ಸಿಗಂದೂರು : ಚಾಲಕನಿಗೆ ಫಿಟ್ಸ್ ಕಾಣಿಸಿಕೊಂಡು ಉರುಳಿದ ಟಿಟಿ
ಇಬ್ಬರಿಗೆ ತೀವ್ರ ತರದ ಗಾಯ
Team Udayavani, May 14, 2022, 5:35 PM IST
ಸಾಗರ: ತಾಲೂಕಿನ ಶರಾವತಿ ಹಿನ್ನೀರಿನ ತುಮರಿ ಸಮೀಪ ಸಿಗಂದೂರು ದೇವಾಲಯಕ್ಕೆ ಆಗಮಿಸಿದ ಬೆಂಗಳೂರಿನ ಬಿಡದಿ ಮೂಲದ ಪ್ರವಾಸಿಗರ ಟಿಟಿ ವಾಹನ ದೇವಾಲಯದ ಸಮೀಪವೇ ಅಪಘಾತವಾಗಿದೆ. ಇದ್ದಕ್ಕಿದ್ದಂತೆ ಟಿಟಿಯ ಚಾಲಕನಿಗೆ ಫಿಟ್ಸ್ ಬಂದ ಹಿನ್ನೆಲೆಯಲ್ಲಿ ಟಿಟಿ ನಿಯಂತ್ರಣ ತಪ್ಪಿ ಉರುಳಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಾಹನದಲ್ಲಿ 4 ಮಕ್ಕಳು ಸೇರಿ ಒಟ್ಟು 11 ಜನ ಇದ್ದು ಇಬ್ಬರಿಗೆ ಸ್ವಲ್ಪ ತೀವ್ರ ತರದ ಗಾಯಗಳಾಗಿವೆ. ಗಾಯಗೊಂಡವರಿಗೆ ತುಮರಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ದ್ವೀಪದಲ್ಲಿ ಸರ್ಕಾರ ಒದಗಿಸಿದ ಎರಡು ಆಂಬುಲೆನ್ಸ್ನಲ್ಲಿ ಒಂದು ಸಾಗರಕ್ಕೆ ತೆರಳಿದ್ದು, ಇನ್ನೊಂದು ಆರ್ಟಿಓ ದಾಖಲೆಗಳು ಪೂರ್ಣಗೊಳಿಸಿಲ್ಲದ ಕಾರಣ ಬಳಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಸಿಗಂದೂರು ದೇವಸ್ಥಾನದ ಆಂಬುಲೆನ್ಸ್ನ್ನೇ ಬಳಸುವಂತಾಗಿದೆ. ಇಂತಹ ಪರಿಸ್ಥಿತಿ ಪದೇ ಪದೆ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಜನಪ್ರತಿನಿಧಿಗಳು ಗಮನ ಹರಿಸಬೇಕಾದ ಅಗತ್ಯವಿದೆ ಎಂದು ತುಮರಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ಕರೂರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು