ಸರಳ ದಸರಾ ಆಚರಣೆಗೆ ನಿರ್ಧಾರ


Team Udayavani, Oct 16, 2020, 6:57 PM IST

sm-tdy-1

ಭದ್ರಾವತಿ: ಕೋವಿಡ್ ಕಾರಣ ಈ ಬಾರಿ ಮೆರವಣಿಗೆ ಇಲ್ಲದೆ ಒಂಬತ್ತು ದಿನಗಳ ಕಾಲ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸಲಾಗುವುದು ಎಂದು ಪೌರಾಯುಕ್ತ ಮನೋಹರ್‌ ಹೇಳಿದರು.

ಮಂಗಳವಾರ ನಗರಸಭೆಯ ಸರ್‌.ಎಂ.ವಿ. ಸಭಾಂಗಣದಲ್ಲಿ ನಗರದ ವಿವಿಧ ದೇವಾಲಯಗಳ ಸಮಿತಿ ಮತ್ತು ಅಧಿಕಾರಿಗಳ ಸಭೆಯಲ್ಲಿಮಾತನಾಡಿದ ಅವರು, ಅ. 17 ರಂದುಬೆಳಗ್ಗೆ 10.30 ಕ್ಕೆ ಗ್ರಾಮ ದೇವತೆಹಳದಮ್ಮ ದೇವಾಲಯದಲ್ಲಿ ನಿವೃತ್ತ

ಸೈನಿಕರು, ಕೋವಿಡ್ ವಾರಿಯರ್5 ಮಂದಿ ಸೇರಿದಂತೆ ಶ್ರೀದೇವತೆಗೆ ಮತ್ತು ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ. ಸಂಗಮೇಶ್ವರ್‌ ಚಾಲನೆ ನೀಡಲಿದ್ದಾರೆ.  ಹಳೇನಗರದ ಕನಕ ಮಂಟಪಮೈದಾನದಲ್ಲಿ ಅ. 26 ರಂದು ಸಂಜೆ 6 ಗಂಟೆಗೆ ನಡೆಯುವ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಗ್ರಾಮ ದೇವತೆಗಳಾದ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ, ಹಳದಮ್ಮ, ಕಾಳಿಕಾಂಬ ದೇವರುಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಿಜಯ ದಶಮಿಯಂದು ನಡೆಯುತ್ತಿದ್ದ ದೇವಾನುದೇವತೆಗಳ ಮೆರವಣಿಗೆ ಮತ್ತು ಸಾಂಸ್ಕೃತಿಕ ಮೇಳಗಳನ್ನು ಕೋವಿಡ್ ನಿಮಿತ್ತ ಈ ವರ್ಷ ರದ್ದುಪಡಿಸಲಾಗಿದೆ. ಜನರಲ್ಲಿ ಕೋವಿಡ್ ಕುರಿತಂತೆ ಜಾಗೃತಿ ಮೂಡಿಸುವ ಸಲುವಾಗಿ 9ದಿನಗಳ ಕಾಲ ಜಾಥಾನಡಿಗೆ, ಅನುಭವ-ಅನಿಸಿಕೆಗಳ ಜೊತೆಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಬನ್ನಿಮುಡಿಯುವ ಸ್ಥಳಕ್ಕೆ ಕೇವಲ ಪ್ರಮುಖ 100 ಜನರಿಗೆ ಮಾತ್ರ ಪಾಸ್‌ ನೀಡುವ ಮೂಲಕ ಅವಕಾಶ ಕಲ್ಪಿಸಲಾಗುವುದು ಎಂದರು.

ಕಂದಾಯಾಧಿಕಾರಿ ರಾಜಕುಮಾರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಇಇ ಶ್ರೀರಂಗರಾಜಪುರಿ, ಲೆಕ್ಕಾಧಿಕಾರಿ ಮಹಮ್ಮದ್‌ ಅಲಿ ಇದ್ದರು. ಸಭೆಯಲ್ಲಿ ನರಸಿಂಹಾಚಾರ್‌,ಶ್ರೀನಿವಾಸ್‌, ಕೃಷ್ಣಪ್ಪ, ಬಿ.ಕೆ. ಶ್ರೀನಾಥ್‌, ಹಾ. ರಾಮಪ್ಪ, ರಮಾಕಾಂತ್‌, ಸಂತೋಷ್‌ಕುಮಾರ್‌, ಮಂಜು, ಎನ್‌. ಕೃಷ್ಣಮೂರ್ತಿ ಮತ್ತಿತರರು ಇದ್ದರು.

ಗೋಮಾಳ ಒತ್ತುವರಿ: ಕ್ರಮಕ್ಕೆ  ಆಗ್ರಹ

ಸಾಗರ: ತಾಲೂಕಿನ ಕಸಬಾ ಹೋಬಳಿ ನಾಡಕಲಸಿಗ್ರಾಪಂ ವ್ಯಾಪ್ತಿಯ ಬಾಳಗೋಡು ಗ್ರಾಮದ ಸೊಪ್ಪಿನ ಬೆಟ್ಟ ಅತಿಕ್ರಮಣ ಮಾಡುತ್ತಿರುವುದು ಹಾಗೂ ಸರ್ಕಾರಿ ಗೋಮಾಳ ಒತ್ತುವರಿ ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಬಾಳಗೋಡು ಗ್ರಾಮಸ್ಥರು ಉಪ ವಿಭಾಗಾ ಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು.

ಬಾಳಗೋಡು ಗ್ರಾಮದ ಸರ್ವೇ ನಂ. 5ರಲ್ಲಿ 136.17 ಎಕರೆ ಸರ್ಕಾರಿ ಸೊಪ್ಪಿನ ಬೆಟ್ಟ ಪ್ರದೇಶವಿದ್ದು,ಅದನ್ನು ಗ್ರಾಮಸ್ಥರಾದ ನಾವು ಲಾಗಾಯ್ತಿನಿಂದ ಸಂರಕ್ಷಣೆ ಮಾಡಿಕೊಂಡು ಬರುತ್ತಿದ್ದೇವೆ. ಇತ್ತೀಚೆಗೆ ಪಕ್ಕದ ಗ್ರಾಮದ ಕೆಲವರು ಸೊಪ್ಪಿನ ಬೆಟ್ಟವನ್ನು ಒತ್ತುವರಿ ಮಾಡಿ ಅಲ್ಲಿರುವ ಮರಗಿಡಗಳನ್ನು ಕಡಿದು ಕೃಷಿ ಮಾಡುತ್ತಿದ್ದಾರೆ. ನೈಸರ್ಗಿಕವಾದ ಸೊಪ್ಪಿನ ಬೆಟ್ಟವನ್ನು ನಾಶ ಮಾಡುತ್ತಿರುವ ಅತಿಕ್ರಮಣದಾರರು ಭೂಕಬಳಿಕೆ ಮಾಡುತ್ತಿದ್ದಾರೆ.ಸೊಪ್ಪಿನ ಬೆಟ್ಟವು ಸರ್ಕಾರಿ ಜಾಗವಾಗಿದ್ದು ಗ್ರಾಮಸ್ಥರ  ಹಕ್ಕಿನ ಆಸ್ತಿಯಾಗಿದೆ. ಕಂದಾಯ ಇಲಾಖೆ ಸೊಪ್ಪಿನಬೆಟ್ಟ ರಕ್ಷಣೆ ಮಾಡುವ ನಿಟ್ಟಿನಲ್ಲಿ ಅತಿಕ್ರಮಣವನ್ನು ತೆರವುಗೊಳಿಸಿ ಒತ್ತುವರಿದಾರರ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಗ್ರಾಮಸ್ಥರಾದ ಶಿವಕುಮಾರ್‌, ದಾನಶೇಖರ ಗೌಡ, ಮೋಹನ್‌ ಗೌಡ, ದೇವರಾಜ್‌ ಗೌಡ, ಶೇಖರಪ್ಪ ಬಾಳಗೋಡು, ಅಮೃತೇಶ್ವರ, ಶಶಿಧರ ಗೌಡ, ರಾಜಶೇಖರ್‌, ಪುಟ್ಟರಾಜ್‌, ಪ್ರವೀಣ್‌, ರಮೇಶ್‌, ನ್ಯಾಯವಾದಿ ಕೆ.ವಿ. ಪ್ರವೀಣಕುಮಾರ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

ನನ್ನ ಆರೋಪಗಳಿಗೆ ಬಿಎಸ್‌ವೈ ಪ್ರತಿಕ್ರಿಯೆ ನೀಡಲೇ ಬೇಕು: ಈಶ್ವರಪ್ಪ

ನನ್ನ ಆರೋಪಗಳಿಗೆ ಬಿಎಸ್‌ವೈ ಪ್ರತಿಕ್ರಿಯೆ ನೀಡಲೇ ಬೇಕು: ಈಶ್ವರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.