ಗೃಹಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರದಲ್ಲಿ ಮಣ್ಣು ಮಾಫಿಯಾ..!
Team Udayavani, Jan 9, 2022, 11:25 AM IST
ತೀರ್ಥಹಳ್ಳಿ: ತಾಲ್ಲೂಕು ವ್ಯಾಪ್ತಿಯಲ್ಲಿ ಕಲ್ಲು, ಮರಳು,ಅಕ್ರಮ ಸಾಗಾಟ ಜೋರಾಗಿ ನಡೆಯುತ್ತಿದೆ.
ಇದೀಗ ಭೂಗರ್ಭ ತೋಡಿ ಮಣ್ಣು ಮಾಫಿಯಾಕ್ಕೆ ಲಗ್ಗೆ ಇಟ್ಟಿರುವ ಅಕ್ರಮಕೋರರು ತಾಲ್ಲೂಕಿನಾದ್ಯಂತ ಕಂದಾಯ ಅರಣ್ಯ ಭೂಮಿ ಜಾಗ ಕಂಡಕಂಡಲ್ಲಿ ಮಣ್ಣು ತೆಗೆದು ಯಾವುದೇ ಪರವಾನಿಗೆ ಇಲ್ಲದೆ ರಾಜಾರೋಷವಾಗಿ ಅಕ್ರಮ ಲೇಔಟ್ ಗೆ ಲಾರಿಗಳಲ್ಲಿ ತಂದು ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆ ಬದಿಗಳಲ್ಲಿ ಸುರಿದು ಅಕ್ರಮವಾಗಿ ಲೇಔಟ್ ನಿರ್ಮಾಣ ಮಾಡುತ್ತಿದ್ದರೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಕಣ್ಣು ಕಾಣದಂತೆ ವರ್ತಿಸುತ್ತಿದ್ದಾರೆ.
ಕುಶಾವತಿ ಭಾಗದಲ್ಲಿ ವೀಕೆಂಡ್ ಕರ್ಫ್ಯೂ ವೇಳೆ ತುಂಗಾ ನದಿ ದಡದಲ್ಲಿ ಲೇಔಟ್ ನಿರ್ಮಾಣ ಮಾಡುವವರು ಯಾವುದೇ ಪರವಾನಗಿ ಪಡೆಯದೇ ಅಕ್ರಮವಾಗಿ ಮಣ್ಣನ್ನು ತಂದು ನದಿ ದಡ ಪಾತ್ರಕ್ಕೆ ಸುರಿಯುತ್ತಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ತಾಲ್ಲೂಕು ಆಡಳಿತದ ಅಧಿಕಾರಿಗಳು ತಡೆದು ಕ್ರಮ ಕೈಗೊಂಡಿದ್ದಾರೆ.
ತಾಲ್ಲೂಕಿನಲ್ಲಿ ಇತ್ತೀಚೆಗೆ ಇದೇ ರೀತಿ ಕಾನೂನು ಬಾಹಿರ ಮಣ್ಣುಗಳನ್ನು ತೆಗೆದು ಅಕ್ರಮ ಲೇಔಟ್ ನಿರ್ಮಾಣ ಮಾಡುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾನೂನು ನಿಯಮ ಮೀರಿ ಯಂತ್ರಗಳನ್ನು ಬಳಸಿ ತೆಗೆಯುವುದು ಸಾವಿರಾರು ಲೋಡ್ ಮಣ್ಣು ತಂದು ಲೇಔಟ್ ನಿರ್ಮಾಣ ಮಾಡುತ್ತಿದ್ದು ಈ ಬಗ್ಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಭೂ ವಿಜ್ಞಾನ ಅಧಿಕಾರಿಗಳ ಗಮನಕ್ಕೆ ಬಂದರೂ ಮಣ್ಣು ಸವಕಳಿಯಾಗದಂತೆ ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಿರುವುದು ನೋಡಿದರೆ ಪರೋಕ್ಷವಾಗಿ ಈ ಮಣ್ಣು ಮಾಫಿಯಾದವರ ಜೊತೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಸಚಿವರ ಕ್ಷೇತ್ರದಲ್ಲಿ ಈ ರೀತಿ ಮಣ್ಣು ಮಾಫಿಯಾ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕಿದೆ ಎಂದು ಪಟ್ಟಣದ ಜನರ ಮಾತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ