್ವಾಸ ಪಡೆಯುವ ಕೆಲಸ ಮಾಡಬೇಕು ಎಂದು ಈಶ್ವರಪ್ಪ ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಷ್ಟ್ರದ್ರೋಹಿ ಸಂಘಟನೆಗಳೊಂದಿಗೆ ನೇರ ಹೊಂದಾಣಿಕೆ ಮಾಡುತ್ತಿದೆ. ಇದಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ರಾಜ್ಯದ ಜನರು ಗಮನಿಸಬೇಕು. ರಾಷ್ಟ್ರದ್ರೋಹಿ ಮುಸ್ಲಿಂ ಸಂಘಟನೆಗಳು ದೇಶದಲ್ಲಿ ಕೆಲಸ ಮಾಡುತ್ತಿವೆ. ಬಾಂಬ್ ಉತ್ಪಾದನೆ, ದೇಶದ್ರೋಹದ ಕೆಲಸಕ್ಕೆ ಯುವಕರಿಗೆ ಪ್ರಚೋದನೆ ಕೊಡುತ್ತಿವೆ. ರಾಜ್ಯದ ಪೊಲೀಸರು, ಗೃಹ ಇಲಾಖೆ ಹಲವರನ್ನು ಬಂಧಿಸಿದರು, ಕೆಲವರನ್ನು ಗಡಿಪಾರು ಮಾಡಿದರು. ಶಾಂತಿಯಿಂದ ಇದ್ದ ಶಿವಮೊಗ್ಗದಲ್ಲಿ ಹರ್ಷನ ಕೊಲೆ ಮಾಡಿದರು. ಸಾವರ್ಕರ್ ಫ್ಲೆಕ್ಸ್ ಹರಿದು, ಗಲಾಟೆ ಮಾಡಿದರು. ಮಂಗಳೂರು ಕುಕ್ಕರ್ ಬ್ಲಾಸ್ಟ್ ಆದಾಗ ಅಮಾಯಕನ ಬಂಧಿಸಿದರೆಂದು ಎಂದು ಡಿಕೆಶಿ ಹೇಳಿದ್ದರು. ಕಾಂಗ್ರೆಸ್ ನೀಚತನಕ್ಕೆ ಇಳಿದಿರುವ ಬಗ್ಗೆ ನಮಗೆ ಯಾವುದೇ ಅನುಮಾನ ಇಲ್ಲ. ಆದರೆ ಅದನ್ನು ನಾವು ಎದುರಿಸುತ್ತೇವೆ. ಈ ಕಾರಣಕ್ಕೆ ರಾಜ್ಯದ ಜನರು ದೇಶಭಕ್ತ ಬಿಜೆಪಿ ಸಂಘಟನೆ ಬೆಂಬಲಿಸಬೇಕು ಎಂದು ಈಶ್ವರಪ್ಪ ಹೇಳಿದರು.

ಅಧಿಕಾರಕ್ಕಾಗಿ ಇವರು ಯಾವ ಮಟ್ಟಕ್ಕೆ ಹೋಗುತ್ತಾರೆಂದು ರಾಜ್ಯದ ಜನರಿಗೆ ಇಂದು ಕಾಂಗ್ರೆಸ್ ನೋಡಿ ಆಶ್ಚರ್ಯ ಅಗುತ್ತಿದೆ. ರಾಷ್ಟ್ರದ್ರೋಹಿ ಕಾಂಗ್ರೆಸ್ ಪಕ್ಷವನ್ನು ದೇಶದ ಅನೇಕ ರಾಜ್ಯದಲ್ಲಿ ಜನರು ಮನೆ ಕಳುಹಿಸಿದ್ದಾರೆ. ಅದೇ ರೀತಿ ರಾಜ್ಯದಲ್ಲೂ ಬುದ್ದಿ ಕಲಿಸಿ ಎಂದು ಈಶ್ವರಪ್ಪ ಮನವಿ ಮಾಡಿದರು.

ಟಾಪ್ ನ್ಯೂಸ್

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.