ನಾಗರ ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಉರಗ ರಕ್ಷಕ!
Team Udayavani, Sep 30, 2022, 12:12 PM IST
ಶಿವಮೊಗ್ಗ: ನಾಗರ ಹಾವೊಂದಕ್ಕೆ ಮುತ್ತಿಡಲು ಹೋಗಿ ಉರಗ ರಕ್ಷಕನೊಬ್ಬ ತುಟಿಗೆ ಕಚ್ಚಿಸಿಕೊಂಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ ಅಲೆಕ್ಸ್ ಎಂಬವರೇ ನಾಗರಹಾವಿನಿಂದ ಕಚ್ಚಿಸಿಕೊಂಡವರು. ಹಾವನ್ನು ಹಿಡಿದು ಅದಕ್ಕೆ ಮುತ್ತಿಡಲು ಮುಂದಾಗಿದ್ದ ತಕ್ಷಣ ಹಾವು ತಿರುಗಿ ತುಟಿಗೆ ಕಚ್ಚಿದೆ.
ಭದ್ರಾವತಿಯ ಅಲೆಕ್ಸ್ ಹಾಗೂ ರೋನಿ ಎಂಬುವರು ಉರಗ ರಕ್ಷಣೆಯಲ್ಲಿ ತೊಡಗಿಕೊಂಡಿದ್ದು, ಇತ್ತೀಚೆಗೆ ಭದ್ರಾವತಿಯ ಬೊಮ್ಮನಕಟ್ಟೆ ಮದುವೆ ಮನೆಯಲ್ಲಿ ಎರಡು ನಾಗರ ಹಾವುಗಳು ಒಟ್ಟಿಗೆ ಕಾಣಿಸಿಕೊಂಡಿವೆ. ಈ ವೇಳೆ ಹಾವು ಹಿಡಿದು ಅಲೆಕ್ಸ್ ಎಂಬಾತ ಅದಕ್ಕೆ ಮುತ್ತು ಕೊಡಲು ಮುಂದಾಗಿದ್ದಾನೆ. ಈ ವೇಳೆ ಹಾವು ತಿರುಗಿ ತುಟಿಗೆ ಕಚ್ಚಿದೆ. ನಂತರ ಹಾವುಗಳನ್ನು ಕಾಡಿಗೆ ಬಿಟ್ಟು ಭದ್ರಾವತಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ.
ಇದನ್ನೂ ಓದಿ:ಚಿಕ್ಕಬಳ್ಳಾಪುರ: ಲೋಕಾಯುಕ್ತ ಅಧಿಕಾರಿಯ ಸೋಗಿನಲ್ಲಿ ತಾಲೂಕು ಕಚೇರಿಗೆ ಹೋಗಿದ್ದ ವ್ಯಕ್ತಿ ಬಂಧನ
ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆ ಪಡೆದು ಮನೆಗೆ ವಾಪಾಸ್ ಆಗಿರುವ ಅಲೆಕ್ಸ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇದರ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು